Ad Widget

ಕನಕಮಜಲು ಹಿಟ್ & ರನ್ ಪ್ರಕರಣ – ಕಾರು ಗುದ್ದಿ ಗಂಭೀರ ಗಾಯಗೊಂಡಿದ್ದ ಇಬ್ಬರು ಮೃತ್ಯು

ಕನಕಮಜಲಿನಲ್ಲಿ ಪಾದಾಚಾರಿಗಳಿಗೆ ಕಾರೊಂದು ಢಿಕ್ಕಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಅವರಿಬ್ವರು ಮೃತಪಟ್ಟ ಘಟನೆ ವರದಿಯಾಗಿದೆ. ಫೆ.08 ರಂದು ರಾತ್ರಿ ಅಪಘಾತ ನಡೆದ ಬಳಿಕ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದ. ಸ್ಥಲೀಯರು ಗಾಯಾಳುಗಳನ್ಬು ಆಸ್ಪತ್ರೆಗೆ ಸಾಗಿಸಿದ್ದರು.

. . . . . . . . .

.
ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಾಹ ಭಜನೆ ನಡೆಯುತ್ತಿದ್ದು, ಬೆಟ್ಟಂಪಾಡಿ ಇರ್ದೆ ಮೂಲದ ಕೋಡಿಯ ಜನಾರ್ದನ ಶೆಟ್ಟಿ ಹಾಗೂ ಅವರ ಮಾವ ರಾಮ ಶೆಟ್ಟಿ ಅವರು ಏಕಾಹ ಭಜನೆಗೆ ಸುಣ್ಣಮೂಲೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರೊಂದು ರಭಸವಾಗಿ ಬಂದು ಇವರಿಬ್ಬರಿಗೆ ಢಿಕ್ಕಿ ಹೊಡೆಯಿತೆನ್ಮಲಾಗಿದೆ. ಈ ವೇಳೆ ರಾಮ ಶೆಟ್ಟಿ ಅವರು ರಸ್ತೆ ಬದಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಅವರನ್ನು ಅಂಬ್ಯುಲೆನ್ಸ್‌ ಮೂಲಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದರು. ಆದರೆ ಕಾರು ಜನಾರ್ದನ ಅವರಿಗೂ ಢಿಕ್ಕಿ ಹೊಡೆದಿದ್ದು, ಅವರು ರಸ್ತೆಯಿಂದ ಸ್ವಲ್ಪ ದೂರ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನರಾಗಿ ಬಿದ್ದಿದ್ದನ್ನು ಯಾರ ಗಮನಕ್ಕೂ ಬರಲಿಲ್ಲ. ಸ್ವಲ್ಪ ಸಮಯದ ಬಳಿಕ ಗಮನಿಸಿದ ಸ್ಥಳೀಯರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೆವಿಜಿ ಆಸ್ಪತ್ರೆಗೆ ಕರೆ ತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಗಾಯಗಳಾಗಿದ್ದ ಹಿನ್ನೆಲೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು . ಅವರಿಬ್ಬರು ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!