ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನಾಚರಣೆ ಕಲೋತ್ಸವ ಸ್ಪರ್ಧೆಯಲ್ಲಿ ಸುಳ್ಯ ತಾಲೂಕು ದ್ವಿತೀಯ

ಮಾ.8ರಂದು ಮಂಗಳೂರು ನ ಪುರಭವನದಲ್ಲಿ ನಡೆದ ಜಿಲ್ಲಾ ಮಹಿಳಾ ಮಂಡಲಗಳಒಕ್ಕೂಟದ ವಿಶ್ವ ಮಹಿಳಾ ದಿನಾಚರಣೆ ಯ ಕಲೋತ್ಸವ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟವು ರೂ. 7000 ನಗದು ಮತ್ತು ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿತು.

ಕೆ.ಎಫ್.ಡಿ.ಸಿ. ನೌಕರರ ಮುಷ್ಕರ- ನೌಕರರನ್ನು ಬದಲಾವಣೆ ಮಾಡಿರುವ ಬಗ್ಗೆ ಆಕ್ಷೇಪ

ಕರ್ನಾಟಕ ಅಭಿವೃದ್ಧಿ ನಿಗಮದಲ್ಲಿ ಕೆಲಸ ನಿರ್ವಹಿಸುವ ಖಾಯಂ ನೌಕರಿಗೆ ಮೊದಲೇ ಸೂಚನೆ ನೀಡದೆ ಕಾವಲುಗಾರ ನೌಕರರನ್ನು ಮೇಲಾಧಿಕಾರಿಗಳು ಬದಲಾವಣೆ ಮಾಡಿದ್ದಾರೆ. 3೦-4೦ ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆರನ್ನು ಬಿಟ್ಟು ತಾತ್ಕಾಲಿಕವಾಗಿ ಅನುಭವವಿಲ್ಲದ ನೌಕರರನ್ನು ಏಕಾಏಕಿಯಾಗಿ ನಿಯೋಜನೆ ಮಾಡಿ ಅನ್ಯಾಯವೆಸಗಿದ್ದಾರೆ. ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ಒದಗಿಸದೆ ಜೀತದಾಳುಗಳನ್ನಾಗಿ ದುಡಿಸುತ್ತಿದ್ದಾರೆ ಎಂದು ಆರೋಪಿಸಿ ಕೆ.ಎಫ್.ಡಿ.ಸಿ.ವರ್ಕರ್ಸ್ ಫೆಡರೇಷನ್ ಸಂಘಟನೆಯ ಮುಖಂಡರು ಹಾಗೂ...
Ad Widget

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ಸುಳ್ಯ ತಾಲೂಕಿನಲ್ಲಿ 1728 ವಿದ್ಯಾರ್ಥಿಗಳು – 3 ಪರೀಕ್ಷಾ ಕೇಂದ್ರಗಳು

ಮಾರ್ಚ್‌ 9ರಿಂದ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ. ಸುಳ್ಯ ತಾಲೂಕಿನಲ್ಲಿ ಪರೀಕ್ಷೆ ಬರೆಯಲು 1728 ವಿದ್ಯಾರ್ಥಿಗಳು ನೋಂದಾವಣೆ ಮಾಡಿ ಕೊಂಡಿದ್ದಾರೆ. ಸುಳ್ಯ ತಾಲೂಕಿನಲ್ಲಿ ಸುಳ್ಯ ಸರಕಾರಿ ಪದವಿ ಪೂರ್ವ ‌ಕಾಲೇಜು ಹಾಗೂ ಗಾಂಧಿನಗರ ಪದವಿ ಪೂರ್ವ ಕಾಲೇಜು ಸೇರಿ 2 ಮತ್ತು ಸುಬ್ರಹ್ಮಣ್ಯ ಸೇರಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಸುಳ್ಯ ತಾಲೂಕಿನ ವಿದ್ಯಾರ್ಥಿಗಳು...

IRCMD ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ “ವಿದ್ಯಾದಾಯಿನಿ” ಬಿರುದು ಪ್ರಧಾನ

IRCMD ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ "ವಿದ್ಯಾದಾಯಿನಿ" ಬಿರುದು ಪ್ರಧಾನ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಟ ಸಾಧನೆಗೆ IRCMD ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಪ್ರಫುಲ್ಲಾ ಗಣೇಶ್ ರವರಿಗೆ ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಮತ್ತು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು, ಶ್ರೀ ಬ್ರಹ್ಮ ಬೈದ್ಯರ್ಕಳ ಗರಡಿಯಲ್ಲಿ ಕ್ಷೇತ್ರಕ್ಕೆ 150...

ಮಾ.11: ನಿಂತಿಕಲ್ಲು ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯಿಂದ ಲಕ್ಕೀ ಡ್ರಾ ಸ್ಕೀಮ್ ಆರಂಭ

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ನೀಡುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇದೀಗ 'ಲಕ್ಕೀ ಡ್ರಾ' ಎಂಬ ಹೊಸ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಮಾ.11 ಶನಿವಾರದಂದು ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಹೀರೋ ಎಚ್.ಎಫ್ ಡಿಲಕ್ಸ್ ಬೈಕ್ ಗೆಲ್ಲಬಹುದಾಗಿದೆ. ಈ...

ಸುಳ್ಯದ ಗೋಕುಲಂ ಮಕ್ಕಳ ವಸ್ತ್ರ ಮಳಿಗೆಯಲ್ಲಿ ವಿಶೇಷ ದರ ಕಡಿತ ಮಾರಾಟ- ಬಿಗ್ ಆಫರ್

ಸುಳ್ಯದ ಶ್ರೀ ಹರಿ ಕಾಂಪ್ಲೆಕ್ಸ್ ನಲ್ಲಿರುವ ಗೋಕುಲಂ ಮಕ್ಕಳ ಸಿದ್ಧ ಉಡುಪುಗಳ ವಸ್ತ್ರ ಮಳಿಗೆಯಲ್ಲಿ ಆರ್ಥಿಕ ವರ್ಷಾಂತ್ಯ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ಇಂದಿನಿಂದ ಆರಂಭಗೊಂಡಿದೆ. ಮಕ್ಕಳ ಉಡುಪುಗಳಪ್ರತಿ ಖರೀದಿಯ ಮೇಲೆ ರೂ.500/- ಗಿಂತ ಮಿಕ್ಕಿ ಖರೀದಿಗೆ ಶೇ.30% ಮತ್ತು ರೂ.500/- ರ ಒಳಗೆ ಖರೀದಿಯ ಮೇಲೆ ಶೇ.15% ರಷ್ಟು...

ನವೀನ್ ಚಾತುಬಾಯಿಯವರಿಗೆ ಚಂದನ ಆದರ್ಶ ಕೃಷಿ ರತ್ನ ಪ್ರಶಸ್ತಿ

ಐವರ್ನಾಡಿನ ಕೃಷಿಕರಾದ ಸಿ.ಕೆ.ನವೀನ ಚಾತುಬಾಯಿಯವರಿಗೆ 2023 ನೇ ಸಾಲಿನ ಚಂದನ ಆದರ್ಶ ಕೃಷಿ ರತ್ನ ಪ್ರಶಸ್ತಿಯನ್ನು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಭವನದಲ್ಲಿ ನಡೆದ ರಾಜ್ಯ ಮಟ್ಟದ ಕವಿಗೋಷ್ಟಿ ಕವಿಸಂಗಮದಲ್ಲಿ ನೀಡಿ ಗೌರವಿಸಲಾಯಿತು.ಇವರು ಸಮಗ್ರ ಕೃಷಿಯೊಂದಿಗೆ ವಿಶಿಷ್ಟವಾದ ಮುತ್ತು ಕೃಷಿಯನ್ನು ಮಾಡಿ ಯಶಸ್ವಿಯಾದವರು..ಇವರಿಗೆ ಕೃಷಿ ಇಲಾಖೆಯಿಂದ 2022 ನೇ ಸಾಲಿನ ಜಿಲ್ಲಾ ಮಟ್ಟದ ಶ್ರೇಷ್ಟ ಕೃಷಿ ಪ್ರಶಸ್ತಿ...

ಮಾ .11; ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಸುಳ್ಯದಲ್ಲಿ ರೋಡ್ ಶೋ

ರಾಜ್ಯ ಬಿಜೆಪಿ ನೇತೃತ್ವದಲ್ಲಿ ಈಗಾಗಲೇ ಆರಂಭಗೊಂಡಿರುವ ವಿಜಯ ಸಂಕಲ್ಪ ಯಾತ್ರೆ ಮಾ.11 ರಂದು ಸುಳ್ಯಕ್ಕೆ ಆಗಮಿಸಲಿದೆ. ಸುಳ್ಯದಲ್ಲಿ ಅದ್ದೂರಿ ರೋಡ್ ಶೋ ನಡೆಸಲು ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.ಮಾ.11 ರಂದು ಬೆಳಗ್ಗೆ ಮಡಿಕೇರಿಯಿಂದ ಹೊರಡುವ ವಿಜಯ ಸಂಕಲ್ಪ ಯಾತ್ರೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಪಾಜೆಗೆ ಬರಲಿದೆ. ಅಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಯಾತ್ರೆಯನ್ನು...

ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಉನ್ನತ ಶಿಕ್ಷಣ ಸಚಿವ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖಾ ಸಚಿವ ಡಾ.ಅಶ್ವಥ್ ನಾರಾಯಣ್ ಸಿ.ಎನ್. ಅವರು ಕುಟುಂಬ ಸಮೇತರಾಗಿ ಇಂದು ಭೇಟಿ ನೀಡಿದರು.ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಶಾಲಾ ಮೈದಾನದಕ್ಕೆ ಹೆಲಿಕಾಪ್ಟರ್ ಮೂಲಕ ಬಂದಿಳಿದು ಕಾರಲ್ಲಿ ಸುಬ್ರಹ್ಮಣ್ಯ ಕ್ಕೆ ಬಂದರು.ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಚಿವರನ್ನು ಸ್ವಾಗತಿಸಲಾಯಿತು....

ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವರ ವರ್ಷಾವಧಿ ಜಾತ್ರೋತ್ಸವ ಸಂಪನ್ನ

ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದಲ್ಲಿ ಮಾ.5 ರಿಂದ ಮಾ.7 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳೊಂದಿಗೆ ವರ್ಷಾವಧಿ ಜಾತ್ರೋತ್ಸವವು ನಡೆಯಿತು. ಮಾ.5 ರಂದು ಬೆಳಿಗ್ಗೆ ತೋರಣ ಮುಹೂರ್ತ ಮತ್ತು ಉಗ್ರಾಣ ಪೂಜೆ, ಹಸಿರುವಾಣಿ ಸಮರ್ಪಣೆ ನಡೆಯಿತು. ನಂತರ ಶ್ರೀ ಬೆಳರಂಪಾಡಿ ವನಶಾಸ್ತಾವು ಕ್ಷೇತ್ರದಲ್ಲಿ ಸಾನಿಧ್ಯ ಕಲಶ ಮತ್ತು...
Loading posts...

All posts loaded

No more posts

error: Content is protected !!