ಸುಳ್ಯದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ”

ಪುತ್ತೂರಿನ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ತಾ.11.04.2026ರಿಂದ 20.04.2026ರವರೆಗೆ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ ಗ್ರಾಂಗೆ ರೂ. 500/-ರವರೆಗೆ ರಿಯಾಯಿತಿ ನೀಡಲಾಗುವುದು, ಅದೇ ರೀತಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ ಗೆ ರೂ.7,000/-ರವರೆಗೆ ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ರೂ.6,000/- ರಿಯಾಯಿತಿ ನೀಡಲಾಗುವುದು. ಅಲ್ಲದೆ 916 ಚಿನ್ನಾಭರಣಕ್ಕಿಂತ 2400/- ರೂಪಾಯಿ ಅಂದಾಜು ಕಡಿಮೆ ಬೆಲೆಯಲ್ಲಿ 18ಕ್ಯಾರೆಟ್ ಹಾಲ್‌ಮಾರ್ಕ್ ಚಿನ್ನಾಭರಣಗಳು ದೊರೆಯುತ್ತದೆ. ಇದು ದಿನನಿತ್ಯದ ಬಳಕೆಗೆ ಸೂಕ್ತವಾಗಿರುತ್ತದೆ. ಹೊಸ ಚಿನ್ನ ಖರೀದಿ ಮಾಡುವವರಿಗೆ ಹೊಸ ಪರ್ಯಾಯವಾಗಿರುತ್ತದೆ. ಆಭರಣ ಚಿನ್ನದ ಬೆಲೆ ಪ್ರತೀ ಗ್ರಾಂಗೆ 17,000/-ಕ್ಕೆ ಏರಿದ್ದು, ಈಗ ಚಿನ್ನದ ದರದಲ್ಲಿ ಇಳಿಕೆಯಾಗಿರುವುದರಿಂದ ಗ್ರಾಹಕರಿಗೆ ಚಿನ್ನ ಖರೀದಿಸಲು ಇದು ಒಂದು ಸುವರ್ಣಾವಕಾಶವಾಗಿದೆ. ವಿವಿಧ ಬಗೆಯ ಚಿನ್ನಾಭರಣಗಳ ಅಮೋಘ ಸಂಗ್ರಹವಿದ್ದು, ಸಾಂಪ್ರದಾಯಿಕ ಹಾಗೂ ಆಧುನಿಕ ವಿನ್ಯಾಸಗಳ ಚಿನ್ನಾಭರಣಗಳು, ಬೆಳ್ಳಿ ಮತ್ತು ವಜ್ರಾಭರಣಗಳ ವೈವಿಧ್ಯಮಯ ಸಂಗ್ರಹ ಲಭ್ಯವಿದ್ದು, ಎಲ್ಲಾ ವಯೋಮಾನದ ಗ್ರಾಹಕರ ಅಗತ್ಯಗಳಿಗೆ ತಕ್ಕಂತೆ ವಿನ್ಯಾಸಗೊಳಿಸಲಾಗಿದೆ. ಸಮಾಜದ ಎಲ್ಲಾ ವರ್ಗದ ಜನರ ಅಭಿರುಚಿಗೆ ತಕ್ಕಂತೆ ಚಿನ್ನ,ಬೆಳ್ಳಿ ಮತ್ತು ವಜ್ರಾಭರಣಗಳ ವಿನೂತನ ಕಲೆಕ್ಷನ್‌ಗಳು ಇಲ್ಲಿ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ. ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ದವಾಗಿದ್ದು, ಪರಿಪೂರ್ಣತೆ ಮತ್ತು ಅಸಾಧಾರಣ ಕರಕುಶಲತೆಯ ನೈಪುಣ್ಯತೆಯಿಂದ ಹೊರಹೊಮ್ಮಿರುವ ಈ ವಿಶಿಷ್ಟ ಸಂಗ್ರಹ ಎಲ್ಲರ ಕಣ್ಮನ ಸೆಳೆಯುತ್ತದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading