Ad Widget

ಸ್ವರ್ಣೋದ್ಯಮಿ ಜಿ.ಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್‌ ಆಚಾರ್ಯ ಅವರ 101ನೇ ಜನ್ಮದಿನಾಚರಣೆ ಪ್ರಯುಕ್ತ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್ ಕೊಡುಗೆ

ಪ್ರಖ್ಯಾತ ಸ್ವರ್ಣೋದ್ಯಮಿ ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥಾಪಕ ಜಿ.ಎಲ್‌. ಆಚಾರ್ಯ ಅವರ 101ನೇ ಜನ್ಮದಿನವನ್ನು ನವೆಂಬರ್ 13ರಂದು ಪುತ್ತೂರಿನ ಸಂಸ್ಥೆಯಲ್ಲಿ ಆಚರಿಸಲಾಯಿತು.

ಈ ಸವಿನೆನಪಿಗಾಗಿ ನ.14 ರಂದು ಪುತ್ತೂರಿನ ರಾಮಕೃಷ್ಣ ಆಶ್ರಮಕ್ಕೆ 10 ಡಬಲ್ ಡೆಕ್ಕರ್ ಕಾಟ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು. ಇದರಿಂದ ಆಶ್ರಮದ 20 ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ.

ಈ ಕಾರ್ಯಕ್ರಮದಲ್ಲಿ ಜ್ಯುವೆಲ್ಲರ್ಸ್‌ನ ಆಡಳಿತ ನಿರ್ದೇಶಕ ಜಿ.ಎಲ್. ಬಲರಾಮ ಆಚಾರ್ಯ, ಆಶ್ರಮದ ಕಾರ್ಯದರ್ಶಿ ಗುಣಪಾಲ್ ಜೈನ್, ಸದಸ್ಯ ಹರೇಕೃಷ್ಣ ಕಡಂಬಳಿತ್ತಾಯ ಮತ್ತು ಜಂಟಿ ಕಾರ್ಯದರ್ಶಿ ವತ್ಸಲ ರಾಜಿ ಉಪಸ್ಥಿತರಿದ್ದರು.

ಜಿ.ಎಲ್‌. ಆಚಾರ್ಯ ಅವರು ಕೊಡುಗೈ ದಾನಿಯಾಗಿ ಹೆಸರುವಾಸಿಯಾಗಿದ್ದರು ಮತ್ತು ತಮ್ಮ ಆದಾಯದ ಒಂದು ಭಾಗವನ್ನು ಸಮಾಜ ಸೇವೆಗೆ ಮೀಸಲಿಡುತ್ತಿದ್ದರು. ಅವರ ಹಾದಿಯನ್ನೇ ಅನುಸರಿಸಿರುವ ಅವರ ಪುತ್ರ ಜಿ.ಎಲ್ ಬಲರಾಮ ಆಚಾರ್ಯ ಹಾಗೂ ಮೊಮ್ಮಕ್ಕಳಾದ ಲಕ್ಷ್ಮೀಕಾಂತ ಬಿ. ಆಚಾರ್ಯ ಮತ್ತು ಸುಧನ್ವ ಬಿ. ಆಚಾರ್ಯ ಅವರು ಸಂಸ್ಥೆಯನ್ನು ಮುನ್ನಡೆಸುತ್ತಿದ್ದು, ಸಂಸ್ಥೆಯ ಆದಾಯದ ಒಂದು ಪಾಲನ್ನು ಸಮಾಜಮುಖಿ ಕಾರ್ಯಗಳಿಗಾಗಿ ವಿನಿಯೋಗಿಸುತ್ತಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading