
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ.ಕ.ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ನಾಳೆ (ಜೂ.18 ರಂದು ) ಸುಳ್ಯಕ್ಕೆ ಆಗಮಿಸಲಿದ್ದು ವಿವಿಧ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸುಳ್ಯ ತಾಲ್ಲೂಕು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಛೇರಿ ಕಟ್ಟಡ, ಸುಳ್ಯ ತಾಲ್ಲೂಕು ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ block public health lab (BPHL) ಮತ್ತು ನೂತನ ಶವಾಗಾರ, ಅರಂಬೂರಿನಲ್ಲಿ ನಿರ್ಮಾಣವಾಗಿರುವ ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಛೇರಿ ಕಟ್ಟಡ ಸೇರಿದಂತೆ ನೂತನವಾಗಿ ರಚನೆಗೊಂಡ ಸುಳ್ಯ ನಗರ ಯೋಜನಾ ಪ್ರಾಧಿಕಾರ ಆಡಳಿತ ಕಛೇರಿ ಉದ್ಘಾಟನೆಯಲ್ಲಿ ಪಾಲ್ಗೊಂಡು ನಂತರ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.
