ಬಾಳಿಲ : ವಿದ್ಯಾ ಬೋಧಿನೀ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

ಬಾಳಿಲ ಜೂನ್ 06 : ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಯಕ್ಷ ಶಿಕ್ಷಣ ನಾಟ್ಯ ತರಬೇತಿಯು ವಿದ್ಯಾ ಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಉದ್ಘಾಟನೆಗೊಂಡಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಜಿಲ್ಲೆಯಾದ್ಯಂತ ವಿವಿಧ ಶಾಲೆಗಳಲ್ಲಿ ಯಕ್ಷಗಾನ ನಾಟ್ಯ ತರಬೇತಿಯು ನಡೆದುಕೊಂಡು ಬರುತ್ತಿದೆ ಪ್ರಸ್ತುತ 2026-27ನೆಯ ಶೈಕ್ಷಣಿಕ ವರ್ಷದ ಯಕ್ಷ ಶಿಕ್ಷಣ ಉಚಿತ ನಾಟ್ಯ ತರಬೇತಿಗೆ ದೀಪ ಬೆಳಗಿಸಿ ಚಾಲನೆ ನೀಡಲಾಯಿತು. ಉದ್ಘಾಟನೆಯನ್ನು ನೆರವೇರಿಸಿದ ಶಾಲಾ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್ ಅವರು ತರಗತಿಗೆ ಶುಭಹಾರೈಸಿದರು. ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸುಳ್ಯ ಘಟಕದ ಅಧ್ಯಕ್ಷರಾದ ಪ್ರೀತಮ್ ಬೆಳ್ಳಾರೆ “ಯಕ್ಷಗಾನದ ಶಿಕ್ಷಣವು ಹೆಚ್ಚಿನ ವಿದ್ಯಾರ್ಥಿಗಳನ್ನು ತಲುಪುವಂತಾಗಬೇಕು” ಎಂದರು. ಯಕ್ಷ ಶಿಕ್ಷಣದ ಸುಳ್ಯ ಹಾಗೂ ಪುತ್ತೂರು ತಾಲೂಕುಗಳ ಸಂಚಾಲಕರಾದ ಶ್ರೀ ಪ್ರಶಾಂತ ರೈ ಮುಂಡಾಲುಗುತ್ತು ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು. ವಿದ್ಯಾಬೋಧಿನೀ ಎಜುಕೇಷನಲ್ ಸೊಸೈಟಿಯ ಅಧ್ಯಕ್ಷರಾದ ರಾಧಾಕೃಷ್ಣ ರಾವ್.ಯು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಬಾಳಿಲ ಪರಿಸರದಲ್ಲಿ ಯಕ್ಷಗಾನ ಕ್ಷೇತ್ರದ ಸಾಧಕರನ್ನು ಸ್ಮರಿಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ಮಾತುಗಳನ್ನಾಡಿದರು. ಯಕ್ಷ ಶಿಕ್ಷಣದ ಗುರುಗಳಾದ ಗಿರೀಶ್ ಗಡಿಕಲ್ಲು ಹಾಗೂ ಫೌಂಡೇಶನ್ ನ ಸುಳ್ಯಘಟಕದ ಸದಸ್ಯರಾದ ರಮೇಶ್ ರೈ ಆಗಲ್ಪಾಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ ಮತ್ತು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ಕಾಚಿಲ ಮತ್ತು ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸೀತಾರಾಮ ಕಾಯಾರ ಸಮಾರಂಭಕ್ಕೆ ಸಾಕ್ಷಿಯಾದರು. ಮುಖ್ಯಶಿಕ್ಷಕರಾದ ಉದಯ ಕುಮಾರ ರೈ.ಎಸ್ ಎಲ್ಲರನ್ನೂ ಸ್ವಾಗತಿದರು. ಸಂಸ್ಕೃತ ಶಿಕ್ಷಕ ವೆಂಕಟೇಶ್ ಕುಮಾರ್ ಉಳುವಾನ ಕಾರ್ಯಕ್ರಮವನ್ನು ನಿರ್ವಹಿಸಿ ಕೃತಜ್ಞತಾ ನುಡಿಗಳನ್ನು ಸಮರ್ಪಿಸಿದರು. ಸಮಾರಂಭದ ಬಳಿಕ ಅತಿಥಿ ಕಲಾವಿದರ ಕೂಡುವಿಕೆಯಿಂದ ಶರಸೇತು ಬಂಧ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading