Ad Widget

ಪೆರಾಜೆಯ ಯುವಕ ನಾಪತ್ತೆ, ಮನೆಯವರಿಂದ ಪೋಲೀಸ್ ದೂರು

ಪೆರಾಜೆ ಗ್ರಾಮದ ಬಂಗಾರಕೋಡಿ ದರ್ಬೆಮಜಲಿನ ಯುವಕನೋರ್ವ ಮನೆಗೆ ಹಿಂತಿರುಗದೆ ಮನೆಯವರಿಗೆ ದೂರವಾಣಿ ಸಂಪರ್ಕಕ್ಕೂ ಸಿಗದ ಹಿನ್ನೆಯಲ್ಲಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ನೀಡಿದ ಘಟನೆ ವರದಿಯಾಗಿದೆ.

ಪೆರಾಜೆಯ ಬಂಗಾರಕೋಡಿ ದರ್ಬೆಮಜಲಿನ ಚಂದ್ರಶೇಖರ ಹಾಗೂ ಶ್ರೀಮತಿ ಅನಂತೇಶ್ವರಿ ಎಂಬವರ ಪುತ್ರ ಶಿವರಾಜ್ ಕುಮಾರ್ ಜ.26ರಂದು ಮನೆಯಿಂದ ಹೋದವರು ಮನೆಗೆ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ.
ಶಿವರಾಜ್ ಕುಮಾರ್ ಅವರಿಗೆ 35 ವರ್ಷ ವಯಸ್ಸಾಗಿದ್ದು, ಅವಿವಾಹಿತರಾಗಿದ್ದಾರೆ.
ಕನ್ನಡ, ತುಳು, ಅರೆಭಾಷೆ, ಮಲೆಯಾಳಂ ಭಾಷೆ ಮಾತನಾಡುವ ಶಿವರಾಜ್ ಕುಮಾರ್ ಅವರು ಲಾರಿ ಚಾಲಕರಾಗಿ ದುಡಿಯುತ್ತಿದ್ದು, ಮಗ ನಾಪತ್ತೆಯಾಗಿರುವ ಕುರಿತು ಅವರ ತಂದೆ ಚಂದ್ರಶೇಖರ ಅವರು ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!