Ad Widget

ಹಳೆಗೇಟು : ಗಣೇಶೋತ್ಸವ ಕಾರ್ಯಕ್ರಮದಲ್ಲಿ ನ.ಪಂ. ಉಪಾಧ್ಯಕ್ಷ ಬುದ್ಧ ನಾಯ್ಕ ಹಾಗೂ ಸಂಗೀತ ಕಲಾವಿದ ವಿಜಯ್ ಕುಮಾ‌ರ್ ರಿಗೆ ಸನ್ಮಾನ

ಹಳಗೇಟು: ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ ಹಳೆಗೇಟು ಸಾಂಸ್ಕೃತಿಕ ಸಂಘದ ವೇದಿಕೆಯಲ್ಲಿ ಸೆ. 7 ರಂದು ನಡೆಯಿತು.
ಸಂಘದ ಅಧ್ಯಕ್ಷ ಬಿ. ಶ್ರೀನಿವಾಸ್ ರಾವ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಗರ ಪಂಚಾಯತ್‌ ಉಪಾಧ್ಯಕ್ಷ ಬುದ್ಧ ನಾಯ್ಕ ಹಾಗೂ ಸಂಗೀತ ಕಲಾವಿದ ವಿಜಯ್ ಕುಮಾ‌ರ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಬಾಲಗೋಪಾಲ ಸೇರ್ಕಜೆ, ಕಾರ್ಯದರ್ಶಿ ಶಿವನಾಥ್ ರಾವ್ ಹಳೆಗೇಟು,ಉಪ ಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಕೋಶಾಧಿಕಾರಿ ಚಿತ್ತರಂಜನ್, ಕಾರ್ಯಕ್ರಮದ ಸಂಚಾಲಕರು ಜ್ಞಾನೇಶ್ವರ್ ಶೇಟ್,ದಿವಾಕರ ತಿಮ್ಪನ್, ರಾಮಕೃಷ್ಣ ಆಲಂಕಳ್ಯ,ಗೌತಮ್ ಭಟ್, ಸಚಿನ್ ರಾವ್‌,ಧನಂಜಯ ಪಂಡಿತ್,ಕಿಶನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!