ಪೆರಾಜೆ : ಪತಿಯ ಸಾವಿನ ನೋವಿನಲ್ಲಿ ಆತ್ಮಹತ್ಯೆಗೆ ಶರಣಾದ ಪತ್ನಿ – 2 ವರ್ಷದ ಹಿಂದಷ್ಟೇ ಮದುವೆಯಾಗಿದ್ದ ದಂಪತಿ – ಪತಿ ನಿಧನರಾಗಿ ತಿಂಗಳು ಕಳೆಯುವ ಮುನ್ನವೇ ಪತ್ನಿ ಆತ್ಮಹತ್ಯೆ

ಪತಿ ಮೃತಪಟ್ಟ 28 ದಿನದಲ್ಲಿ ಪತ್ನಿ ಆತ್ಮಹತ್ಯೆ ಶರಣಾದ ಘಟನೆ ಪೆರಾಜೆ ಗ್ರಾಮದ ಹೊದ್ದೆಟ್ಟಿಯಲ್ಲಿ ಸೆ.4ರಂದು ನಡೆದಿದೆ.ರೂಪ (29)ಮೃತಪಟ್ಟ ದುರ್ದೈವಿ. ಇವರು ಪೆರಾಜೆಯವರಾಗಿದ್ದು 8 ವರ್ಷಗಳಿಂದ ಪುತ್ತೂರಿನ ಚೇತನಾ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಎರಡು ವರ್ಷಗಳ ಹಿಂದೆ ಅವರನ್ನು ಸವಣೂರಿನ ಪೆರಿಯಡ್ಕ ದಿನೇಶ ಎಂಬರಿಗೆ ಮದುವೆ ಮಾಡಿಕೊಡಲಾಗಿತ್ತು. ಕೆಲ ದಿನಗಳ ಹಿಂದೆ ಪತಿ...

ಆಮ್ ಆದ್ಮಿ ಪಾರ್ಟಿಯ ನೂತನ ಪದಾಧಿಕಾರಿಗಳ ಆಯ್ಕೆ : ಜಿಲ್ಲಾ ಅಧ್ಯಕ್ಷರಾಗಿ ಡಾ.ವಿಶುಕುಮಾರ್ ಪಂಜ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಎಲಿಮಲೆ, ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ವೇಣುಗೋಪಾಲ್ ಪುಚ್ಚಪ್ಪಾಡಿ

ಆಮ್ ಆದ್ಮಿ ಪಾರ್ಟಿಯ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳನ್ನು ಘೋಷಣೆ ಮಾಡಲಾಗಿದ್ದು ದ.ಕ. ಜಿಲ್ಲಾ  ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಪಂಜದವರಾದಡಾ.ವಿಶುಕುಮಾರ್ ನೇಮಕಗೊಂಡಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಎಲಿಮಲೆ ನೇಮಕಗೊಂಡಿದ್ದಾರೆ. ಸುಳ್ಯ ಗುತ್ತಿಗಾರಿನವರಾದವೇಣುಗೋಪಾಲ ಪುಚ್ಚಪ್ಪಾಡಿ ರಾಜ್ಯ ಜಂಟಿಕಾರ್ಯದರ್ಶಿಯಾಗಿದ್ದಾರೆ. ಜಿಲ್ಲಾ ಸಮಿತಿಗಳ ಅವಧಿ ಮುಗಿದ ಹಿನ್ನಲೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಸುಳ್ಯದವರಾದಅಶೋಕ್ ಎಡಮಲೆ ದ.ಕ.ಜಿಲ್ಲಾಧ್ಯಕ್ಷರಾಗಿದ್ದರು.ನೂತನ ಅಧ್ಯಕ್ಷ...
Ad Widget

ರಕ್ತದಾನ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಶೈಲೇಶ್ ಅಂಬೆಕಲ್ಲು – 102 ಬಾರಿಗೆ ರಕ್ತದಾನ ಮಾಡಿ ಸಾಮಾಜಿಕ ಕಳಕಳಿ ಮೆರೆದ ಜನನಾಯಕ

ರಕ್ತದಾನ ಮಾಡುವ ಮೂಲಕ ಶೈಲೇಶ್ ಅಂಬೆಕಲ್ಲು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.‌ ತಮ್ಮ ಸ್ನೇಹಿತ ಬಳಗದವರೊಂದಿಗೆ ಸೇರಿ 102 ನೇ ಬಾರಿಗೆ ಕೆ ವಿ ಜಿ ಮೆಡಿಕಲ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಅರ್ಥ ಪೂರ್ಣವಾಗಿ ಹುಟ್ಟುಹಬ್ಬದ ಆಚರಣೆಯನ್ನು ಮಾಡುವುದರೊಂದಿಗೆ ಸಾಮಾಜಿಕ ಕಾಳಜಿ ಮೆರೆದಿರುತ್ತಾರೆ. ಶೈಲೇಶ್ ಅಂಬೆಕಲ್ಲು ಅವರ ಜತೆಗೆ ರಾಜೇಶ್ ಅಂಬೆಕಲ್ಲು, ಉದಯ...

ನಾಲ್ಕೂರು : ದಲಿತರ ಮನೆಗೆ ತೆರಳುವ ರಸ್ತೆಗೆ ತಡೆ ಆರೋಪ – ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ತಾಲೂಕು ಕಚೇರಿ ಎದುರು ಧರಣಿ

https://youtu.be/y7psyMxdmbU?si=KIaGpq2tvP9yX3wQ ನಾಲ್ಕೂರು : ದಲಿತರ ಮನೆಗೆ ತೆರಳುವ ರಸ್ತೆಗೆ ತಡೆ ಆರೋಪ - ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ತಾಲೂಕು ಕಚೇರಿ ಎದರು ಧರಣಿ ನಾಲ್ಕೂರು ಗ್ರಾಮದ ದಲಿತ ನಿವಾಸಿಗಳು ವಾಸಿಸುತ್ತಿದ್ದ ಮನೆಗಳನ್ನು ಸಂಪರ್ಕಿಸುವ ರಸ್ತೆಯನ್ನು ಸ್ಥಳೀಯರೋರ್ವರು ಕಣಿ ನಿರ್ಮಿಸಿ ತಡೆ ಮಾಡಿದ್ದಾರೆ ಎಂದು ಆರೋಪಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ಮತ್ತು ವಿವಿಧ ದಲಿತ ಸಂಘಟನೆಯ...

ನನಗೆ ಅಧಿಕಾರದಲ್ಲಿ ಕೂರಲು ಗೊತ್ತಿದೆ ಪಕ್ಷಕ್ಕಾಗಿ ಸಾಮಾನ್ಯ ಕಾರ್ಯಕರ್ತನಾಗಲು ಗೊತ್ತಿದೆ : ರಮಾನಾಥ ರೈ – ಕಾಂಗ್ರೆಸ್ ನಲ್ಲಿರುವ ಗೊಂದಲ ಪರಿಹಾರಕ್ಕೆ ಬ್ಲಾಕ್ ಸಮಿತಿ ಬದಲಾಯಿಸಲು ಕಾರ್ಯಕರ್ತರ ಒತ್ತಡ

ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ನನಗೆ ನಾಯಕನಾಗಿಯು ಗೊತ್ತಿದೆ ಸಾಮಾನ್ಯ ಕಾರ್ಯಕರ್ತನಾಗಿಯು ಇರಲು ಗೊತ್ತಿದೆ, ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದು ಸುಳ್ಯದ ನಾಯಕರನ್ನು ಉದ್ದೇಶಿಸಿ ಮಾಜಿ ಸಚಿವರಾದ ಬಿ.ರಮನಾಥ ರೈ ಹೇಳಿದ್ದಾರೆಂದು ಕೇಳಿಬಂದಿದೆ. ಸೆ.3 ರಂದು ಸುಳ್ಯದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ರಮಾನಾಥ ರೈ ಅವರನ್ನು ಸುಳ್ಯದ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು....

ಸುಳ್ಯ : ಸೈಂಟ್ ಜೋಸೆಫ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಸನ್ಮಾನ

ಸುಳ್ಯದ ಸಂತ ಜೋಸೆಫ್ ಶಾಲೆಯಲ್ಲಿ ಪೋಷಕರ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ, ಆಡಳಿತ ಮಂಡಳಿ ಯವರಿಗೆ, ಭೋದಕೇತರ ಸಿಬ್ಬಂದಿಗಳಿಗೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.ಪೋಷಕರ ಸಂಘದ ಅಧ್ಯಕ್ಷ ಜೆ ಕೆ ರೈ, ಗುರುಸ್ವಾಮಿ, ಗುರುಪ್ರಸಾದ ರೈ, ಧನ್ಯ, ಉಷಾ, ಶಿವಕುಮಾರ್, ಶೋಭಿತ, ವತ್ಸಲ, ವಿದ್ಯಾ, ಉದಯ, ಜೆನೆಟ್,...

ಕೇರಳದಲ್ಲಿ ಚಿನ್ನ ಕಳ್ಳತನ ಮಾಡಿ ಸುಳ್ಯದಲ್ಲಿ ಮಾರಾಟ – ಕಳ್ಳರನ್ನು ಸುಳ್ಯಕ್ಕೆ ಕರೆತಂದು ಮಹಜರು

ಕೇರಳದಲ್ಲಿ ಸರ ಕಳವುಗೈದು ಸುಳ್ಯದಲ್ಲಿ ಮಾರಾಟ ಮಾಡಿ ಇದೀಗ ಕೇರಳ ಪೋಲಿಸರ ಕೈಗೆ ಸಿಕ್ಕಿಬಿದ್ದು ಸುಳ್ಯಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದ ಬಗ್ಗೆ ವರದಿಯಾಗಿದೆ. ಘಟನೆಯ ವಿವರ :ಕೇರಳದಲ್ಲಿ ಚಿನ್ನದ ಸರವನ್ನು ಕಳವುಗೈದ ಕಳ್ಳರು ಸುಳ್ಯದ ಚಿನ್ನದ ಅಂಗಡಿಯೋಂದಕ್ಕೆ ಆಗಮಿಸಿ ನಾವುಸುಳ್ಯದ ಕಾಲೇಜೊಂದರಲ್ಲಿ ಓದುತ್ತಿದ್ದೇವೆ. ನಮ್ಮ ಬಳಿ ಫೀಸ್ ಕಟ್ಟುವುದಕ್ಕೂ ಹಣವಿಲ್ಲ. ದಯಮಾಡಿ ಸಹಾಯ ಮಾಡಿ...

ಜರ್ನಲಿಸ್ಟ್ ಯೂನಿಯನ್
ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಈಶ್ವರ್ ವಾರಣಾಶಿ, ಕಾರ್ಯದರ್ಶಿಯಾಗಿ ಜಯಶ್ರೀ ಕೊಯಿಂಗೋಡಿ, ಕೋಶಾಧಿಕಾರಿಯಾಗಿ ವಿನಯ್ ಜಾಲ್ಸೂರು

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಮಹಾಸಭೆಯು ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಇಂದು(ಸೆ.೪ರಂದು) ನಡೆಯಿತು. ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ಉಪಾಧ್ಯಕ್ಷ ಶರೀಫ್ ಜಟ್ಟಿಪಳ್ಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ರಮೇಶ್ ನೀರಬಿದಿರೆ ವರದಿ ವಾಚಿಸಿದರು. ಕೋಶಾಧಿಕಾರಿ ಜಯಶ್ರೀ ಕೊಯಿಂಗೋಡಿ ಲೆಕ್ಕಪತ್ರ ಮಂಡಿಸಿದರು. ಈ...

ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬಿಜೆಪಿ ಶಾಸಕರಿಂದ ಸಿ.ಎಂ ಗೆ ಮನವಿ – ಶಾಸಕಿ ಭಾಗೀರಥಿ ಮುರುಳ್ಯ ಸಾಥ್

ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗವು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.          ಬಿಜೆಪಿ ಶಾಸಕರ ಮನವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ...

ಅಜ್ಜಾವರ : ಅನಾರೋಗ್ಯದಿಂದ ಯುವಕ ಮೃತ್ಯು

ಯುವಕನೋರ್ವ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೆ.4 ರಂದು ವರದಿಯಾಗಿದೆ. ಅಜ್ಜಾವರ ಗ್ರಾಮದ ಇಸ್ಮಾಯಿಲ್ ಎಂಬುವವರ ಪುತ್ರ ಅಬ್ದುಲ್ ಖಾದರ್ ಮೃತಪಟ್ಟ ದುರ್ದೈವಿ. ಕೆಲ ದಿನಗಳಿಂದ ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸೆ.4ರಂದು ಸುಮಾರು 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ ಮೃತನಾದ ಯುವಕನ ಮೃತದೇಹವು ರಾತ್ರಿಯ ವೇಳೆಗೆ ಮನೆಗೆ ತರಲಾಗುವುದು ಎಂದು ತಿಳಿದುಬಂದಿದೆ.
Loading posts...

All posts loaded

No more posts

error: Content is protected !!