Ad Widget

ನರಿಮೊಗರು : ಪ್ರಸಾದಿನೀ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ
ಉಚಿತ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರ
ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ , ಪಾದೆ , ನರಿಮೊಗರು ಇದರ ಆಶ್ರಯದಲ್ಲಿ ಹಾಗೂ ವೈದ್ಯರತ್ನಮ್ ಔಷಧಶಾಲಾ ಪ್ರೈವೆಟ್ ಲಿಮಿಟೆಡ್ ಇದರ ಸಹಯೋಗದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಪ್ರೊಫೆಸರ್ ಹಾಗೂ ಆಸ್ಪತ್ರೆಯ ಆಡಳಿತ ನಿರ್ದೇಶಕ ಆಗಿರುವ ಖ್ಯಾತ ಆಯುರ್ವೇದ ತಜ್ಞವೈದ್ಯ ,ಆಯುರ್ವೇದ ಧನ್ವಂತರಿ ಡಾ . ರಾಘವೇಂದ್ರ ಪ್ರಸಾದ್ ಬಂಗಾರಡ್ಕ .B.A.M.S., M.S.(Ayu) ಇವರಿಂದ , ಉಚಿತ ಆಯುರ್ವೇದೀಯ ಅರೋಗ್ಯ ತಪಾಸಣಾ ಶಿಬಿರವು ದಿನಾಂಕ 11-7-2024, ಗುರುವಾರದಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1.30 ರವರೆಗೆ ,ಪ್ರಸಾದಿನೀ ಅಯುರ್ನಿಕೇತನ ಆಯುರ್ವೇದ ಆಸ್ಪತ್ರೆ , ಗ್ರಾಮಪಂಚಾಯತ್ ಸಮೀಪ , ನರಿಮೊಗರು ಇಲ್ಲಿ ಜರುಗಲಿರುವುದು . ಸಕ್ಕರೆ ಪರೀಕ್ಷೆ , ರಕ್ತದೊತ್ತಡ ಪರೀಕ್ಷೆಗಳನ್ನು ನಡೆಸುವುದಲ್ಲದೆ ಆಯ್ದ ಔಷಧಿಗಳನ್ನು ಕೂಡಾ ಉಚಿತವಾಗಿ ನೀಡಲಾಗುವುದು.‌

ದೀಪ ಪ್ರಜ್ವಲನ ಮತ್ತು ಉದ್ಘಾಟನೆಯನ್ನು ಡಾ .ಸೀತಾರಾಮ ಭಟ್ ಕಲ್ಲಮ (ವೈದ್ಯರು ಹಾಗೂ ಆಡಳಿತ ವ್ಯವಸ್ಥಾಪಕರು , ಕಲ್ಲಮ ರಾಘವೇಂದ್ರ ಮಠ ) ಇವರು ನೆರವೇರಿಸಲಿರುವರು .
ವಿಶೇಷ ಆಹ್ವಾನಿತರಾಗಿ ಶ್ರೀಮತಿ ಹರಿಣಿ (ಅಧ್ಯಕ್ಷರು, ನರಿಮೊಗರು ಗ್ರಾಮಪಂಚಾಯತ್ ),ಶ್ರೀ ಚಂದ್ರಶೇಖರ್ ಸರ್ವೇದೋಳಗುತ್ತು (ಅಧ್ಯಕ್ಷರು, ಮುಂಡೂರು ಗ್ರಾಮಪಂಚಾಯತ್ ),ಶ್ರೀ ಸುಧಾಕರ ಕುಲಾಲ್ (ಅಧ್ಯಕ್ಷರು , ನರಿಮೊಗರು ಯುವಕ ಮಂಡಲ ),ಶ್ರೀ ನವೀನ್ (ಅಧ್ಯಕ್ಷರು , ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ , ನರಿಮೊಗರು ),ಶ್ರೀ ಭಾಸ್ಕರ ಆಚಾರ್ ಹಿಂದಾರು (ಸಂಚಾಲಕರು , ಸಾಂದೀಪನಿ ವಿದ್ಯಾಸಂಸ್ಥೆಗಳು , ನರಿಮೊಗರು ),ಶ್ರೀಮತಿ ಗುರುಪ್ರಿಯಾ ನಾಯಕ್ (ಅಧ್ಯಕ್ಷರು, ನರಿಮೊಗರು ಯುವತಿ ಮಂಡಲ ) ಇವರು ಉಪಸ್ಥಿತರಿರುವರು .ವಿವರಗಳಿಗೆ ಮೊಬೈಲ್ ಸಂಖ್ಯೆ 89044 74122 ಕ್ಕೆ ಬೆಳಿಗ್ಗೆ 9ರಿಂದ ಸಂಜೆ 4ರ ಒಳಗೆ ಕರೆ ಮಾಡಿ .” ಆರೋಗ್ಯಕ್ಕಾಗಿ ಆಯುರ್ವೇದ” ಎಂಬ ಘೋಷವಾಕ್ಯದಡಿಯಲ್ಲಿ ಈ ಶಿಬಿರ ಹಮ್ಮಿಕೊಳ್ಳಲಾಗಿದ್ದು , ಮಧುಮೇಹ (ಸಕ್ಕರೆ ಕಾಯಿಲೆ ), ರಕ್ತದೊತ್ತಡ (ಹೈಪರ್ಟೆನ್ಶನ್ ), ವಾತದಿಂದ ಬರುವ ಸಂಧಿವಾತ , ಗಂಟುನೋವು , ಸೊಂಟನೋವುಗಳಿಗೆ ನಾಡೀ ಪರೀಕ್ಷೆಯ ಮೂಲಕ ಆಯುರ್ವೇದ ರೀತಿಯಲ್ಲಿ ಶಾಶ್ವತ ಪರಿಹಾರ ಸೂಚಿಸಲಾಗುವುದು . ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಲು ಆಯೋಜಕರು ವಿನಂತಿಸಿಕೊಂಡಿದ್ದಾರೆ .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!