Ad Widget

ಮೇನಾಲ : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ವಿಶ್ವ ಹಿಂದೂ ಪರಿಷತ್ – ಭಜರಂಗದಳ ಸುಳ್ಯ ಪ್ರಖಂಡ ಶ್ರೀ ಕೃಷ್ಣ ಭಜನಾ ಮಂದಿರ ಮೇನಾಲ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಮೇನಾಲ ಭಜನಾ ಮಂದಿರದಲ್ಲಿ ಆಚರಿಸಲಾಯಿತು. ಆ. 25ರಂದು ವಿವಿಧ ಕ್ರೀಡಾಕೂಟ ವನ್ನು ನಡೆಸಲಾಯಿತು. ಇದರ ಉದ್ಘಾಟನೆಯನ್ನು ಸುಳ್ಯದ ಶಾಸಕರಾದ ಕು. ಭಾಗೀರಥಿ ಮುರುಳ್ಯ ನೆರವೇರಿಸಿದರು. ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ತಾಲೂಕು ಅಧ್ಯಕ್ಷರಾದ ಸೋಮಶೇಖರ ಪೈಕ, ಶಾರದಾಂಬ ಸೇವಾ ಸಮಿತಿ ಸುಳ್ಯ ಇದರ ಅಧ್ಯಕ್ಷರಾದ ನಾರಾಯಣ ಕೇಕಡ್ಕ, ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಉಪಸ್ಥಿತರಿದ್ದರು. ನಂತರ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದವು. ಆ 26 ರಂದು ಸಂಜೆ ಭಜನಾ ಕಾರ್ಯಕ್ರಮ ವರಮಹಾಲಕ್ಷ್ಮಿ ಪೂಜಾ ಸಮಿತಿಯವರಿಂದ ಕುಣಿತ ಭಜನೆ ಶ್ರೀ ಕೃಷ್ಣ ವೇಷ ಧರಿಸಿದ ಪುಟಾಣಿಗಳ ವಿವಿಧ ವಿನೋಧಾವಳಿಗಳು, ನಂತರ ನಡೆದ ಸಭಾ ಕಾರ್ಯಕ್ರಮ ದಲ್ಲಿ ವಿವಿಧ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಬಳಿಕ ಅನ್ನಸಂತರ್ಪಣೆ ನಡೆದು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು. ಕಾರ್ಯಕ್ರಮದಲ್ಲಿ ಕು ಸಾಕ್ಷಿ ಸ್ವಾಗತಿಸಿ, ಕು ಪ್ರೇರಣಾ ಬಹುಮಾನಗಳ ಪಟ್ಟಿ ವಾಚಿಸಿದರು. ಕು ಭೂಮಿಕಾ ವಂದಿಸಿದರು. ಕು ಆಪ್ತ ರೈ ಹಾಗೂ ಅರ್ಪಿತಾ ರೈ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!