Ad Widget

ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾ‌ರ್ ಜಿ.ಮಂಜುನಾಥ್ ಅವರಿಗೆ ಬೀಳ್ಕೊಡುಗೆ.

ಸುಳ್ಯ: ಕಳೆದ ಹದಿನೈದಕ್ಕು ಹೆಚ್ಚು ತಿಂಗಳುಗಳಿಂದ ಸುಳ್ಯ ನಗರ ಪಂಚಾಯತ್‌ನ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ ತಹಶೀಲ್ದಾ‌ರ್ ಜಿ.ಮಂಜುನಾಥ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ನಗರ ಪಂಚಾಯತ್‌ಗೆ ನೂತನ ಅಧ್ಯಕ್ಷ, ಹಾಗೂ ಉಪಾಧ್ಯಕ್ಷ ಆಯ್ಕೆ ನಡೆದ ಹಿನ್ನಲೆಯಲ್ಲಿ ಆಡಳಿತಾಧಿಕಾರಿ ಅವರ ಅಧಿಕಾರ ಕೊನೆಗೊಂಡಿದೆ. ಈ ಹಿನ್ನಲೆಯಲ್ಲಿ ನಗರ ಪಂಚಾಯತ್‌ನಲ್ಲಿ ಸೆ.2ರಂದು ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ನ.ಪಂ. ಅಧ್ಯಕ್ಷೆ ಎ.ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ಧ ನಾಯ್ಕ,ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ಗ್ರೇಡ್ 2 ತಹಶೀಲ್ದಾರ್ ಮಂಜುನಾಥ್ ಎಂ. ಸದಸ್ಯರಾದ ವಿನಯಕುಮಾರ್ ಕಂದಡ್ಯ ಶೀಲಾ ಅರುಣ ಕುರುಂಜಿ, ಬಾಲಕೃಷ್ಣ ಭಟ್, ಕೆ.ಎಸ್.ಉಮ್ಮರ್, ಧೀರಾ ಕ್ರಾಸ್ತಾ,ನಾರಾಯಣ ಶಾಂತಿನಗರ, ಶರೀಫ್ ಕಂಠಿ, ಸಿದ್ದಿಕ್ ಕೊಕ್ಕೊ, ಕಿಶೋರಿ ಶೇಟ್, ಸರೋಜಿನಿ ಪೆಲ್ತಡ್ಕ, ಶಿಲ್ಪಾ ಸುದೇವ್‌, ಸುಶೀಲಾ ಜಿನ್ನಪ್ಪ , ನಗರ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!