ಹವಾಮಾನ ಆಧಾರಿತ ಬೆಳೆ ವಿಮೆ ಸಮಸ್ಯೆ ಶೀಘ್ರ ಸರಿಪಡಿಸಲು ಸಹಕಾರಿ ಯೂನಿಯನ್ ಆಗ್ರಹ

ವರದಿ: ಮಿಥುನ್ ಕರ್ಲಪ್ಪಾಡಿ ಸುಳ್ಯ: ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಗಳಿಗೆ ರೈತರ ವಿಮೆ ಪ್ರೀಮಿಯಂ ಪಾವತಿಯ ಬಗ್ಗೆ ಯಾವುದೇ ಆದೇಶಗಳು ಬಂದಿರುವುದಿಲ್ಲ ಇದರಿಂದಾಗಿ ಕೃಷಿಕರಿಗೆ ಸಮಸ್ಯೆಗಳು ಎದುರಾಗುತ್ತಿದ್ದು ಆದಷ್ಟು ಬೇಗ ಕೃಷಿಕರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ವಿಮೆ ಕುರಿತು ಸರಕಾರ ಕ್ರಮವಹಿಸಬೇಕು ಎಂದು ಸುಳ್ಯ ಸಹಕಾರಿ ಯೂನಿಯನ್...

ಗುತ್ತಿಗಾರು : ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಗುತ್ತಿಗಾರು ಗ್ರಾಮ ಪಂಚಾಯತ್, ಅಮರ ಸಂಜೀವಿನಿ ಒಕ್ಕೂಟದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಗುತ್ತಿಗಾರು ಪೇಟೆಯ ಸ್ವಚ್ಚತಾ ಅಭಿಯಾನ ಜೂ. 30 ರಂದು ನಡೆಯಿತು.
Ad Widget

ನೂತನವಾಗಿ ರಚನೆಗೊಂಡ ಸ್ವರ್ಣಶ್ರೀ ಸೌಹಾರ್ದಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ

ಸುಳ್ಯ: ಸುಳ್ಯದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆಯು ಸಂಸ್ಥೆಯ ಅಧ್ಯಕ್ಷರಾದ ಜನಾರ್ದನ ಡಿ ಇವರ ಅಧ್ಯಕ್ಷತೆಯಲ್ಲಿ ಸುಳ್ಯ ವೃತ್ತ ನಿರೀಕ್ಷಕರಾದ ನವೀನ್‌ಚಂದ್ರ ಜೋಗಿ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್‌ನ ಮೊದಲ ಮಹಡಿಯಲ್ಲಿ ಇಂದು ಕಾರ್ಯಾರಂಭ ಪ್ರಾರಂಭಿಸಿತು ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್...

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವತಿಯ ಜೊತೆ ಅವಿವಾಹಿತ ಎಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪ ಯುವಕನ ಬಂಧನ

ಕಡಬ: ಸಾಮಾಜಿಕ ಜಾಲತಾಣವಾದ ಇನ್ನಾಷ್ಟಗ್ರಾಂ ಮೂಲಕ ಪರಿಚಯವಾದ ಯುವತಿಗೆ ವಂಚಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನನ್ನು ಮಂಗಳೂರು ಮಹಿಳಾ ಪೊಲೀಸರು ಜೂನ್ 27 ರಂದು ಬಂಧಿಸಿದ್ದಾರೆ. ಇನ್ಸಾಗ್ರಾಂ ಮೂಲಕ ಅನೀಶ್ ಗೆ ಪರಿಚಯವಾಗಿದ್ದ ಯುವತಿಯನ್ನು ತಾನು ಅವಿವಾಹಿತ ಎಂದು ನಂಬಿಸಿ ಆಕೆಯ ಜೊತೆ ನಿರಂತರ...

ಕಲ್ಮಡ್ಕ: ಗೃಹ ಜ್ಯೋತಿಯ ಅರ್ಜಿ ನೊಂದಣಿ ಕಾರ್ಯಕ್ರಮ

ಕರ್ನಾಟಕ ಸರಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿಯ ಅರ್ಜಿ ನೊಂದಣಿ ಕಾರ್ಯಕ್ರಮದ ಉದ್ಘಾಟನೆಯನ್ನು ಜೂ.28ರಂದು ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಸಲಾಯಿತು. ಪಂಚಾಯತಿನ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಮಹೇಶ್ ಕುಮಾರ್ ಕರಿಕ್ಕಳ ಮತ್ತು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಧರ್ಮಣ್ಣ...

ಜೂ. 30 ರೊಳಗೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗದಿದ್ದಲ್ಲಿ ಆಸ್ತಿ ಜಪ್ತಿಯ ಎಚ್ಚರಿಕೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಫ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಘೋಷಿಸಲಾಗಿದೆ. ಸಾರ್ವಜನಿಕರು ಯಾರಾದರೂ ಆರೋಪಿಗಳ ಸುಳಿವು ನೀಡಿದಲ್ಲಿ ಅವರಿಗೆ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ಸುಳ್ಯದ ಕಲ್ಲುಮುಟ್ಲು ನಿವಾಸಿ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ...

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುಳ್ಯ ಘಟಕದಲ್ಲಿ ಸುಮಾರು 24 ವರ್ಷಗಳ ಕಾಲ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶ್ರೀ ಜಯಂತ್ ಶೆಟ್ಟಿ ಇವರು ಜೂ.27ರಂದು ನಿಧನ ಹೊಂದಿದರು. ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ಜೂ.28ರಂದು ಜಿಲ್ಲಾ ಗೃಹರಕ್ಷಕದಳ ಕಛೇರಿ ಮೇರಿಹಿಲ್‍ನಲ್ಲಿ ಅವರಿಗೆ ಶ್ರದ್ದಾಂಜಲಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ್...

ನಿವೃತ್ತ ಶಿಕ್ಷಕ ದಿ.ಗಣಪತಿ ಗೌಡರ ವೈಕುಂಠ ಸಮಾರಾಧನೆ

ಕೊಲ್ಲಮೊಗ್ರ ಗ್ರಾಮದ ನಿವೃತ್ತ ಶಿಕ್ಷಕ ದಿ.ಗಣಪತಿ ಗೌಡ ಚಾಂತಾಳ ಅವರ ವೈಕುಂಠ ಸಮಾರಾಧನೆ ಕಾರ್ಯಕ್ರಮ ಜೂ.27 ರಂದು ನಡೆಯಿತು. ನಿವೃತ್ತ ಪಾಂಶುಪಾಲ ಬಾಬು ಗೌಡ ಅಚ್ರಪ್ಪಾಡಿ, ಪಾನತ್ತಿಲ ನಾರಾಯಣ ಗೌಡ ನುಡಿ ನಮನ ಸಲ್ಲಿಸಿದರು. ದಿ.ಗಣಪತಿ ಗೌಡರ ಧರ್ಮಪತ್ನಿ ನಿವೃತ್ತ ಮುಖ್ಯಶಿಕ್ಷಕಿ ಬೊಳಿಯಮ್ಮ, ಪುತ್ರರಾದ ಸಚಿನ್ ಚಾಂತಾಳ, ಡಾ. ಸವಿನ್ ಚಾಂತಾಳ ಹಾಗೂ ಮನೆಯವರು, ಕುಟುಂಬಸ್ಥರು...

ಗುತ್ತಿಗಾರು : ವಿಶ್ವ ಮಾದಕ ವಸ್ತುಗಳ ವಿರೋಧಿ ದಿನ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ, ಜನ ಜಾಗೃತಿ ವೇದಿಕೆ ಗುತ್ತಿಗಾರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನ ಕಾರ್ಯಕ್ರಮವನ್ನು ಕಾಲೇಜ್ ನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮರವರ...

ಸಂಪಾಜೆ ಸೊಸೈಟಿಗೆ ಕೃಷಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರ ಭೇಟಿ

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಶಿವಶಂಕರ ಯು.ಬಿ. ರವರು ಭೇಟಿ ನೀಡಿ ಸಂಘದ ಪ್ರಗತಿ ಪರಿಶೀಲನೆ ನಡೆಸಿ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಪರವಾಗಿ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸುಳ್ಯ ಕೃಷಿ ಇಲಾಖೆಯ...
Loading posts...

All posts loaded

No more posts

error: Content is protected !!