Ad Widget

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ – ನೂತನ ಡಿಸಿ ಯಾಗಿ ದರ್ಶನ್ ಎಚ್.ವಿ‌.


ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೇರಿದಂತೆ ರಾಜ್ಯ ಸರಕಾರ ಜೂ.17 ರಂದು ಮಾಡಿದ ಆದೇಶದಲ್ಲಿ ಹದಿನಾರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ. ಮುಲ್ಲೈ ಮುಹಿಲನ್ ಇವರನ್ನು ನೋಂದಣಿ ಮತ್ತು ಅಂಚೆಚೀಟಿಗಳ ಆಯುಕ್ತರಾಗಿ ವರ್ಗಾಯಿಸಿ ಆದೇಶಿಸಿದೆ.

ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಸರಕಾರ ನೇಮಿಸಿದೆ. ದರ್ಶನ್ ಎಚ್ ವಿ ಅವರ ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದ್ದು, ಅವರು ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!