
ಐವರ್ನಾಡಿನ ಪ್ರಗತಿಪರ ಕೃಷಿಕರಾದ ಸಿ.ಕೆ. ನವೀನ್ ಚಾತುಬಾಯಿಯವರಿಗೆ ಬೆಂಗಳೂರಿನ ಫ್ಲೋರಿಡಾ ಸಂಸ್ಥೆಯಿಂದ ಕರ್ನಾಟಕ ಜ್ಯೋತಿ ಅವಾರ್ಡ್ -2025 ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಬೆಂಗಳೂರಿನ ಫ್ಲೋರಿಡಾ ಶಿಕ್ಷಣ ಸಂಸ್ಥೆಯ ಸಿಲ್ವರ್ ಜುಬಿಲಿ ಕಾರ್ಯಕ್ರಮದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ನವೀನ್ ರವರಿಗೆ ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ 2025ರ ಕರ್ನಾಟಕ ಜ್ಯೋತಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ನವೀನ್ ರವರು ಈಗಾಗಲೇ ಕರ್ನಾಟಕ ಸರ್ಕಾರದ ರಾಜ್ಯ ಕೃಷಿ ಪಂಡಿತ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.
