Ad Widget

ಕಸಾಪ ವತಿಯಿಂದ ಶಿಕ್ಷಕ ದಿನಾಚರಣೆಯಂದು ಶಿಕ್ಷಕ ಸಾಹಿತಿಗಳಿಗೆ ಸನ್ಮಾನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶಿಕ್ಷಕ ದಿನಾಚರಣೆಯ ಅಂಗವಾಗಿ ಶಿಕ್ಷಕ ಸಾಹಿತಿಗಳನ್ನು ಇಂದು ಗೌರವಿಸಲಾಯಿತು.
ಸಾಹಿತ್ಯ ರಂಗದಲ್ಲಿ ಹೆಸರು ಮಾಡಿರುವ ನಿವೃತ್ತ ಶಿಕ್ಷಕರನ್ನು ಗುರುತಿಸಿ ಅವರನ್ನು ಗೌರವಿಸುವ ಪರಂಪರೆಯನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಳೆದ ವರ್ಷದಿಂದ ಆರಂಭಿಸಿದೆ.
ಇಂದು ನಡೆದ ಕಾರ್ಯಕ್ರಮದಲ್ಲಿ ಹಿರಿಯ ನಿವೃತ್ತ ಶಿಕ್ಷಕರಾದ ಶ್ರೀಮತಿ ಜಯಮ್ಮ ಚೆಟ್ಟಿಮಾಡ ಹಾಗೂ ಶ್ರೀಮತಿ ಶೀಲಾವತಿ ಕೊಳಂಬೆ ಯವರನ್ನು ಅವರ ನಿವಾಸಕ್ಕೆ ತೆರಳಿ ಸಾಹಿತ್ಯ ಪರಿಷತ್ತಿನ ಪರವಾಗಿ ಗೌರವಿಸಲಾಯಿತು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು,ಗೌರವ ಕಾರ್ಯದರ್ಶಿಗಳಾದ ತೇಜಸ್ವಿ ಕಡಪಳ,ಚಂದ್ರಮತಿ,ಕಾರ್ಯಕಾರಿ ಸಮಿತಿ ಸದಸ್ಯರಾದ ಸಂಜೀವ ಕುದ್ಪಾಜೆ,ಕೇಶವ.ಸಿ‌.ಎ, ಸಂಕೀರ್ಣ ಚೊಕ್ಕಾಡಿ,ಲತಾ ಶ್ರೀ ಸುಪ್ರೀತ್ ಮೋಂಟಡ್ಕ ,ಪಂಜ ಹೋಬಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ , ಕಾರ್ಯದರ್ಶಿ ರೂಪವಾಣಿ ಕೆರೆಮೂಲೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!