
ಅಮರ ಸಂಘಟನಾ ಸಮಿತಿ (ರಿ.)ಸುಳ್ಯ
ಇದರ ಆಶ್ರಯದಲ್ಲಿ
ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್
ಸಹಕಾರದೊಂದಿಗೆ
ಅಂಚೆ ಜನ ಸಂಪರ್ಕ ಅಭಿಯಾನ
ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ
ಅಪಘಾತ ವಿಮೆ ನೊಂದಣಿ ಶಿಬಿರ ಏಪ್ರಿಲ್ 13 ರಂದು ನಾರ್ಣಕಜೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ಅಧ್ಯಕ್ಷರಾದ ಕುಸುಮಾಧರ ಮುಕ್ಕೂರು ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ಧನಂಜಯ ಕುಮಾರ್ ಕೆ ಅಧ್ಯಕ್ಷರು ಗ್ರಾಮ ಪಂಚಾಯತ್ ನೆಲ್ಲೂರು ಕೆಮ್ರಾಜೆ ಇವರು ನೆರವೆರಿಸಿದರು. ಮುಖ್ಯ ಅತಿಥಿಗಳಾಗಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ನೆಲ್ಲೂರು ಕೆಮ್ರಾಜೆ ಇದರ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆತೋಟ, ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಂದನಾ ಹೋಸತೋಟ ,ಭಾರತೀಯ ಅಂಚೆ ಇಲಾಖೆ ನೆಲ್ಲೂರು ಕೆಮ್ರಾಜೆ ಅಂಚೆ ಪಾಲಕಿ ಯಮುನಾ, ಪಿಡಬ್ಲ್ಯೂಡಿ ಗುತ್ತಿಗೆದಾರ ಹರಿಪ್ರಸಾದ್ ಎಲಿಮಲೆ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಜಯಪ್ರಸಾದ್ ಸಂಕೇಶ ಸ್ವಾಗತಿಸಿ , ಸುಧೀರ್ ದೇವ ವಂದಿಸಿದರು. ಪ್ರದೀಪ್ ಬೊಳ್ಳೂರು ಕಾರ್ಯಕ್ರಮ ನಿರೂಪಿಸಿದರು. ಅಮರ ಸಂಘಟನಾ ಸಮಿತಿಯ ಸದಸ್ಯರಾದ ಪ್ರವೀಣ್ ಕುಲಾಲ್, ಹರ್ಷಿತ್ ದಾತಡ್ಕ, ಮಿಥುನ್ ಪೈಲಾರು, ಶಿವಪ್ರಸಾದ್ ದೊಡ್ಡಿಹಿತ್ಲು, ಮನೀಶ್ ಕಡಪಳ, ಸಾತ್ವೀಕ್ ಮಡಪ್ಪಾಡಿ, ರಂಜೀತ ಸಂಕೇಶ, ಚೈತ್ರಶ್ರೀ ನಾರ್ಣಕಜೆ ಇವರುಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಹಾಗೂ ನೂರಾರು ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡುರು.