Ad Widget

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪೂರ್ವಾಧ್ಯಕ್ಷರನ್ನು  ಭೇಟಿಯಾದ ನೂತನ ಅಧ್ಯಕ್ಷರು ಹಾಗೂ ಸದಸ್ಯರ ತಂಡ 

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಕೊಲ್ಯದ ಗಿರೀಶ್ ಇವರನ್ನು ಅರೆಭಾಷೆ ಅಕಾಡೆಮಿಯ ನೂತನ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಇಂದು ಅವರ ಕಚೇರಿಯಲ್ಲಿ‌ ಭೇಟಿ ನೀಡಿ ಮಾತುಕತೆ ನಡೆಸಿತು.
ಈ ಸಂದರ್ಭದಲ್ಲಿ ಅಕಾಡೆಮಿಯ ಮುಂದಿನ ಕಾರ್ಯಗಳು‌ ಹಾಗೂ ಚಟುವಟಿಕೆಗಳ ಬಗ್ಗೆ‌ ಚರ್ಚಿಸಲಾಯಿತು.
ತಂಡದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ಹಾಗೂ ಸದಸ್ಯರುಗಳಾದ ಶ್ರೀ ಚಂದ್ರಶೇಖರ್ ಪೇರಾಲು,  ಶ್ರೀಮತಿ ಚಂದ್ರಾವತಿ ಬಡ್ಡಡ್ಕ, ಶ್ರೀಮತಿ ಲತಾ ಪ್ರಸಾದ್ ಕುತ್ಪಾಜೆ ಉಪಸ್ಥಿತರಿದ್ದರು. ಇದೊಂದು ಸೌಹಾರ್ದ ಭೇಟಿಯಾಗಿತ್ತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!