ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ:02-07-2026 ಗುರುವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ
ಮಂಡೆಕೋಲು, ಸುಳ್ಯ
ಮೊ: 9591969197

. . . . . . . . .

01,🐏ಮೇಷರಾಶಿ🐏*

. . . . . . .

📃,ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ. ವೃತ್ತಿಪರ ವ್ಯವಹಾರಗಳಲ್ಲಿ ಹೆಚ್ಚಿನ ಶ್ರಮಕ್ಕೆ ಅಲ್ಪ ಪ್ರತಿಫಲ ದೊರೆಯುತ್ತದೆ. ಕುಟುಂಬ ಸದಸ್ಯರ ಮಾತುಗಳು ಭಾವನಾತ್ಮಕವಾಗಿ ನೋವುಂಟು ಮಾಡುತ್ತವೆ. ಕೆಲಸದ ವಾತಾವರಣವು ಒತ್ತಡದಿಂದ ಕೂಡಿರುತ್ತದೆ. ನಿರುದ್ಯೋಗ ಪ್ರಯತ್ನಗಳು ಸ್ವಲ್ಪಮಟ್ಟಿಗೆ ನಿಧಾನವಾಗುತ್ತವೆ,

ಗಮನಿಸಿ:- ಇಂದು ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವಿರಿ,

ಪರಿಹಾರ:-ಕಾಗೆಗಳಿಗೆ ಆಹಾರ ನೀಡಿ ಶುಭವಾಗುವುದು,

*02,🐂ವೃಷಭರಾಶಿ🐂*

📃,ಹೊಸ ವಾಹನ ಮತ್ತು ವಸ್ತು ಲಾಭವನ್ನು ಪಡೆಯುತ್ತೀರಿ. ಹಳೆಯ ಸ್ನೇಹಿತರೊಂದಿಗೆ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಕೈಗೊಂಡ ವ್ಯವಹಾರದಲ್ಲಿ ಯಶಸ್ಸು ಸಾದಿಸುತ್ತೀರಿ. ಆತ್ಮೀಯರಿಂದ ಅಮೂಲ್ಯ ಮಾಹಿತಿಯನ್ನು ಸಂಗ್ರಹಿಸುತ್ತೀರಿ. ಮನೆಯ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ವೃತ್ತಿಪರ ವ್ಯವಹಾರಗಳು ಸೂಕ್ತವಾಗಿರುತ್ತವೆ,

ಗಮನಿಸಿ:- ಇಂದು ಉದ್ಯೋಗದಲ್ಲಿನ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ,

ಪರಿಹಾರ:-ಶ್ರೀ ಗುರು ರಾಘವೇಂದ್ರ ಸ್ವಾಮಿಯ ಪ್ರಾರ್ಥನೆ ಮಾಡಿ, 

*03,👥ಮಿಥುನ ರಾಶಿ👥*

📃,ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಉದ್ಯೋಗಗಳಲ್ಲಿ ಶ್ರಮ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಪ್ರಮುಖ ವ್ಯವಹಾರಗಳಲ್ಲಿ ಆತುರದ ನಿರ್ಧಾರ ಕೈಗೊಳ್ಳುವುದರಿಂದ ನಷ್ಟ ಉಂಟಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ನಿಧಾನವಾಗಿ ಸಾಗುತ್ತವೆ,

ಗಮನಿಸಿ:-ಇಂದು ಪ್ರಯಾಣದಿಂದ ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ,

ಪರಿಹಾರ:- ನಿಮ್ಮಗುರುಗಳ ಮಾರ್ಗದರ್ಶನ ಪಡೆಯಿರಿ, 

*04,🦀ಕಟಕ ರಾಶಿ🦀*

📃,ಕೌಟುಂಬಿಕ ವಿಚಾರಗಳಲ್ಲಿ ಭಿನ್ನಭಿಪ್ರಾಯಗಳು ದೂರವಾಗುತ್ತವೆ. ಬರಬೇಕಾದ ಹಣ ಸಕಾಲಕ್ಕೆ ಸಿಗಲಿದೆ. ಪ್ರಮುಖ ವ್ಯವಹಾರಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಹೊಸ ವಸ್ತುಗಳ ಖರೀದಿ ಯೋಗವಿದೆ. ವೃತ್ತಿಪರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭಕ್ಕಿಂತ ಹೆಚ್ಚಿನ ಲಾಭವನ್ನು ಪಡೆಯುತ್ತೀರಿ,

ಗಮನಿಸಿ:-ಇಂದು ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ,

ಪರಿಹಾರ:- ಶಿವ ಪಂಚಾಕ್ಷರಿ ಮಂತ್ರ ಪಠಿಸಿ,

*05,🦁ಸಿಂಹ ರಾಶಿ🦁*

📃,ಹಣಕಾಸಿನ ಏರಿಳಿತದಿಂದ ಹೊರಬರುತ್ತೀರಿ. ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಭೋಜನ, ಮನೋರಂಜನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ,

ಗಮನಿಸಿ:- ಇಂದು ಉದ್ಯೋಗಸ್ಥರು ಅಧಿಕಾರಿಗಳ ಕೃಪೆಗೆ ಪಾತ್ರರಾಗುತ್ತೀರಿ,

ಪರಿಹಾರ:-ತಾಯಿ ಮಹಾಲಕ್ಷ್ಮಿಯ ಪ್ರಾರ್ಥನೆ ಮಾಡಿ,

*06,👩‍🦳ಕನ್ಯಾ ರಾಶಿ👩‍🦳*

📃,ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ದೂರದ ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು. ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ. ಉದ್ಯೋಗಿಗಳಿಗೆ ಸ್ಥಾನ ಚಲನೆ ಸೂಚನೆಗಳಿವೆ, ಗಮನಿಸಿ:- ಇಂದು ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ,

ಪರಿಹಾರ:-ನಿಮ್ಮ ಗ್ರಾಮ ದೇವತೆಯನ್ನು ಪ್ರಾರ್ಥಿಸಿ,

*07,⚖️ತುಲಾ ರಾಶಿ⚖️*

📃,ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುವಿರಿ. ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಮನೆಯ ಹೊರಗೆ ಸಾಲದ ಒತ್ತಡ ಹೆಚ್ಚಾಗುತ್ತದೆ. ಕೈಗೊಂಡ ಕೆಲಸಗಳಲ್ಲಿ ಅಡೆಚಣೆಗಳು ಎದುರಾಗುತ್ತವೆ. ವೃತ್ತಿ ವ್ಯಾಪಾರದಲ್ಲಿ ಪಾಲುದಾರರೊಂದಿಗಿನ ವಿವಾದಗಳಿಂದ ದೂರವಿರುವುದು ಉತ್ತಮ,

ಗಮನಿಸಿ:- ಇಂದು ನಿರುದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ,

ಪರಿಹಾರ:-ಶ್ರೀ ಆಂಜನೇಯನ ದರ್ಶನ ಮಾಡಿ,

*08,🦂ವೃಶ್ಚಿಕ ರಾಶಿ🦂*

📃,ನಿರುದ್ಯೋಗಿಗಳಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ, ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡಲಿವೆ. ದೂರ ಪ್ರಯಾಣಗಳು ಲಾಭದಾಯಕವಾಗಿರುತ್ತವೆ. ಕುಟುಂಬ ಸದಸ್ಯರೊಂದಿಗೆ ಸಾಮರಸ್ಯ ಹೆಚ್ಚಾಗುತ್ತದೆ. ಕೆಲವು ವ್ಯವಹಾರಗಳಲ್ಲಿ ಸಂಗಾತಿಯ ಸಹಾಯ ತೆಗೆದುಕೊಳ್ಳುವುದು ಒಳ್ಳೆಯದು,

ಗಮನಿಸಿ:-ಇಂದು ಉದ್ಯೋಗಗಳಲ್ಲಿ ಅಪೇಕ್ಷಿತ ಪ್ರಗತಿ ಸಾಧಿಸಲಾಗುತ್ತದೆ,

ಪರಿಹಾರ:-ನವಗ್ರಹ ಪ್ರದಾಕ್ಷಣೆ ಹಾಕಿ ಶುಭವಾಗುವುದು,

*09,🏹ಧನಸ್ಸು ರಾಶಿ🏹*

📃,ಸಮಾಜದ ಪ್ರಮುಖ ವ್ಯಕ್ತಿಗಳಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ಆರ್ಥಿಕ ವಾತಾವರಣ ಉತ್ತಮವಾಗಿರುತ್ತದೆ. ಅಗತ್ಯಕ್ಕೆ ತಕ್ಕಂತೆ ಸಂಬಂಧಿಕರಿಂದ ನೆರವು ದೊರೆಯಲಿದೆ. ವೃತ್ತಿ ವ್ಯವಹಾರದಲ್ಲಿ ಸ್ವಂತ ನಿರ್ಧಾರಗಳು ಕೂಡಿ ಬರುತ್ತವೆ. ಉದ್ಯೋಗದಲ್ಲಿ ನಿಮ್ಮ ದಕ್ಷತೆಯನ್ನು ಅಧಿಕಾರಿಗಳು ಗುರುತಿಸುತ್ತಾರೆ,

ಗಮನಿಸಿ:- ಇಂದು ವ್ಯವಹಾರಗಳು ಲಾಭದಾಯಕವಾಗಿರುತ್ತವೆ,

ಪರಿಹಾರ:-ಗಾಯತ್ರಿ ಮಂತ್ರ ಪಠಣೆ ಮಾಡಿ, 

*10,🐊ಮಕರ ರಾಶಿ🐊*

📃,ಆದಾಯಕ್ಕಿಂತ ಖರ್ಚುಗಳು ಅಧಿಕವಾಗಿರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಸಮಸ್ಯೆಗಳು ಎದುರಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ಅನಿವಾರ್ಯವಾಗಿ ಮಾತಿನ ಚಕಮಕಿ ನಡೆಯುತ್ತದೆ, ಹೆಚ್ಚುವರಿ ಜವಾಬ್ದಾರಿಗಳಿಂದ ನೌಕರರಿಗೆ ವಿಶ್ರಾಂತಿ ಪಡೆಯಲು ಸಾಧ್ಯವಾಗುವುದಿಲ್ಲ. ಸ್ನೇಹಿತರೊಂದಿಗೆ ಭಿನ್ನಭಿಪ್ರಾಯಗಳು ಉಂಟಾಗುತ್ತವೆ,

ಗಮನಿಸಿ:-ಇಂದು ವಾಹನ ಪ್ರಯಾಣದಲ್ಲಿ ಹೆಚ್ಚು ಜಾಗರೂಕರಾಗಿರಿ,

ಪರಿಹಾರ:-ಅನಾಥರಿಗೆ ಅನ್ನದಾನ ಮಾಡಿ,

*11,⚱️ಕುಂಭ ರಾಶಿ⚱️*

📃,ಮಾಡುವ ಕೆಲಸದಲ್ಲಿ ಖರ್ಚು ಮತ್ತು ಶ್ರಮ ಅಧಿಕವಾಗಲಿದೆ. ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಬಂಧುಗಳಿಂದ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾಗುತ್ತವೆ, ವೃತ್ತಿ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗ ವಿಷಯದಲ್ಲಿ ಅಧಿಕಾರಿಗಳು ಚರ್ಚೆಗಳಿಗೆ ಹೋಗದಿರುವುದು ಉತ್ತಮ,

ಗಮನಿಸಿ:- ಇಂದು ನಿರುದ್ಯೋಗ ಪ್ರಯತ್ನಗಳು ನಿಧಾನವಾಗಿ ಸಾಗುತ್ತವೆ,

ಪರಿಹಾರ:-ನಿಮ್ಮ ಪ್ರಯತ್ನಗಳು ನೆರವೇರಲು ತಾಯಿ ದುರ್ಗೆಯನ್ನು ಸುಮ್ಮರಿಸಿಕೊಳ್ಳಿ, 

*12,🐬ಮೀನ ರಾಶಿ🐬*

📃,ಮನೆಯ ಹೊರಗೆ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ ಮತ್ತು ದೂರ ಪ್ರಯಾಣಗಳು ಲಾಭದಾಯಕವಾಗಿರುತ್ತವೆ. ಪ್ರಮುಖ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ, ಗೃಹ ನಿರ್ಮಾಣ ಕಾರ್ಯಗಳು ಚುರುಕುಗೊಳ್ಳುತ್ತವೆ. ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿಯನ್ನು ಸಾಧಿಸುತ್ತೀರಿ, ಗಮನಿಸಿ:-ಉದ್ಯೋಗಿಗಳಿಗೆ ಜವಾಬ್ದಾರಿಗಳಿದ್ದರೂ ನಿಧಾನವಾಗಿ ಪೂರ್ಣಗೊಳ್ಳುತ್ತದೆ,

ಪರಿಹಾರ:-ತಾಯಿ ಚಾಮುಂಡೇಶ್ವರಿಯನ್ನು 

ಪ್ರಾರ್ಥಿಸಿ,


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading