Ad Widget

ಸರಕಾರಿ ಪ್ರೌಢಶಾಲೆ ಎಲಿಮಲೆಗೆ ಸ್ಮಾರ್ಟ್ ಟಿವಿ/ಬೋರ್ಡ್ ಕೊಡುಗೆ


ಐ ಜಿ ಡಿ ( ಇನ್ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಡೆವಲಪ್ಮೆಂಟ್) ಸಂಸ್ಥೆಯ ಸಂಯೋಜನೆಯಲ್ಲಿ ” ಐ ಟಿ ಸಿ ಆಶಿರ್ವಾದ್ ಸ್ಮಾರ್ಟ್ ಇಂಡಿಯಾ” ಸಹಭಾಗಿತ್ವದೊಂದಿಗೆ ಸರಕಾರಿ ಪ್ರೌಢ ಶಾಲೆಗೆ ದಿನಾಂಕ:20-02-2025 ನೇ ಗುರುವಾರರಂದು ಸ್ಮಾರ್ಟ್ ಟಿವಿ ಕೊಡುಗೆ ಹಾಗೂ ಅಯೋಡಿನ್ ಮತ್ತು ಸೂಕ್ಷ್ಮ ಪೋಷಕಾಂಶಗಳ ಬಗೆಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

. . . . . . . . .


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಧನಂಜಯ ಬಾಳೆತೋಟ ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶೈಲೇಶ್ ಅಂಬೆಕಲ್ಲು ವರು ಸ್ಮಾರ್ಟ್ ಟಿವಿ ಹಾಗೂ ಆರೋಗ್ಯಕರ ಆಹಾರದ ಸಲಹೆ ಭಿತ್ತಿ ಚಿತ್ರವನ್ನು ಅನಾವರಣಗೊಳಿಸಿದರು. ಎಲಿಮಲೆ ಸಮುದಾಯ ಆರೋಗ್ಯ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿಗಳಾದ ಕುಮಾರಿ ಮೋನಿಷಾ ಇವರು ಅಯೋಡಿನ್ ಮತ್ತು ಸೂಕ್ಷ್ಮ ಪೋಷಕಾಂಶಗಳ ಬಗೆಗೆ ವಿಧ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ಸೇವಾಜೆ, ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅಧ್ಯಕ್ಷರಾದ ಶ್ರೀ ರಾಜೇಶ್ ಅಂಬೆಕಲ್ಲು, ಐ ಜೆ ಡಿ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಗಣೇಶ್ ಬಂಗಾಡಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಕೆ, ಎಸ್ ಡಿ ಎಂ ಸಿ ಸದಸ್ಯರಾದ ಶ್ರೀ ಪುರುಷೋತ್ತಮ ಸುಳ್ಳಿ, ಕೃಷ್ಣಪ್ಪ ಗೌಡ ಹರ್ಲಡ್ಕ, ಮಾಧವ ಶೀರಡ್ಕ, ಅಚ್ಚುತ ಮುಂಡೋಕಜೆ, ಶ್ರೀ ಮತಿ ವಿಶಾಲಾಕ್ಷಿ, ಲೀಲಾವತಿ ಹರ್ಲಡ್ಕ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಐ ಜಿ ಡಿ ಸಂಸ್ಥೆಯ ತಾಲೂಕು ಸಂಯೋಜಕರಾದ ಜ್ಞಾನೇಶ್(ಸುಳ್ಯ), ಪ್ರಜ್ಞಾ (ಕಡಬ), ಪವಿತ್ರ (ಪುತ್ತೂರು) ರಮಿತ (ಬೆಳ್ತಂಗಡಿ), ಚೈತ್ರ (ಮಂಗಳೂರು). ದೇವಚಳ್ಳ ಗ್ರಾಮ ಪಂಚಾಯತ್ ಗ್ರಂಥಪಾಲಕರಾದ ಶ್ರೀ ಮತಿ ಪ್ರಫುಲ್ಲ ಶ್ರೀಕಾಂತ್ ಪಾರೆಪ್ಪಾಡಿ, ಕೇಶವ ಕಾಯರ ,ಶಿಕ್ಷಕರು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಟೋಪಿ ಹಾಗೂ ಬ್ಯಾಜ್ ವಿತರಿಸಲಾಯಿತು. ಶಿಕ್ಷಕರಾದ ಮುರಳೀಧರ ಪುನುಕುಟ್ಟಿ ಸ್ವಾಗತಿಸಿ ,ರಮಿತ ಧನ್ಯವಾದ ಅರ್ಪಿಸಿದರು ಕುಮಾರಿ ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!