Ad Widget

ಆಲೆಟ್ಟಿ: ಆನೆ ದಾಳಿ ಅಪಾರ ಕೃಷಿ ನಾಶ- ವಲಯ ವಲಯಾರಣ್ಯಾಧಿಕಾರಿ ಮಂಜುನಾಥ್ ಭೇಟಿ

ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮದ ಪರಿಸರದಲ್ಲಿ ಹಲವು ದಿನಗಳಿಂದ ನಿರಂತರ ಆನೆ ದಾಳಿಯಿಂದ ಅಪಾರ ಪ್ರಮಾಣದಲ್ಲಿ ಕೃಷಿ ನಾಶವಾಗಿದ್ದು ಈ ಪ್ರದೇಶಕ್ಕೆ ವಲಯ ಅರಣ್ಯ ಅಧಿಕಾರಿ ಮಂಜುನಾಥ್ ಅವರು ಇಂದು ಭೇಟಿ ನೀಡಿದ್ದರು.
ಆಲೆಟ್ಟಿ ಗ್ರಾಮದ ತುದಿಯಡ್ಕ, ಪಡ್ಪು, ಕಳಗಿ, ಗುಡ್ಡೆಮನೆ, ಚಳ್ಳಂಗಾರು ಭಾಗದಲ್ಲಿ ಕೆಲ ದಿನಗಳಿಂದ ಸುಮಾರು 6 ರಿಂದ 8 ಆನೆಗಳು ರಾತ್ರಿಯ ಸಮಯದಲ್ಲಿ ಬಂದು ಬಾಳೆ ತೆಂಗು ಅಡಿಕೆ ಕೃಷಿ ಯನ್ನು ನಾಶಮಾಡಿವೆ.ಇಲ್ಲಿಂದ ಆನೆಗಳನ್ನು ದೂರ ಓಡಿಸಲು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದರು.
ರಾತ್ರಿ ಸಮಯದಲ್ಲಿ ಬರುವ ಆನೆಗಳನ್ನು ಓಡಿಸಲು ಈಗಾಗಲೇ ಇಲಾಖೆ ಕಾರ್ಯಚರಣೆ ಮಾಡುತ್ತಿದ್ದು. ಈಗಾಗಲೇ ಆಗಿರುವ ಕೃಷಿ ನಾಶಕ್ಕೆ ಅರ್ಜಿಯನ್ನು ಸಲ್ಲಿಸಲು ಮಾಹಿತಿಯನ್ನು ನೀಡಿದರು. ಹಾಗೂ ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಸೋಲಾರ್ ಬೇಲಿ ಅಳವಡಿಸುವ ಮಾಹಿತಿಯನ್ನು ನೀಡಿದರು. ತಮ್ಮ ಇಲಾಖೆಯ ವತಿಯಿಂದ ಸಿಗುವ ಎಲ್ಲಾ ಪರಿಹಾರ ಸೌಲಭ್ಯ ಒದಗಿಸಿ ಕೊಡಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಆಲೇಟ್ಟಿ ಗ್ರಾಮದ ಅರಣ್ಯ ಅಧಿಕಾರಿ ವೆಂಕಟೇಶ್. ಹಾಗೂ ಕೃಷಿ ನಾಶವಾದ ತೋಟದ ಮಾಲಿಕರಾದ .ಕೃಪಶಂಕರ್ ತುದಿಯಡ್ಕ. ಆನಂದ ಗೌಡ ಗುಡ್ಡೆಮನೆ. ಲೊಲಾಜಾಕ್ಷ ಪಡ್ಪು. ಜಯಂತ ಪಡ್ಪು ಮತ್ತಿತರರು ಇದ್ದರು

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading