Ad Widget

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕ ಅಧ್ಯಕ್ಷರಾಗಿ ಮಂಜುನಾಥ್ ಕಂದಡ್ಕ ನೇಮಕ

ಡಿ.9 ಮಂಗಳವಾರದಂದು ಜಿಲ್ಲಾ ಕಾಂಗ್ರೆಸ್ ಭವನ ಮಲ್ಲಿಕಟ್ಟೆಯಲ್ಲಿ ಜಿಲ್ಲಾ ಅಸಂಘಟಿತ ಘಟಕದ ಅಧ್ಯಕ್ಷರಾದ ಅಬ್ಬಾಸ್ ಅಲಿ ಅವರ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕ ಘಟಕದ ಮಾಸಿಕ ಸಭೆ ನಡೆಯಿತು. ಸುಳ್ಯ ತಾಲೂಕು ಅಸಂಘಟಿತ ಅಧ್ಯಕ್ಷರಾದ ದಿವಂಗತ ಎ.ಎಸ್ ಚಂದ್ರಲಿಂಗಂ ರವರ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ್ ರವರ ಶಿಪಾರಸ್ಸಿನ ಮೇರೆಗೆ ಮಂಜುನಾಥ ಕಂದಡ್ಕ ರವರನ್ನು ನೇಮಕಗೊಳಿಸಿ ಆದೇಶ ಮಾಡಿರುತ್ತಾರೆ. ಈ ಸಭೆಗೆ ಜಿಲ್ಲಾ ಅಸಂಘಟಿತ ಪ್ರಧಾನ ಕಾರ್ಯದರ್ಶಿಯಾದ ಜ್ಞಾನಶೀಲನ್ ಕಲ್ಲುಗುಂಡಿ   ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗ ಜಂಟಿ ಕಾರ್ಯದರ್ಶಿಯವರಾದ ಸುರೇಶ್ ಕುಮಾರ್, ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯರು ಹಾಗೂ ಕರ್ನಾಟಕ ಪ್ಲಾಂಟೇಶನ್ ಅಂಡ್ ಇಂಡಸ್ಟ್ರಿಯಲ್ ವರ್ಕರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷರಾದ ಶಿವಕುಮಾರ್ ಕಂದಡ್ಕ, ತೋಟತೊಳಿಲಾಲರ್ ಸಂಘದ ಪ್ರಧಾನ ಕಾರ್ಯದರ್ಶಿ ಸರವಣನ್ ಆರ್ ಬೇಂಗಮಲೆ, ತೋಟ ತೊಳಿಲಾಲರ್ ಸಂಘದ ಉಪಾಧ್ಯಕ್ಷರಾದ ಅರುಣಾಚಲಂ ಕೂಟೇಲ್,  ಆರೋಗ್ಯರಕ್ಷಾ ಸಮಿತಿ ಸದಸ್ಯರು ತಾಲೂಕು ಆಸ್ಪತ್ರೆ ಸುಳ್ಯ ಚಂದ್ರನ್ ವಿ   ಕೂಟೇಲ್, ಸುಳ್ಯ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ದೊಡ್ಡಡ್ಕ, ಸುಳ್ಯ ವಿಧಾನಸಭಾ ಯುವ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಪ್ರೇಮ ಹರೀಶ್ವರನ್ ಸಭೆಯಲ್ಲಿ ಉಪಸ್ಥಿತದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading