Ad Widget

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ 2 ವಿದ್ಯಾರ್ಥಿಗಳು ಕರ್ನಾಟಕ ಬ್ಯಾಂಕ್ ಹುದ್ದೆಗೆ ಆಯ್ಕೆ.

ಪುತ್ತೂರು : ಕರ್ನಾಟಕ ಬ್ಯಾಂಕ್ ಕ್ಲರಿಕಲ್ ಹುದ್ದೆಗಳಿಗೆ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಉದ್ಯೋಗಕ್ಕೆ ಆಯ್ಕೆಗೊಂಡಿರುತ್ತಾರೆ.

. . . . . . . . .

ಶ್ರೀ ಮಹೇಶ್ ಕೆ ಎಂ ರವರು ಪುತ್ತೂರಿನ ನಿವಾಸಿಯಾಗಿದ್ದು , ಶ್ರೀ ಶ್ರೀವತ್ಸ ಭಾರದ್ವಾಜ್ ರವರು ಸುಳ್ಯದ ನಿವಾಸಿಯಾಗಿರುತ್ತಾರೆ. ಇವರು ಪ್ರತಿಷ್ಠಿತ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಯನ್ನು ಪಡೆದಿರುತ್ತಾರೆ.

. . . . . . .

ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ ಹೆಸರುವಾಸಿಯಾದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯು 2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿದೆ. ಬ್ಯಾಂಕಿಂಗ್ ಕ್ಷೇತ್ರ, ಸಹಕಾರ ಕ್ಷೇತ್ರ, ಕೇಂದ್ರ ಹಾಗು ರಾಜ್ಯ ಸರಕಾರದ ಅಡಿಯಲ್ಲಿ ಬರುವ ಅನೇಕ ಹುದ್ದೆಗಳನ್ನು ಈ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅಲಂಕರಿಸಿರುವುದು ಪುತ್ತೂರಿಗೆ ಹೆಮ್ಮೆಯ ವಿಷಯ.

ಪ್ರತಿ ವಿದ್ಯಾರ್ಥಿಯೊಂದಿಗೆ ನಿರಂತರ ಸಂಪರ್ಕವನ್ನಿರಿಸಿ, ಅವರನ್ನು ಉದ್ಯೋಗದತ್ತ ಕೊಂಡೊಯ್ಯುವುದು ಈ ಶಿಕ್ಷಣ ಸಂಸ್ಥೆಯ ಧೇಯವಾಗಿದ್ದು ಸರಕಾರಿ ಹಾಗು ಖಾಸಗಿ ಉದ್ಯೋಗಗಳ ಮಾಹಿತಿಯನ್ನು ನಿರಂತರವಾಗಿ ಪ್ರತಿ ಉದ್ಯೋಗಾಕಾಂಕ್ಷಿಗಳಿಗೂ ಮೆಸೇಜುಗಳ ಮೂಲಕ ತಲುಪಿಸುವುದು ಈ ಶಿಕ್ಷಣ ಸಂಸ್ಥೆಯ ವೈಶಿಷ್ಟ್ಯತೆ .

ಪ್ರತಿದಿನದ ಹಾಗು ವಾರಾಂತ್ಯದ ಬ್ಯಾಚುಗಳು ಲಭ್ಯವಿದ್ದು (ಆನ್ಲೈನ್/ ಆಫ್ಲೈನ್), ಆಸಕ್ತರು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ದೂರವಾಣಿ ಸಂಖ್ಯೆ 9632320477 / 9945988118 ನ್ನು ಸಂಪರ್ಕಿಸಬಹುದು ಬಹುದು ಎಂದು ಸಂಸ್ಥೆ ಪ್ರಕಟಣೆ ನೀಡಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading