
ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಸ್.ಎನ್.ಮನ್ಮಥ ಮೂರನೇ ಬಾರಿಗೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹೇಶ್ ಜಬಳೆ ಅವಿರೋಧವಾಗಿ ಆಯ್ಕೆಯಾದರು.
ಸಂಘದ ನಿರ್ದೇಶಕರಾದ ಸತೀಶ್ ಎಡಮಲೆ,ಚಂದ್ರಶೇಖರ ಎಸ್,ರವಿನಾಥ ಮಡ್ತಿಲ,ಮಧುಕರ ನಿಡುಬೆ,ಅನಂತಕುಮಾರ್ ಖಂಡಿಗೆಮೂಲೆ,ಪುರಂದರ ಶಾಂತಿಮೂಲೆ,ಭವಾನಿ ಎಂ.ಸಿ ದಿವ್ಯಾರಮೇಶ್ ಮಿತ್ತಮೂಲೆ,ನಟರಾಜ್ ಸಿ.ಕೂಪ್,ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ ಉಪಸ್ಥಿತರಿದ್ದರು.
