Ad Widget

ಕೆಎಸ್ಎಸ್ ಕಾಲೇಜಿನ ಉಪನ್ಯಾಸಕರಾದ ವಿನ್ಯಾಸ್ ಹೊಸೋಳಿಕೆ ಯವರಿಗೆ ಪಿ ಎಚ್ ಡಿ ಪದವಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದ ಉಪನ್ಯಾಸಕರಾದ ಶ್ರೀ ವಿನ್ಯಾಸ್ ಹೊಸೋಳಿಕೆ ಇವರು, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಂಶುಪಾಲರಾದ ಪ್ರೋ. ಡಾ. ಉದಯ್ ಕುಮಾರ್ ಇರ್ವತ್ತೂರು ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಮಾರ್ಕೆಟಿಂಗ್ ಸ್ಟ್ರಾಟಜಿಸ್ ಆಫ್ ಸೋಷಿಯಲ್ ಎಂಟರ್ಪ್ರೈಸಸ್ – ಎ ಸ್ಟಡಿ ವಿಥ್ ಸೆಲೆಕ್ಟ್ ಸೋಶಿಯಲ್ ಎಂಟರ್ಪ್ರೈಸಸ್” ಎಂಬ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ.
ಇವರು ಉಪನ್ಯಾಸಕರ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿಯು ಉತ್ತೀರ್ಣಗೊಂಡು ಪ್ರಸ್ತುತ ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರು ನಿವೃತ್ತ ಅಂಚೆ ಉಪ ಪಾಲಕರಾದ ದಾಮೋದರ ಗೌಡ ಹೊಸೋಳಿಕೆ ಮತ್ತು ದಿ. ದಿನಮಣಿ ಇವರ ಪುತ್ರ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!