ಜಗದ್ವಿಖ್ಯಾತ ಹಂಪಿ ಉತ್ಸವದ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ

ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಸುಳ್ಯದ ಲೇಖಕಿ, ಕವಯಿತ್ರಿ ಡಾ. ಅನುರಾಧಾ ಕುರುಂಜಿ ಯವರು ಆಯ್ಕೆಯಾಗಿದ್ದಾರೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರುಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಹಂಪಿ ಉತ್ಸವವನ್ನು ಆರಂಭಿಸಿದ್ದು, 2023ರ ಹಂಪಿ ಉತ್ಸವವು ಜನವರಿ 27ರಿಂದ 29 ರವರೆಗೆ ಐತಿಹಾಸಿಕ ಪ್ರವಾಸಿ ತಾಣ ಹಂಪಿಯಲ್ಲಿ ನಡೆಯಲಿದ್ದು, ಉತ್ಸವದ...

ಕಲ್ಲುಗುಂಡಿ : ಶ್ರೀ ಅಮ್ಮನ್ ಸಹಕಾರಿ ಸಂಘದಲ್ಲಿ ಯಶಸ್ವಿನಿ ಆರೋಗ್ಯ ಕಾರ್ಡ್ ನೋಂದಾವಣೆಗೆ ಅವಕಾಶ

ಕರ್ನಾಟಕ ಸರಕಾರದ ಯಶಸ್ವಿನಿ ಆರೋಗ್ಯ ಕಾರ್ಡ್ ಯೋಜನೆಯ ಸೌಲಭ್ಯ ಪಡೆಯಲು ನೋಂದಾವಣೆ ಮಾಡಬೇಕಾಗಿದ್ದು, ಈ ಕಾರ್ಡ್ ನಿಂದ ಕುಟುಂಬ ಸದಸ್ಯರು ಅನಾರೋಗ್ಯಕ್ಕೆ ಒಳಗಾದಾಗ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ. ಇದೀಗ ಕಲ್ಲುಗುಂಡಿಯ ಅಮ್ಮನ್ ಸಹಕಾರಿ ಸಂಘದಲ್ಲಿ ಯಶಸ್ವಿನಿ ಆರೋಗ್ಯ ಕಾರ್ಡ್ ನೋಂದಾವಣೆ ಆರಂಭಗೊಂಡಿದೆ ಎಂದು ಸಂಘದ ವ್ಯವಸ್ಥಾಪಕರಾದ ಶಿವ ಪೆರುಮಾಳ್ ತಿಳಿಸಿದ್ದಾರೆ.
Ad Widget

ಎಣ್ಮೂರು : ತುಳುನಾಡ ಬಂಗಾರ್ ಗರೋಡಿಲು ತಂಡದ ಸಿನಿದೃಶ್ಯ ಚಿತ್ರೀಕರಣಕ್ಕೆ ಮುಹೂರ್ತ – ಶ್ರೀಧಾಮ ಮಾಣಿಲ ಶ್ರೀ ಗಳಿಂದ ಆಶೀರ್ವಚನ

ಧರ್ಮಯೋಗಿ ಪ್ರೊಡಕ್ಷನ್ ಸಾರಥ್ಯ ದಲ್ಲಿ ಶ್ರೀ ಸುರೇಂದ್ರ ಮೋಹನ್ ಮುದ್ರಾಡಿ ಇವರ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಕರಾವಳಿ ಕರ್ನಾಟಕದ ವಿಶ್ವಾಸದ ಪ್ರತಿಬಿಂಬ ನಮ್ಮ ಕುಡ್ಲ ವಾಹಿನಿ ಮುಖೇನ ಮೂಡಿ ಬರುತ್ತಿರುವ ತುಳುನಾಡ ಬಂಗಾರ್ ಗರೋಡಿಲು ಸಾಕ್ಷ ಚಿತ್ರ ತಂಡ ಪ್ರಸ್ತುತ ಪಡಿಸುವ ಯುದ್ಧ ಭೂಮಿಯಲ್ಲಿ ನಡೆದ ಕೋಟಿ ಚೆನ್ನಯರ ಭಾವನಾತ್ಮಕ ಸನ್ನಿವೇಶದ ಸಿನಿದೃಶ್ಯ ಚಿತ್ರೀಕರಣದ ಮುಹೂರ್ತ...

ಪಿಗ್ಮಿ ಸಂಗ್ರಾಹಕರು ಬೇಕಾಗಿದ್ದಾರೆ

ಕಲ್ಲುಗುಂಡಿಯ ಶ್ರೀ ಅಮ್ಮನ್ ಸಹಕಾರಿ ಸಂಘಕ್ಕೆ ಪಿಗ್ಮಿ ಸಂಗ್ರಾಹಕರು ಬೇಕಾಗಿದ್ದಾರೆ. ಹೆಚ್ವಿನ ಮಾಹಿತಿಗೆ 9481602140 ಕರೆ ಮಾಡಬಹುದು.

ಗುತ್ತಿಗಾರು ಕ್ಲಸ್ಟರ್ ನ ಕಲಿಕಾ ಹಬ್ಬ ಕಾರ್ಯಕ್ರಮದ ಉದ್ಘಾಟನೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಗುತ್ತಿಗಾರು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ ಗುತ್ತಿಗಾರು ಕ್ಲಸ್ಟರ್ ನ ಕಲಿಕಾ ಹಬ್ಬ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜ.23 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು...

ಸುಳ್ಯ: ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ.

ಸುಳ್ಯ, ಜ.23: ಪಂಜದ ಚಿಂಗಾಣಿಗುಡ್ಡೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಿಸಿ, ಪೈಪ್ ಅಳವಡಿಸಿ ಟ್ಯಾಂಕ್ ಗೆ ನೀರು ಸರಬರಾಜು ಮಾಡದೇ ಇರುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಒತ್ತಾಯಿಸಲಾದ ಘಟನೆ ನಡೆಯಿತು.ಸುಳ್ಯದ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಅಧಿಕಾರಿಗಳ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಸೋಮವಾರ ನಡೆಯಿತು. ಲೋಕಾಯುಕ್ತ ಎಸ್ಪಿ ಸೈಮನ್...

ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ-
ನೂತನ ಅಧ್ಯಕ್ಷರಾಗಿ ಲೋಕನಾಥ್ ಅಮೆಚೂರ್ ಆಯ್ಕೆ

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸುಳ್ಯ ತಾಲೂಕಿನ ವಾರ್ಷಿಕ ಮಹಾಸಭೆಯು ಜನಜಾಗೃತಿ ವೇದಿಕೆಯ ಅಧ್ಯಕ್ಷ ವಿಶ್ವನಾಥ ರೈ ಕಳಂಜ ಅವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜ.23 ರಂದು ನಡೆಯಿತು. ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ಲೋಕನಾಥ್ ಅಮೆಚೂರು ಅವರನ್ನು ಆಯ್ಕೆಮಾಡಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎನ್.ಎ.ರಾಮಚಂದ್ರ, ವಿ.ಹೆಚ್.ಪಿ. ಸುಳ್ಯ ಪ್ರಖಂಡದ ಅಧ್ಯಕ್ಷ...

ಮಾ. 3,4 ಮತ್ತು 5ರಂದು ಕುಂಬಳಚೇರಿಯಲ್ಲಿ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ

ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮಾ.3,4 ಮತ್ತು 5 ರಂದು ವಯನಾಟ್ 'ಕುಲವನ್ ದೈವಕಟ್ಟು ಮಹೋತ್ಸವ ನಡೆಯಲಿದ್ದು, ಈ ಉತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಜ.23ರಂದು ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ದೈವಕಟ್ಟು ಮಹೋತ್ಸವ ಸಮಿತಿಯ...

ಕುಲ್ಕುಂದ : ಮಾ.02 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ

ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಂದು ಶ್ರೀ ಕೊರತಿಯಮ್ಮ ದೈವದ 8ನೇ ವರ್ಷದ ನೇಮೋತ್ಸವ ಹಾಗೂ ಮಾ.03 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 54ನೇ ವರ್ಷದ ಒತ್ತೆಕೋಲವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಮಾ.02 ರಂದು ಬೆಳಿಗ್ಗೆ 9:30ಕ್ಕೆ ಗಣಪತಿ ಹೋಮ, ರಾತ್ರಿ 7:30 ರಿಂದ ಶ್ರೀ ಕೊರತಿಯಮ್ಮ...

ಮಡಪ್ಪಾಡಿ : ಗ್ರಾಮ ಪಂಚಾಯತ್ ನಲ್ಲಿ ಸಾಮಾನ್ಯ ಸಭೆ

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಜ. 24 ರಂದು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
Loading posts...

All posts loaded

No more posts

error: Content is protected !!