- Monday
- August 31st, 2026
ತೀವ್ರ ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಪಂಜ ಸಮೀಪದ ಕರಿಕ್ಕಳದಿಂದ ಜೂ.25 ರಾತ್ರಿ ವರದಿಯಾಗಿದೆ.ಪಂಬೆತ್ತಾಡಿ ಗ್ರಾಮದ ಕರಿಕ್ಕಳ ದಿ.ತಮ್ಮಯ್ಯ ಗೌಡರ ಪುತ್ರ, ಪಂಜದ ಶಿವಕೃಪಾ ಮೋಟಾರ್ಸ್ ನ ಮೆಕಾನಿಕ್ ಭಾಸ್ಕರ ಗೌಡ ಮೃತಪಟ್ಟ ಯುವಕ. ಅವರು ಜೂ.25 ರಾತ್ರಿ 10 ಗಂಟೆಗೆ ವೇಳೆಗೆ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟರೆನ್ನಲಾಗಿದೆ.ಪಂಜದಲ್ಲಿ ಅವರು ಸುಮಾರು 20 ವರುಷಗಳಿಂದ...
. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ನೂತನ ಅಧ್ಯಕ್ಷರಾಗಿ ರಾಮಚಂದ್ರ ಪಳಂಗಾಯ ಅವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಸತೀಶ್ ಕೂಜುಗೋಡು, ಖಜಾಂಜಿಯಾಗಿ ಚಂದ್ರಶೇಖರ ಪಾನತ್ತಿಲ ಅವರು ಆಯ್ಕೆಯಾಗಿದ್ದಾರೆ. ಕ್ಲಬ್ ನ ಮೊದಲ ಉಪಾಧ್ಯಕ್ಷರಾಗಿ ಅಶೋಕ್ ಮೂಲೆಮಜಲು, ದ್ವಿತೀಯ ಉಪಾಧ್ಯಕ್ಷರಾಗಿ ರಾಜೇಶ್.ಎನ್.ಎಸ್, ನಿಕಟಪೂರ್ವ ಅಧ್ಯಕ್ಷರಾಗಿ ಪ್ರೋ.ರಂಗಯ್ಯ ಶೆಟ್ಟಿಗಾರ್ ಹಾಗೂ ಕ್ಲಬ್ ನ ಪದಾಧಿಕಾರಿಗಳಾಗಿ ವಿಮಲಾ ರಂಗಯ್ಯ, ಮೋಹನ್ ದಾಸ್...
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿ ರಚನೆಗೆ ಜೂ.25ರಂದು ಚುನಾವಣೆ ನಡೆದಿದ್ದು, ಒಟ್ಟು 13 ಸ್ಥಾನಗಳಿಗೆ 33 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅಂತಿಮವಾಗಿ 26 ಮಂದಿ ಸ್ಪರ್ಧಾ ಕಣದಲ್ಲಿದ್ದರು. ಸಾಲಗಾರರ ಕ್ಷೇತ್ರದಲ್ಲಿ ಒಟ್ಟು 791 ಮತಗಳಿದ್ದು ಅದರಲ್ಲಿ 751 ಮತಗಳುಚಲಾವಣೆಯಾಗಿದ್ದವು. ಸಾಲಗಾರರಲ್ಲದ ಕ್ಷೇತ್ರದಲ್ಲಿ ಒಟ್ಟು376 ಮತಗಳಿದ್ದು, 313 ಮತಗಳು ಚಲಾವಣೆಯಾಗಿತ್ತು. ಸಾಮಾನ್ಯ...
ಮಡಪ್ಪಾಡಿ ಬಸ್ ಸ್ಟಾಂಡ್ ನಲ್ಲಿ ಕಸ ರಾಶಿ ಬಿದ್ದಿದ್ದನ್ನು ಗಮನಿಸಿದ ಒಡಿಯೂರು ಗ್ರಾಮ ವಿಕಾಸ್ ಯೋಜನೆಯ ಸದಸ್ಯರು ಹಾಗೂ ಅಕ್ಷಯ ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟದ ಸದಸ್ಯರು ಇಂದು ಸ್ವಚ್ಛಗೊಳಿಸಿದರು.
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಸಿ,ಎಸ್.ಟಿ ಕುಂದು ಕೊರತೆ ಸಭೆ ಜೂ.25 ರಂದು ನಡೆಯಿತು. ಬೆಳ್ಳಾರೆ ಉಪ ನಿರೀಕ್ಷಕರಾದ ಸುಹಾಸ್ ಅವರು ಸಭೆಯ ಅಹವಾಲು ಸ್ವೀಕರಿಸಿ ಯಾರಿಗಾದರೂ ತೊಂದರೆಗಳಾದರೆ ನನಗೆ ತಿಳಿಸಿ, ತಕ್ಷಣ ಸ್ಪಂದಿಸುತ್ತೇನೆ ಎಂದರು.ಈ ಸಂದರ್ಭದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ ಸಾಮಾಜಿಕ ಹೋರಾಟಗಾರರಾದ ನಂದರಾಜ್ ಸಂಕೇಶ್, ರಮೇಶ್ ಕೊಡಂಕಿರಿ, ಬಾಲಚಂದ್ರ...
ಸುಕೃತಿ ಮಹಿಳಾ ಕಾಯಕೋತ್ಸವ ತಂಡದ ವತಿಯಿಂದ ಇಂದು ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ ಶಾಲಾ ಕೈತೋಟ ರಚನೆ ಮಾಡಲಾಯಿತು. ಕೈತೋಟ ರಚನೆ ಕಾರ್ಯದಲ್ಲಿ ಸಮಿತಿ ಸದಸ್ಯರಾದ ಜಾಹ್ನವಿ ಕಾಂಚೋಡು, ಹರಿಣಾಕ್ಷಿ ಬರೆಮೇಲು, ವಿದ್ಯಾ, ಪ್ರೇಮಲತಾ ಮರುವಂಜ, ಪುಷ್ಪಲತಾ ಬಿ, ಗೀತಾ ಡಿ ಇವರುಗಳು ಪಾಲ್ಗೊಂಡರು. ತೋಟದಲ್ಲಿ ಅಲಸಂಡೆ, ಬದನೆ, ಬಸಳೆ, ಬೆಂಡೆ,ಬೀನ್ಸ್ ಕೃಷಿಗೆ ಸಾಲುಗಳನ್ನು...
ಸುಳ್ಯದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಭೇಟಿ ನೀಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ವಿವಿಧ ಮೂಲಭೂತ ಸೌಲಭ್ಯಗಳ ಪೂರೈಕೆಗಾಗಿ ಸುಮಾರು 4 ಕೋಟಿ ರೂಪಾಯಿ ಅನುದಾನ ಬಂದಿದ್ದು ಈ ಅನುದಾನ ಬಳಸಿ ನಡೆಯುತ್ತಿರುವ ಡಯಾಲಿಸಿಸ್ ಸೆಂಟರ್ ಆಧುನಿಕರಣ,...
ಅರಂತೋಡಿನ ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ ಚುನಾವಣೆಯಲ್ಲಿ ನಾಯಕನಾಗಿ ದ್ವಿತೀಯ ವಾಣಿಜ್ಯ ವಿಭಾಗ ಭವಿತ್ ಆಯ್ಕೆಯಾಗಿರುತ್ತಾರೆ. ಕಾಲೇಜಿನ ಉಪ ನಾಯಕಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಸಿಂಚನ ಪಿ ಆಯ್ಕೆಯಾಗಿರುತ್ತಾರೆ.
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ....
ದೇವಚಳ್ಳ ಗ್ರಾಮದ ದೇವ ಹಿರಿಯಡ್ಕ ವೆಂಕಪ್ಪ ಗೌಡರು ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಇಂದು ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಕಂದ್ರಪ್ಪಾಡಿ ಶ್ರೀ ರಾಜ್ಯದೈವ ಮತ್ತು ಪುರುಷ ದೈವದ ಪೂಜಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ ಚಂದ್ರಾವತಿ, ಪುತ್ರರಾದ ನಳಿನಾಕ್ಷ , ಮುಕುಂದ, ವಿನಯಕುಮಾರ್ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
Loading posts...
All posts loaded
No more posts
