Ad Widget

ಹರಿಹರ ಪಳ್ಳತಡ್ಕದಲ್ಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಸುಬ್ರಹ್ಮಣ್ಯ ಏ.06 : ಕೌಸ್ತುಭ ಕಲಾ ಟ್ರಸ್ಟ್ (ರಿ) ಕೂಜುಗೋಡು, ಸುಬ್ರಹ್ಮಣ್ಯ ಆಯೋಜಿಸಿರುವ ಎ.4 ರಿಂದ ಎ.11 ರವರೆಗೆ ಹರಿಹರೇಶ್ವರ ದೇವಾಲಯದಲ್ಲಿ ನಡೆಯಲಿರುವ ಮಕ್ಕಳ ಬೇಸಿಗೆ ಶಿಬಿರ ಕಲರವ ಎ.04 ರಂದು ಉದ್ಘಾಟನೆಗೊಂಡಿತು.
ಹರಿಹರ ದೇವಾಲಯದ ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀಯುತ ಚಂದ್ರಹಾಸ ಶಿವಾಲ ದೀಪ ಬೆಳಗಿ ಶಿಬಿರವನ್ನು ಉದ್ಘಾಟಿಸಿದರು. ಹರಿಹರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸುಬ್ರಹ್ಮಣ್ಯ ಐನಕಿದು ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರಾದ ಜಯಪ್ರಕಾಶ್ ಕೂಜುಗೋಡು, ಹರಿಹರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀಮತಿ ರೇಷ್ಮಾ ಪ್ರಕಾಶ್ ಕಟ್ಟೆಮನೆ, ವಕೀಲರಾದ ಮಧುಸೂದನ್ ಕಾಪಿಕಾಡು ಉಪಸ್ಥಿತರಿದ್ದರು.
ಶಿಬಿರದ ಸಂಯೋಜಕಿ ಶ್ರೀಮತಿ ವನಿತಾ, ಉದಯ್ ಕೂಜುಗೋಡು ಕಾರ್ಯಕ್ರಮ ನಿರೂಪಿಸಿದರು.
ಸಂಪನ್ಮೂಲ ವ್ಯಕ್ತಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!