Ad Widget

ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ-ದತ್ತಿನಿಧಿ ವಿತರಣೆ

ಪಯಸ್ವಿನಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ದತ್ತಿನಿಧಿ ವಿತರಣೆ ಕಾರ್ಯಕ್ರಮ ನಡೆಯಿತು.
ಧ್ವಜ ರೋಹಣವನ್ನು ಪಯಸ್ವಿನಿ ಪ್ರೌಢ ಶಾಲಾ ಸಂಚಾಲಕ ಜಾತೆ ಸದಾನಂದ ನೆರವೇರಿ ಮಾತನಾಡಿದರು. ನಂತರ ಸಭಾಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್, ಶಿಕ್ಷಕರಾದ ಮೀನಕುಮಾರಿ, ಶಿವಪ್ರಕಾಶ.ಕೆ, ಸವಿತಾ ಕುಮಾರಿ, ಕುಮಾರ್ ಲಮಾಣಿ, ಸಿಬ್ಬಂದಿ ಬೇಬಿ. ಕೆ ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ. ಕೆ ಧ್ವಜಾರೋಹಣ ಕಾರ್ಯಕ್ರಮ ನಡೆಸಿಕೊಟ್ಟರು. ಬಳಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಕದಿಕಡ್ಕ ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳು ಜಂಟಿಯಾಗಿ ಜಾಲ್ಸೂರು ಪೇಟೆಯಲ್ಲಿ ತ್ರಿವರ್ಣ ಧ್ವಜ ಹಿಡಿದು ಜೈ ಘೋಷದೊಂದಿಗೆ ಬೃಹತ್ ಮೆರವಣಿಗೆ ನಡೆಯಿತು. ಈ ವೇಳೆ ಚಾಲ್ಸೂರು ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ವತಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಲಾಡು ವಿತರಿಲಾಯಿತು. ಬಳಿಕ ಶಾಲೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಿವೃತ್ತ ಶಿಕ್ಷಕ ಹಾಗೂ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಮಾಜಿ ಅಧ್ಯಕ್ಷ ಕೇಪು ಸುಂದರ ಮಾಸ್ತರ್ ಅವರು ನೀಡಿರುವ ದತ್ತಿ ನಿಧಿಯನ್ನು ವಿತರಿಸಲಾಯಿತು.
ಶಿಕ್ಷಕ ಶಿವಪ್ರಕಾಶ್ ಕೆ. ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!