Ad Widget

ಹಳೆಗೇಟಿನ ವಿಜಯ್ ಕುಮಾರ್ ರವರಿಗೆ ಪಾಂಬಾರು ಆ‌ರ್.ಪಿ. ಕಲಾ ಸೇವಾ ಟ್ರಸ್ಟ್‌ ವತಿಯಿಂದ ಗಾನ ಚತುರ ಪ್ರಶಸ್ತಿ ಪ್ರದಾನ

ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್ ನಲ್ಲಿ ಗುಮಾಸ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಹಳೆಗೇಟಿನ ವಿಜಯ್ ಕುಮಾರ್ ರವರಿಗೆ ಪಾಂಬಾರು ಆರ್.ಪಿ ಕಲಾ ಸೇವಾ ಟ್ರಸ್ಟ್‌ ವತಿಯಿಂದ ಗಾನ ಚತುರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ಹಲವಾರು ವೇದಿಕೆಗಳಲ್ಲಿ ಸಂಗೀತ ರಸಮಂಜರಿ ನೀಡುತ್ತಿದ್ದು ಹಾಗೂ ಫೇಸ್ ಬುಕ್ ಲೈವ್ ಸಂಗೀತ ಕಾರ್ಯಕ್ರಮದಲ್ಲೂ ಭಾಗವಹಿಸಿರುವ ಇವರ ಸಂಗೀತ ಸಾಧನೆ ಹಾಗೂ ಆಸಕ್ತಿಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.

ಪೆರ್ಲಂಪಾಡಿಯ ಅಂಬೇಡ್ಕ‌ರ್ ಭವನದಲ್ಲಿ ಜು.21 ರಂದು ನಡೆದ ಗ್ರಾಂಡ್ ಫಿನಾಲೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಹಲವಾರು ಜನ ಗಣ್ಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!