Ad Widget

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭದ ಆಮಂತ್ರಣ ಬಿಡುಗಡೆ

. . . . . . . . .

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಫೆ. 28 ರಂದು ಮಡಿಕೇರಿ ಗೌಡ ಸಮಾಜ ಭವನದಲ್ಲಿ 2022 – 23 ನೇ ಸಾಲಿನ ಗೌರವ ಪ್ರಶಸ್ತಿ ಪ್ರಧಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭ ನಡೆಯಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಇಂದು ಸುಳ್ಯ ಮೊಗರ್ಪಣೆ ಬಳಿ ನಿವೃತ ಬಿ ಡಿ ಓ ಶ್ರೀಮತಿ ಮೀನಾಕ್ಷಿ ಗೌಡ ರವರ ನಿವಾಸದಲ್ಲಿ ನಡೆಯಿತು.

ಶ್ರೀಮತಿ ಮೀನಾಕ್ಷಿ ಗೌಡ ರವರು ಆಮಂತ್ರಣ ಪತ್ರ ಬಿಡುಗಡೆ ಗೊಳಿಸಿ ಕಾರ್ಯಕ್ರಮಕ್ಕೆ ಶುಭಾರೈಸಿ ಮಾತನಾಡಿದರು.

ಈ ಸಂಧರ್ಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡಮಿ ಅಧ್ಯಕ್ಷ ಸದಾನಂದ ಮಾವಜಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

ಸದಸ್ಯರುಗಳಾದ ಶ್ರೀಮತಿ ಲತಾ ಕುತ್ಪಾಜೆ,ಚಂದ್ರಶೇಖರ ಪೆರಾಲು,ಶ್ರೀಮತಿ ಚಂದ್ರಾವತಿ ಬಡ್ಡಡ್ಕ, ಡಾ ಎನ್ ಎ ಜ್ಞಾನೇಶ್‌, ಮಾಜಿ ಸದಸ್ಯ ಕೆ ಟಿ ವಿಶ್ವನಾಥ್,ಹಾಗೂ ಸುಳ್ಯ ವೆಂಕಟ್ರಮಣ ಸಹಕಾರಿ ಸಂಘದ ಮೆನೇಜ‌ರ್ ಚಂದ್ರಶೇಖರ ಮೇರ್ಕಜೆ ಉಪಸ್ಥಿತರಿದ್ದರು.

ಡಾ. ಜ್ಞಾನೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಚಂದ್ರಶೇಖರ ಪೇರಾಲು ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!