Ad Widget

ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಹಲವು ಪ್ರಶಸ್ತಿಗಳು

ಶ್ರೀ ವೀರಮಾರುತಿ ಸೇವಾ ಟ್ರಸ್ಟ್(ರಿ.) ಮೂಡಬಿದ್ರೆ ಇವರ ಆಶ್ರಯದಲ್ಲಿ ಯೋಗಶ್ರೀ ಯೋಗ ಬಳಗ ಮಂಗಳೂರು, 36ನೇ ವರ್ಷದ ಮೂಡಬಿದಿರೆ ಶ್ರೀ ಶಾರದೋತ್ಸವ ಪ್ರಯುಕ್ತ ನಡೆದ ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯು ಸೆ.29 ಸೋಮವಾರದಂದು ಮೂಡಬಿದ್ರೆಯ ಶ್ರೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ತನುಷ್ ಎಂ‌.ಹೆಚ್ ಪ್ರಥಮ ಸ್ಥಾನ ಹಾಗೂ ಅಂತಿಮ ಸುತ್ತಿನ ಚಾಂಪಿಯನ್ ಆಫ್ ಚಾಂಪಿಯನ್ ಸ್ಪರ್ಧೆಯಲ್ಲಿ ವೈಯಕ್ತಿಕ ಬಾಲಕರ ವಿಭಾಗದಲ್ಲಿ “ಯೋಗ ವಿಶಾರದ” ಬಿರುದು ಪಡೆದುಕೊಂಡಿರುತ್ತಾನೆ.
ಕಿರಿಯ ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಪ್ರಣನ್ಯ ಕುದ್ಪಾಜೆ ಪ್ರಥಮ ಸ್ಥಾನ, ಕಿರಿಯ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಆಶ್ರಿತ್ ಎ.ಸಿ ದ್ವಿತೀಯ ಸ್ಥಾನ, ಹಿರಿಯ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಶ್ರೀಶೌರ್ಯ ಎ.ಸಿ ದ್ವಿತೀಯ ಸ್ಥಾನ, ಹಿರಿಯ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಶ್ರೀಶಾಂತ್ ಎನ್ ರೈ ತೃತೀಯ ಸ್ಥಾನ ಪಡೆದಿದ್ದಾರೆ.
ಇವರು ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ಶಿಕ್ಷಕರಾದ ಸಂತೋಷ್ ಮುಂಡಕಜೆ ಹಾಗೂ ಪ್ರಶ್ವಿಜಾ ಸಂತೋಷ್ ಇವರ ಬಳಿ ಮಾರ್ಗದರ್ಶನ ಪಡೆಯುತ್ತಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading