Ad Widget

ಸುಬ್ರಹ್ಮಣ್ಯ : ಯೂತ್ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ


ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶದೊಂದಿಗೆ, ಯುವ ರೆಡ್ ಕ್ರಾಸ್ ಘಟಕದ 2024-25 ನೇ ಸಾಲಿನ ಉದ್ಘಾಟನಾ ಸಮಾರಂಭವನ್ನು ಸೆ.11 ರಂದು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ. ಟಿ. ವಹಿಸಿದರು, ಉದ್ಘಾಟಕರಾಗಿ ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅನುರಾಧಾ ಕುರುಂಜಿ ಅವರು ಯುವಜನತೆಯ ಮನಸ್ಸಿನಲ್ಲಿ ಸೇವಾ ಮನೋಭಾವನೆ ಇದ್ದರೆ ಮಾತ್ರ ಸಮಾಜದಲ್ಲಿ ಒಳ್ಳೆಯ ವ್ಯಕ್ತಿ ಯಾಗಬಹುದು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕಿ ಲತಾ.ಬಿ.ಟಿ, ಯುವ ರೆಡ್ ಕ್ರಾಸ್ ಘಟಕದ ಸಂಯೋಜ ಕಾರದ ಶ್ರೀಮತಿ ವನಿತಾ ಮತ್ತು ಶ್ರೀಮತಿ ಸ್ವಾತಿ ಹಾಗೂ ಘಟಕದ ನಾಯಕರಾದ ಸಂಜನ.ಎನ್.ಎಸ್‌ ಮತ್ತು ವಿಳಾಸ್.ಎನ್.ಕೆ‌ ಉಪಸ್ಥಿತರಿದ್ದರು. ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಶ್ರೀ ಶೃಜನ್ ಮುಂಡೋಡಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮದ ಅತಿಥಿಯನ್ನು ಪ್ರೀಕ್ಷ ಪರಿಚಯಿಸಿದರು. ಸಂಜನ.ಎನ್.ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಅಶ್ವಿತ. ಕೆ ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!