
ಪುತ್ತೂರು: ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು.
ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಚಿದಾನಂದ ಮತ್ತು ಹೆಡ್ಾನ್ಸ್ಟೇಬಲ್ ದಿನೇಶ್ ಅವರು ಜಿ.ಎಲ್.ಆಚಾರ್ಯ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಆಚಾರ್ಯ ಅವರಿಗೆ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಿದರು. ಈ ಸಂದರ್ಭ ಎಸ್.ಐ ಉದಯರವಿ ಜೊತೆಗಿದ್ದರು.