Ad Widget

ಕುಮಾರಧಾರ ನದಿ ಬದಿ ಹಾಗೂ ಕುಲ್ಕುಂದ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ, ಸೆ. 7 : ಸುಬ್ರಹ್ಮಣ್ಯ ರೋಟರಿ ಕ್ಲಬ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಹಾಗೂ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಜಂಟಿಯಾಗಿ ಇಂದು ರವಿವಾರ ಕುಮಾರಧಾರ ಹಾಗೂ ಕುಲ್ಕುಂದ ರಸ್ತೆ ಬದಿಗಳಲ್ಲಿ ಇದ್ದ ತ್ಯಾಜ್ಯ ವಸ್ತುಗಳು, ಕಸ-ಕಡ್ಡಿಗಳು, ಪ್ಲಾಸ್ಟಿಕ್ ಇತ್ಯಾದಿಗಳನ್ನು ಶೇಖರಿಸಿ ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷ ಹಾಗೂ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ ಕಕ್ಕೆ ಪದವು ಅಯ್ಯಪ್ಪ ಗುರುಸ್ವಾಮಿ ದಾಮೋದರ್, ಸಮಾಜ ಸೇವಾ ಟ್ರಸ್ಟ್ ನ ನಾಯಕರುಗಳು ಹಾಗೂ ಸದಸ್ಯರುಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!