
ಗುತ್ತಿಗಾರು ಪ್ರಾ.ಕೃ.ಸ.ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ಚುನಾವಣೆ ನಡೆಯಲಿದ್ದು 12 ನಿರ್ದೇಶಕ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಫೆ.13 ರಂದು ನಾಮಪತ್ರ ಸಲ್ಲಿಸಿದ್ದಾರೆ.
ಸಾಮಾನ್ಯ ಕ್ಷೇತ್ರದಿಂದ ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಜಯಪ್ರಕಾಶ್ ಮೊಗ್ರ, ರವೀಂದ್ರ ಕಾನಾವು ಅಡ್ಡನಪಾರೆ, ನವೀನ್ ಬಾಳುಗೋಡು, ಪದ್ಮನಾಭ ಮೀನಾಜೆ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಕೃಷ್ಣಯ್ಯ ಮೂಲೆತೋಟ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ವಿನ್ಯಾಸ್ ಕೊಚ್ಚಿ, ಮಹಿಳಾ ಕ್ಷೇತ್ರದಿಂದ ತಿಲಕಾ ಕೊಲ್ಯ, ವಿನುತಾ ಜಾಕೆ, ಪ.ಪಂಗಡ ಕ್ಷೇತ್ರದಿಂದ ಜನಾರ್ಧನ ನಾಯ್ಕ್ ಅಚ್ರಪ್ಪಾಡಿ, ಪ.ಜಾತಿ ಕ್ಷೇತ್ರದಿಂದ ಕುಂಞ ಬಳ್ಳಕ್ಕ ನಾಮಪತ್ರ ಸಲ್ಲಿಸಿದ್ದಾರೆ.
