- Sunday
- August 30th, 2026
ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧೆಡೆ ಮತದಾನ ಬಹಿಷ್ಕಾರದ ಕೂಗು ಕೇಳಿಬರುತ್ತಿದ್ದು ಜಾಲ್ಸೂರು ಗ್ರಾಮದ ಕುಂಬರ್ಚೋಡಿನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಪ್ರತ್ಯಕ್ಷವಾಗಿದೆ.ಕುಂಬರರ್ಚೋಡುವಿನಿಂದ ಕಾಟೂರು ಭಾಗಕ್ಕೆ ಸಂಪರ್ಕಿಸುವ ಕಾಟೂರು ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳ ಆಗದ ಕಾರಣ ಚುನಾವಣಾ ಬಹಿಷ್ಕಾರದ ಬ್ಯಾನರನ್ನು ಹಾಕಿದ್ದಾರೆ.
ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘ (ಬಿ.ಎಂ.ಎಸ್) ದ ವತಿಯಿಂದ ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಮಹೋತ್ಸವದ ಅನ್ನ ಸಂತರ್ಪಣೆಯ ಬಾಬ್ತು ದೇಣಿಗೆ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು ರವರಿಗೆ ಸಂಘದ ಅಧ್ಯಕ್ಷ ರಾಧಾಕೃಷ್ಣ ರವರು ನಗದು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಮಿತಿ ಸದಸ್ಯ ಬಾಬು ಗೌಡ ಕಡೆಂಗ ಹಾಗೂ...
ಸುಳ್ಯ ವರ್ತಕರ ಸಂಘದ ಹಿರಿಯರು ಸಂಘದ ಪದಾಧಿಕಾರಿಯು ಉದ್ಯಮಿಗಳಾದ ರಾಮಚಂದ್ರ ಅಗ್ರೋ ಅವರ ಎಪ್ಪತ್ತಾರನೇ ಹುಟ್ಟು ಹಬ್ಬ ಹಾಗೂ ಉದ್ಯಮ ರಂಗದಲ್ಲಿ ಸುವರ್ಣ ಮಹೋತ್ಸವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಸುಳ್ಯ ವರ್ತಕರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಿಸುವ ಕಾರ್ಯಕ್ರಮ ನಡೆಯಿತು.ವರ್ತಕರ ಸಂಘದ ಅಧ್ಯಕ್ಷ ಪಿ ಬಿ ಸುಧಾಕರ ರೈ ಯವರ ನೇತೃತ್ವದಲ್ಲಿ ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ...
ದ.ಕ.ಜಿಲ್ಲಾ ಪೊಲೀಸ್ ಘಟಕ ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಮಾ.13 ರಂದು ನಡೆಯಲಿದೆ.ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.ಗೌರವ ಉಪಸ್ಥಿತರಾಗಿ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ,ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ...
ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ನೂತನ ಮಡಪ್ಪಾಡಿ ಘಟ ಸಮಿತಿಯು ಮಾ.5ರಂದು ಮಡಪ್ಪಾಡಿ ಹಿ.ಪ್ರಾ.ಶಾಲೆಯಲ್ಲಿ ಉದ್ಘಾಟನೆಗೊಂಡಿತು.ನೂತನ ಘಟ ಸಮಿತಿಯನ್ನು ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಉದ್ಘಾಟಿಸಿದರು. ಮಡಪ್ಪಾಡಿ ಗ್ರಾ.ಪಂ. ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಡಪ್ಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಶಕುಂತಲಾ ಕೇವಳ,...
ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಕಾಲಾವಧಿ ಜಾತೋತ್ಸವವು ಮಾರ್ಚ್ 10 ರಂದು ಆರಂಭಗೊಂಡಿದ್ದು, ಏಪ್ರಿಲ್ 10 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದಲ್ಲಿ ನಡೆಯಲಿರುವುದು. ಆ ಪ್ರಯುಕ್ತ ಇಂದು ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಆಡಳಿತ ಮಂಡಳಿಯವರು, ಅರ್ಚಕ ವೃಂದದವರು, ಸಿಬ್ಬಂದಿ ವರ್ಗದವರು, ಆಡಳಿತ ಮೊಕ್ತೇಸರರು ಹಾಗೂ ಭಕ್ತಾದಿಗಳು, ಊರವರು...
ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಸುಳ್ಯ ಸರಿಗಮಪ ಸಂಗೀತ ಸ್ಪರ್ಧೆಯನ್ನು ಆಯೋಜಿಸಿತ್ತು . ಖ್ಯಾತ ಗಾಯಕ ಕರುನಾಡ ಗಾನಗಂಧರ್ವ ಬಿರುದು ಪಡೆದಿರುವ ಮಿಥುನ್ ರಾಜ್ ವಿದ್ಯಾಪುರ ಅವರು ತೀರ್ಪುಗಾರರಾಗಿದ್ದರು . ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷ ಎಚ್ .ಭೀಮರಾವ್ ವಾಷ್ಠರ್ ಅಧ್ಯಕ್ಷತೆ ವಹಿಸಿದ್ದರು ....
ಸುಳ್ಯದ ಚಂದನ ಸಾಹಿತ್ಯ ವೇದಿಕೆಯ 12 ನೇ ವರ್ಷದ ವಾರ್ಷಿಕೋತ್ಸವ ಮತ್ತು ಸಾಹಿತಿ , ಜ್ಯೋತಿಷಿಯಾದ ಎಚ್ .ಭೀಮರಾವ್ ವಾಷ್ಠರ್ ರವರ 47 ನೇ ವರ್ಷದ ಹುಟ್ಟುಹಬ್ಬ ಸಂಭ್ರಮದ ಪ್ರಯುಕ್ತ ಚಂದನ ಕವಿ ಸಂಗಮ -2023 ಸಮಾರಂಭದಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ , ಕೃತಿಗಳ ಬಿಡುಗಡೆ , ಹಾಡೊಂದು ನಾ ಹಾಡುವೆನು ಫೈನಲ್ ಸಂಗೀತ ಸ್ಪರ್ಧೆ ,...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ,ರೂರಲ್ ಬ್ಲಾಕ್ ಮತ್ತು ನಗರ ಸಮಿತಿ ವತಿಯಿಂದ ರಕ್ತದಾನ ಮಾಸಾಚರಣೆಯ ಪ್ರಯುಕ್ತ ಮಾರ್ಚ್ 12 ರಂದು ರಕ್ತಕೊಟ್ಟು ಬಾಂದವ್ಯ ಕಟ್ಟು ಎಂಬ ಧ್ಯೇಯ ವಾಕ್ಯದೊಂದಿಗೆ ರೋಟರಿ ಕ್ಯಾಂಪ್ಕೋ ರಕ್ತ ನಿಧಿ ಪುತ್ತೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ...
Loading posts...
All posts loaded
No more posts
