
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೊಲ್ಲಮೊಗ್ರು “ಎ” ಒಕ್ಕೂಟದ ಶ್ರೀತುಳಸಿ ಸಂಘದ ಸದಸ್ಯರಾದ ಶ್ರೀಮತಿ ಶಾಂತಕುಮಾರಿ ಎಂಬುವವರ ಪತಿ ಶ್ರೀಧರ ನಾಯರ್ ರವರಿಗೆ ಅನಾರೋಗ್ಯ ನಿಮಿತ್ತ ಕ್ರಿಟಿಕಲ್ ಫಂಡ್ ನಿಂದ 35,000 ರೂಪಾಯಿ ಮಂಜೂರಾಗಿದ್ದು, ಇದರ ಮಂಜೂರಾತಿ ಪತ್ರವನ್ನು ಜೂ.07 ರಂದು ಶ್ರೀಧರ ನಾಯರ್ ರವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ಮಾಧವ ಚಾಂತಾಳ, ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೋಹಿನಿ ಕಟ್ಟ, ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶೇಖರ್ ಅಂಬೆಕಲ್ಲು, ಜನಜಾಗೃತಿ ವೇದಿಕೆಯ ಸದಸ್ಯರಾದ ಮಣಿಕಂಠ ಕೊಳಗೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಇವರುಗಳು ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿ ಸಾವಿತ್ರಿ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.
