Ad Widget

ಗುತ್ತಿಗಾರು : ಜೀವರಕ್ಷಕ್ ಮಾಹಿತಿ ಕಾರ್ಯಾಗಾರ

ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇವರ ಆಶ್ರಯದಲ್ಲಿ  ಪದವಿಪೂರ್ವ ಕಾಲೇಜು ಗುತ್ತಿಗಾರು ಇವರ ಸಹಕಾರದೊಂದಿಗೆ ಪದವಿಪೂರ್ವ ಕಾಲೆಜು ಗುತ್ತಿಗಾರು ಇಲ್ಲಿ ಜೀವರಕ್ಷಕ್ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸರಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞರು ಡಾ/ ಶಾಲಿನಿ ವಿ.ಎಲ್ ಇವರು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ ನೀಡಿದರು. ಕಾರ್ಯಕ್ರಮ ಉದ್ಘಾಟನೆಯನ್ನು  ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ ಇವರು ನೆರವೇರಿಸಿದರು. ಸಭೆಯ ಅಧ್ಯಕ್ಷರಾಗಿ ಶ್ರೇಯಸ್ ಮುತ್ಲಾಜೆ ಹಾಗೂ ಅತಿಥಿಗಳಾಗಿ ಮಂಡಳಿ ಅಧ್ಯಕ್ಷ ಪವನ್ ಪಲ್ಲತಡ್ಕ, ಮುಖ್ಯೋಪಾಧ್ಯಾಯರು ಪೂರ್ಣಿಮಾ ಅಂಬೆಕಲ್ಲು, ವಿಶ್ವನಾಥ ಸಾಲ್ತಾಡಿ ಹಾಗೂ ಕೇಶವ ಗೌಡ ಕಾಂತಿಲ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಅಚ್ಚುತ ಗುತ್ತಿಗಾರು, ವಿನ್ಯಾಸ್ ಕೊಚ್ಚಿ, ಶಿವಪ್ರಕಾಶ್ ಕಡಪಳ ಉಪಸ್ಥಿತರಿದ್ದರು. ಮಂಡಳಿಯ ಉಸ್ತುವಾರಿ ನಿರ್ದೇಶಕ ಸತೀಶ್ ಮೂಕಮಲೆ ಸ್ವಾಗತಿಸಿದರು ಮಂಡಳಿಯ ಪ್ರಧಾನ ಕಾರ್ಯದರ್ಶಿ ಮುರಳಿ ನಳಿಯಾರು ಇವರು ವಂದನಾರ್ಪಣೆ ಮಾಡಿದರು ಶಾಲಾ ಶಿಕ್ಷಕಿ ಸಿಂಚನ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading