
ಪೆರಾಜೆ ಗ್ರಾಮದ ಬಂಗಾರಕೋಡಿ ಪರಿಸರದಲ್ಲಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ನಷ್ಟ ಮಾಡಿರುವ ಘಟನೆ ವರದಿಯಾಗಿದೆ. ಬಂಗಾರಕೋಡಿ ಜಯರಾಮ ಎಂಬವರ ತೋಟಕ್ಕೆ ಕಳೆದ ರಾತ್ರಿ ನುಗ್ಗಿರುವ ಕಾಡಾನೆಗಳು ಅಪಾರ ಪ್ರಮಾಣದ ಬಾಳೆಗಿಡಗಳು,ತೆಂಗು, ಅಡಿಕೆ ಗಿಡಗಳನ್ನು ನಾಶ ಮಾಡಿರುವ ಬಗ್ಗೆ ವರದಿಯಾಗಿದೆ.