Ad Widget

ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ಅವರ ಸಾಧನೆಗೆ ಒಲಿದ ನೇಷನ್ ಬಿಲ್ಡರ್ ಅವಾರ್ಡ್ ಮತ್ತು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

. . . . . . . . .

ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಸುಳ್ಯ ಇವರು ಈ ಬಾರಿ ನೀಡಿದ “ನೇಷನ್ ಬಿಲ್ಡರ್ ಅವಾರ್ಡ್” ಪ್ರತಿಷ್ಠಿತ ನೆಹರು ಮೆಮೋರಿಯಲ್ ಪ ಪೂ ಕಾಲೇಜು ಸುಳ್ಯ ಹಾಗೂ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ.ಅವರಿಗೆ ಲಭಿಸಿದೆ.
ದ.ಕ. ಜಿಲ್ಲಾ ಪ.ಪೂ ಕಾಲೇಜುಗಳ ಪ್ರಾಚಾರ್ಯರ ಸಂಘ(ರಿ )ಮಂಗಳೂರು, ವಿವಿಧ ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಹಾಗೂ ಆಳ್ವಾಸ್ ಪ.ಪೂ. ಕಾಲೇಜು, ಮೂಡಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ ಕಾಲೇಜು ಮೂಡಬಿದಿರೆ ಇಲ್ಲಿ ಸೆ. 22ರಂದು ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ -2024 ಈ ಕಾರ್ಯಕ್ರಮದಲ್ಲಿ “ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ” ಗೆ ಕೂಡ ಇವರು ಭಾಜನರಾಗಿದ್ದಾರೆ.ಈ ಮೂಲಕ ಶಿಕ್ಷಣ ರಂಗದಲ್ಲಿ ನೀಡುವ 2 ಪ್ರಶಸ್ತಿಗಳು ಇವರಿಗೆ ಒಲಿದು ಬಂದಿದೆ.ವಿದ್ಯಾರ್ಥಿ ಹಂತದಿಂದಲೇ
ಬಹುಮುಖ ಪ್ರತಿಭಾವಂತೆಯಾಗಿದ್ದು,ರ‌್ಯಾಂಕ್ ವಿಜೇತ ವಿದ್ಯಾರ್ಥಿನಿಯಾಗಿ,ವೃತ್ತಿ ಕ್ಷೇತ್ರದಲ್ಲಿ ಕ್ರಿಯಾಶೀಲ ಉಪನ್ಯಾಸಕಿಯಾಗಿ ಅತ್ಯುತ್ತಮ ಪಾಠ ಬೋಧನೆ,ಪಾರದರ್ಶಕ ಸೇವೆ,ಶಿಸ್ತುಬದ್ಧ,ಪ್ರಾಮಾಣಿಕ ನಡೆ-ನುಡಿಗೆ ಹೆಸರಾದವರು.ವಿದ್ಯಾರ್ಥಿಗಳ ಸಮಗ್ರ ವಿಕಸನದ ಗುರಿ ಹೊಂದಿ ಮಾರ್ಗದರ್ಶನ ನೀಡುತ್ತಾ ಸಾಧನೆಗೆ ಪ್ರೆರೇಪಿಸುತ್ತಾ ಬಂದವರು ; ಸಂಸ್ಥೆಗಳ ಶ್ರೇಯಕ್ಕಾಗಿ ಕಾರ್ಯ ದಕ್ಷತೆಯಿಂದ ಸೇವೆ ಸಲ್ಲಿಸುತ್ತಾ, ಸೇವೆಯಲ್ಲಿ ವಿಸ್ತರಿಸಿಕೊಂಡು ಮಾದರಿ ಉಪನ್ಯಾಸಕಿಯಾಗಿ ಗುರುತಿಸಿಕೊಂಡವರು. ವಿಷಯಾಧಾರಿತ ತನ್ನ ಕನ್ನಡ ವಾಕ್ ಶೈಲಿಯಿಂದ ಪ್ರಸಿದ್ಧಿ ಹೊಂದಿರುವ ಇವರು ವಾಗ್ಮಿಯಾಗಿ ಸರಕಾರಿ ಮತ್ತು ಖಾಸಗಿ ಕಾರ್ಯಕ್ರಮಗಳ ಜನಪ್ರಿಯ ನಿರೂಪಕಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ, ಮಾಧ್ಯಮಗಳ ನೇರ ಪ್ರಸಾರ ಕಾರ್ಯಕ್ರಮ ಹಾಗೂ ಸಾಕ್ಷ್ಯ ಚಿತ್ರಗಳಿಗೆ ಹಿನ್ನಲೆ ಧ್ವನಿಯಾಗಿ ಹೀಗೆ ಹತ್ತು ಹಲವು ಪ್ರತಿಭಾ ಶಕ್ತಿಯ ಮೂಲಕ ಜನಮಾನಸದಲ್ಲಿ ಚಿರ ಪರಿಚಿತರಾಗಿದ್ದಾರೆ.ಕನ್ನಡ ಭಾಷೆ, ಸಾಹಿತ್ಯದ ಕುರಿತು ಅಪಾರ ಅಭಿಮಾನ ಹೊಂದಿ ಕನ್ನಡ ಸೇವೆ,ಸಮಾಜಮುಖೀ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡವರು.ತನ್ನ ಮಾನವೀಯ ಕಳಕಳಿ,ಸರಳ- ಸಜ್ಜನಿಕೆಯ ಗುಣ ಶೀಲ ಸ್ವಭಾವದ ಸಾಧಕಿ ಉಪನ್ಯಾಸಕಿಯ ಸಾಧನೆಗೆ ಅರ್ಹವಾಗಿ ಅರಸಿ ಬಂದ ಪ್ರಶಸ್ತಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಕೆ.ವಿ.ಚಿದಾನಂದ, ಉಪಾಧ್ಯಕ್ಷೆ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ, ಆಡಳಿತ ಮಂಡಳಿಯ ಪದಾಧಿಕಾರಿಗಳು, ಪಿಯು ವಿಭಾಗದ ಪ್ರಾಚಾರ್ಯರಾದ ಶ್ರೀಮತಿ ಮಿಥಾಲಿ ಪಿ.ರೈ, ಕೆ ವಿ ಜಿ ಕಾನೂನು ಕಾಲೇಜಿನ ಪ್ರಾಚಾರ್ಯರಾದ ಉದಯಕೃಷ್ಣ ಬಿ ,ಪಿಯು ವಿಭಾಗದ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು,ವಿಶ್ರಾಂತ ಪ್ರಾಚಾರ್ಯರು, ಎನ್ನೆoಸಿಯ ಗೌರವ ಶೈಕ್ಷಣಿಕ ಸಲಹೆಗಾರರಾಗಿರುವ ಪ್ರೊ ಎಂ ಬಾಲಚಂದ್ರ ಗೌಡ, ಎ ಓ ಎಲ್ ಇ (ರಿ )ಸಲಹೆಗಾರರು, ಕೆವಿಜಿ ಕಾನೂನು ಮಹಾ ವಿದ್ಯಾಲಯದ ಆಡಳಿತಾಧಿಕಾರಿ ಪ್ರೊ ಕೆ ವಿ ದಾಮೋದರ ಗೌಡ ಅವರು ಸೇರಿದಂತೆ ಗುರುಗಳು,ಗಣ್ಯರು, ಕೆವಿಜಿ ಸಮೂಹ ಸಂಸ್ಥೆಗಳ ಪ್ರಾಚಾರ್ಯರು,ಉದ್ಯೋಗಿಗಳು,ವಿದ್ಯಾಭಿಮಾನಿಗಳು, ಹಿತೈಷಿಗಳು, ಸಾವಿರಾರು ಶಿಷ್ಯ ವೃಂದ ಪ್ರಶಂಸೆ, ಅಭಿನಂದನೆ ಸಲ್ಲಿಸಿದ್ದಾರೆ. ಮೂಲತ ಅರಂತೋಡು ಗ್ರಾಮದ ಪೂಜಾರಿಮನೆಯವರಾದ ಪ್ರಸ್ತುತ ಉಬರಡ್ಕ ಮಿತ್ತೂರು ಗ್ರಾಮದಲ್ಲಿ ವಾಸ್ತವ್ಯ ಹೊಂದಿರುವ ನಿವೃತ್ತ ಅಧ್ಯಾಪಕ ದಂಪತಿ ಬೆಳ್ಯಪ್ಪ ಗೌಡ ಪಿ, ಭಾಗೀರಥಿ ಕೆ ಇವರ ಪುತ್ರಿ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading