Ad Widget

ಸುಳ್ಯ : ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ ಮೊಸರು ಕುಡಿಕೆ ಉತ್ಸವ ಸಮಿತಿ ರಚನೆ – ಅಧ್ಯಕ್ಷರಾಗಿ ಎ.ವಿ.ತೀರ್ಥರಾಮ, ಕಾರ್ಯದರ್ಶಿ ಪ್ರಕಾಶ್ ಯಾದವ್, ಕೋಶಾಧಿಕಾರಿ ನವೀನ್ ಎಲಿಮಲೆ

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ನ ಸ್ಥಾಪನಾ ದಿನ ಅಂಗವಾಗಿ ಹಲವು ವರ್ಷಗಳಿಂದ ಸುಳ್ಯದಲ್ಲಿ ವಿಜೃಂಭಣೆಯಿಂದ ಮೊಸರು ಕುಡಿಕೆ ಉತ್ಸವ ಆಚರಣೆ ನಡೆಯುತ್ತಿದೆ. ಈ ಬಾರಿ ನಡೆಯುವ 11ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಬಗ್ಗೆ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿ ರಚಿಸಲಾಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಎ.ವಿ.ತೀರ್ಥರಾಮ ಅಂಬೆಕಲ್ಲು, ಕಾರ್ಯದರ್ಶಿಯಾಗಿ ಪ್ರಕಾಶ್ ಯಾದವ್ ಹಾಗೂ ಕೋಶಾಧಿಕಾರಿಯಾಗಿ ನವೀನ್ ಎಲಿಮಲೆ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಸುನೀಲ್ ಕೇರ್ಪಳ, ರವಿಚಂದ್ರ ಕೊಡಿಯಾಲಬೈಲ್, ದೇವಿಪ್ರಸಾದ್ ಅತ್ಯಾಡಿ, ಸಹಕಾರ್ಯದರ್ಶಿಯಾಗಿ ಪಾರ್ವತಿ ಕುಂಚಡ್ಕ, ರಾಜೇಶ್ ಬೇರಿಕೆ, ವ್ಯವಸ್ಥಾ ಪ್ರಮುಖ್ ಆಗಿ ರಾಜೇಶ್ ಕಲ್ಲುಮುಟ್ಲು, ವಿನಯ ಪಾಡಾಜೆ ಆಯ್ಕೆಯಾದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ದುರ್ಗಾವಾಹಿನಿ, ಮಾತೃಶಕ್ತಿಯ ಪ್ರಮುಖರು ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!