Ad Widget

ಸುಳ್ಯ : ಸರಕಾರಿ ಆಸ್ಪತ್ರೆಯ ಅಡುಗೆ ಸಿಬ್ಬಂದಿ ವೆಂಕಟ್ರಮಣ ಬೇರ್ಪಡ್ಕ ನಿವೃತ್ತಿ – ಸನ್ಮಾನ

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಅಡುಗೆದಾರರಾಗಿ 36 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವೆಂಕಟ್ರಮಣ ಬೇರ್ಪಡ್ಕರವರು ಜು.31ರಂದು ನಿವೃತ್ತಿ ಹೊಂದಿದ್ದು,ಅವರಿಗೆ ಅಭಿನಂದನಾ ಸಮಾರಂಭ ಸುಳ್ಯ ಸರಕಾರಿ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.

ತಾಲೂಕು ಆಸ್ಪತ್ರೆಯಲ್ಲಿ ನಡೆದ ಬೀಳ್ಕೋಡುಗೆ ಸಮಾರಂಭದ ಅಧ್ಯಕ್ಷತೆಯನ್ನು ಆಸ್ಪತ್ರೆಯ ವೈಧ್ಯಾಧಿಕಾರಿಗಳಾದ ಡಾ. ಪದ್ಮನಾಭ ಎಂ ಕೆ ವಹಿಸಿದ್ದರು. ಸಭಾ ವೇದಿಕೆಯಲ್ಲಿ ನಿವೃತ್ತರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಡಾ.ಅರ್ಚನಾ ಜಿ ಎಸ್ , ಡಾ.ರಜನಿ ಎ ಜೆ , ಡಾ. ಸೌಮ್ಯ , ಡಾ.ಶಿವಕುಮಾರ್ ಎ ಸಿ , ಡಾ.ಜೋತ್ನ್ಸಾ ಕರ್ಕಡಾ , ಡಾ. ವೀಣಾ, ನಳಿನಾಕ್ಷಿ ಹೆಚ್ ಸುರಕ್ಷಾ ಅಧಿಕಾರಿ, ಪದ್ಮಾವತಿ ಶುಶ್ರೂಕಿಯರ ಅಧಿಕಾರಿ, ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸನ್ಮಾನ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ನಾನಾ ವಿಭಾಗಗಳ ನೌಕರರಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಜೀವನಕ್ಕೆ ನಿವೃತ್ತ ನೌಕರರು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು , ಹಿತೈಷಿಗಳು ಶುಭಹಾರೈಸಿದರು. ಮುರಳಿ ನಳಿಯಾರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!