Ad Widget

ತಾಲೂಕು ಮಟ್ಟದ ಕ್ರೀಡಾಕೂಟ- ಪೂರ್ವಭಾವಿ ಸಭೆ


ಜು. 20ನೇ ಶನಿವಾರದಂದು ಸರಕಾರಿ ಪ್ರೌಢಶಾಲೆ ಎಲಿಮಲೆ ಸುಳ್ಯ ತಾಲೂಕು ದ.ಕ. ಇಲ್ಲಿ 2024-25ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟವನ್ನು ಆಯೋಜಿಸುವ ಬಗ್ಗೆ ಪೂರ್ವಭಾವಿ ಸಭೆಯು ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶೈಲೇಶ್ ಅಂಬೆಕಲ್ಲುರವರ ಅಧ್ಯಕ್ಷತೆಯಲ್ಲಿ ನಡೆಯಿತು.
       ಸಭೆಯಲ್ಲಿ ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷರಾಗಿ ಶ್ರೀ ವಿಷ್ಣು ಭಟ್ ಮತ್ತು ಕಾರ್ಯದರ್ಶಿಯಾಗಿ ಶ್ರೀ ರಂಜಿತ್ ಅಂಬೆಕಲ್ಲು ಇವರು ಆಯ್ಕೆಯಾದರು. ಈ ಸಂದರ್ಭ ಕ್ರೀಡಾಕೂಟದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಿ ಸಂಚಾಲಕರು ಮತ್ತು ಸದಸ್ಯರನ್ನು ಆಯ್ಕೆ ಮಾಡಲಾಯಿತು.
         ವೇದಿಕೆಯಲ್ಲಿ ಎಸ್ ಡಿ  ಎಮ್ ಸಿ ಅಧ್ಯಕ್ಷರಾದ ಶ್ರೀ ಧನಂಜಯ ಬಾಳೆತೋಟ, ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ದುರ್ಗಾದಾಸ್ ಮೆತ್ತಡ್ಕ ಮತ್ತು ಪ್ರಶಾಂತ್ ಮೆದು, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಕೃಷ್ಣಯ್ಯ ಮೂಲೆತೋಟ, ಜ್ಞಾನದೀಪ ವಿದ್ಯಾಸಂಸ್ಥೆಯ ಸಂಚಾಲಕರಾದ  ಶ್ರೀ ಎ ವಿ ತೀರ್ಥರಾಮ,  ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಕಿರಣ್ ಗುಡ್ಡೆಮನೆ, ಕಾರ್ಯದರ್ಶಿ ಶ್ರೀ ಜಯಂತ ತಳೂರು, ಎಸ್ ಡಿ ಎಂ ಸಿ ಯ ನಿಕಟಪೂರ್ವ ಅಧ್ಯಕ್ಷರಾದ ಪುರುಷೋತ್ತಮ ಕಜೆ, ಜಯಂತ ಹರ್ಲಡ್ಕ, ಜ್ಞಾನದೀಪ  ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕರಾದ ಗದಾಧರ ಬಾಳುಗೋಡು , ಜೊತೆ ಕಾರ್ಯದರ್ಶಿ ಜೀವನ್ ತಳೂರು ಉಪಸ್ಥಿತರಿದ್ದರು.  ಸಭೆಯಲ್ಲಿ ಹಿರಿಯ ವಿದ್ಯಾರ್ಥಿಗಳು, ಪೋಷಕರು, ವಿದ್ಯಾಭಿಮಾನಿಗಳು ಹಾಗೂ ದೈಹಿಕ ಶಿಕ್ಷಕ ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಕೆ  ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿಯಾದ ಶ್ರೀಮತಿ ತಿರುಮಲೇಶ್ವರಿ ಯು. ಎಸ್.  ವಂದನೆಯನ್ನು ಸಲ್ಲಿಸಿದರು. ಮುರಳೀಧರ ಪುನುಕುಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!