ನಾಳೆ(ಏ.09) ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ(ಏ.09) ಮದ್ಯಾಹ್ನ 3:00 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ ರಿಜಿಸ್ಟ್ರೇಷನ್ ನಂಬರ್ ಹಾಗೂ...

ಏ.19 : ಕೇಶವಕೃಪಾದಲ್ಲಿ 26 ನೇ ವರ್ಷದ ಉಚಿತ ಬೇಸಿಗೆ ಶಿಬಿರ ಆರಂಭ – ಸುಳ್ಯದ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಮೇಳೈಸಲಿದೆ  ವೇದ, ಯೋಗ ಹಾಗೂ ಕಲಾ ಶಿಬಿರ

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ಸುಳ್ಯ (ರಿ.) ಆಶ್ರಯದಲ್ಲಿ 26ನೇ ವರ್ಷದ ಅಂತರ್‌ರಾಜ್ಯ ಮಟ್ಟದ ಉಚಿತ ವೇದ- ಯೋಗ-ಕಲಾ ಶಿಬಿರವು ಇದೇ ಎಪ್ರಿಲ್ 19 ಭಾನುವಾರದಂದು ಉದ್ಘಾಟನೆಗೊಳ್ಳಲಿದೆ. ಏಪ್ರಿಲ್ 8 : ಪುಟ್ಟ ಪುಟ್ಟ ಪುಟಾಣಿಗಳ ತೊದಲು ನುಡಿಗಳಲ್ಲಿ ವೇದ ಘೋಷಗಳು ಝೇಂಕರಿಸುವ ಮೂಲಕ ಸರಿ ಸುಮಾರು 1ತಿಂಗಳ ಪರ್ಯಂತ ಇಲ್ಲಿನ ಪರಿಸರ...
Ad Widget

ಇಂದಿನ(ಏಪ್ರಿಲ್ 08) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಹಾಗೂ ರಬ್ಬರ್ ಧಾರಣೆಯಲ್ಲಿ ಕೊಂಚ ಏರಿಕೆ! ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 8 ಏಪ್ರಿಲ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-497/500ಹಳೆ ಅಡಿಕೆ...

ಯಶೋಧ ಕಾನಾವು ಅಡ್ಡನಪಾರೆ ನಿಧನ

ದೇವಚಳ್ಳ ಗ್ರಾಮದ ಅಡ್ಡನಪಾರೆ ಕಾನಾವು ಚಿನ್ನಪ್ಪ ಗೌಡರ ಧರ್ಮಪತ್ನಿ ಯಶೋಧ ರವರು ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಏ.07 ರಂದು ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಪುತ್ರರಾದ ಮುರಳೀಧರ, ಕುಸುಮಾಧರ ,ಶಶಿಧರ,ಮಧುಕರ, ಪುತ್ರಿ ನಿಶಾ, ಸೊಸೆ ಹರ್ಷಿತಾ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

ಸುಳ್ಯದ ದುರ್ಗಾ ಬ್ಯೂಟಿ ಪಾರ್ಲರ್ ನಲ್ಲಿ ದಿಬ್ಬಣದ ಕೊಡೆಗಳು ಲಭ್ಯ

ಸುಳ್ಯದ ಮುಖ್ಯರಸ್ತೆಯ ಸಾಯಿಕೃಷ್ಣ ಕಾಂಪ್ಲೆಕ್ಸ್ ನಲ್ಲಿರುವ ದುರ್ಗಾ ಬ್ಯೂಟಿ ಪಾರ್ಲರ್ ನಲ್ಲಿ ವಿನೂತನ ಮಾದರಿಯ ಮದುವೆಯ ಮೇಕಪ್ ಐಟಂ ಹಾಗೂ ದಿಬ್ಬಣದ ಕೊಡೆಗಳು ಬಾಡಿಗೆ ಲಭ್ಯ. ಮದುರಂಗಿ, ಮದುವೆ ಹಾಗೂ ಫೋಟೋ ಶೂಟ್ ಗಳನ್ನು ಆಕರ್ಷಣಿಯವಾಗಿಸಲು ಸುಂದರವಾದ ಕೊಡೆಗಳಿವೆ ಎಂದು ಮಾಲಕರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ 9187130127 ಕರೆ ಮಾಡಿ.

ವಳಲಂಬೆ : ಬಾಲವಿಕಾಸ ಸಮಿತಿ ಸಭೆ – ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಟಿಫನ್ ಬಾಕ್ಸ್ ಕೊಡುಗೆ

ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಸಭೆ ಏ.07 ರಂದು ನಡೆಯಿತು. ಈ ಸಂದರ್ಭದಲ್ಲಿ ಇತ್ತೀಚೆಗೆ ಅಗಲಿದ ಅಂಗನವಾಡಿಯ ಹಿರಿಯ ವಿದ್ಯಾರ್ಥಿ ಜಯರಾಜ್ ಸ್ಮರಣಾರ್ಥ ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಟಿಫನ್ ಬಾಕ್ಸ್ ವಿತರಿಸಲಾಯಿತು. ಸಭೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಸ್ವಾತಿ ಪ್ರಸಾದ್ ಭಟ್,...

ಏ.09ರಂದು ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟ ; ಫಲಿತಾಂಶ ಪರಿಶೀಲಿಸುವುದು ಹೇಗೆ ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ವಿಧಾನಸಭಾ ಉಪಚುನಾವಣೆಗಳ ನೀತಿಸಂಹಿತೆ ಹಾಗೂ ಕೊನೆ ಕ್ಷಣದಲ್ಲಿ ಉಂಟಾದ ತಾಂತ್ರಿಕ ತೊಂದರೆಯಿಂದಾಗಿ ಇಂದು(ಏ.07) ಪ್ರಕಟವಾಗಬೇಕಿದ್ದ ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್ 09ರಂದು ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ...

ಬ್ರಹ್ಮಕಲಶೋತ್ಸವದ ಸಂಭ್ರಮಕ್ಕೆ ಸಿದ್ಧವಾಗುತ್ತಿದೆ ನಿಡ್ವಾಳ ಕ್ಷೇತ್ರ – 4 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣ ; ಎ.24ರಿಂದ ಮೇ.03ರ ತನಕ ಕ್ಷೇತ್ರದಲ್ಲಿ ನಡೆಯಲಿದೆ ಉತ್ಸವ

ಭಕ್ತರ ಸಕಲ ಇಷ್ಟಾರ್ಥಗಳನ್ನು ಪೂರೈಸುವ ಮಹಿಮಾತ್ಮಕ ಕ್ಷೇತ್ರ ನಿಡ್ವಾಳದ ಮಹಾವಿಷ್ಣು ದೇವಸ್ಥಾನವು ಬ್ರಹ್ಮಕಲಶೋತ್ಸವಕ್ಕೆ ಸಿದ್ಧವಾಗುತ್ತಿದೆ. ಎ.24ರಿಂದ ಮೇ.03ರ ತನಕ ಕ್ಷೇತ್ರದಲ್ಲಿ ಉತ್ಸವ ನಡೆಯಲಿದೆ. ಇದೀಗ ಸಕಲ ಭಕ್ತರ ಸಹಕಾರದಲ್ಲಿ ಶ್ರೀ ದೇವಳದ ಜೀರ್ಣೋದ್ಧಾರದ ಅಂತಿಮ ಕೆಲಸ ಕಾರ್ಯಗಳು ಭರದಿಂದ ನಡೆಯುತ್ತಿದೆ. ಸುಳ್ಯ ತಾಲೂಕು, ಐವತ್ತೊಕ್ಲು ಗ್ರಾಮದ ನಿಡ್ವಾಳ ಎಂಬಲ್ಲಿ ಪ್ರಕೃತಿಯ ಮಡಿಲಲ್ಲಿ ಶ್ರೀ ಮಹಾವಿಷ್ಣು ದೇವಸ್ಥಾನವು ನೂರಾರು...

ಕುಮಾರ್ ಪೆರ್ನಾಜೆ ಸೌಮ್ಯ ದಂಪತಿ “ಜನತಾ ನ್ಯೂಸ್ ಅವಾರ್ಡ್ಸ್-2026”ಕ್ಕೆ ಆಯ್ಕೆ

ಪೆರ್ನಾಜೆ : "ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲು “ಜನತಾ ಅವಾರ್ಡ್ಸ್-2026” ಕಾರ್ಯಕ್ರಮವನ್ನು ಬೆಂಗಳೂರಿನ ನಾಗರಭಾವಿ KLE ಲಾ-ಕಾಲೇಜಿನ ಸಮೀಪ ಅರಮನೆ ವೆನ್ಯೂವಿನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇಲ್ಲಿ ಜೇನು ಗಡ್ಡದಾರಿ ,ಕೃಷಿ ಹವ್ಯಾಸಿ ಬರಹಗಾರ, ಕೃಷಿ ಸಂಶೋಧನೆ ಕಲಾ ನಿರ್ದೇಶಕರು, ಪೆರ್ನಾಜೆ ಪ್ರಶಸ್ತಿಯನ್ನು ನೀಡಿ...

ಐವರ್ನಾಡು : ಕಸ ಎಸೆದ ಪ್ರಕರಣಕ್ಕೆ ಮತ್ತೆ ಮರುಜೀವ – 6 ತಿಂಗಳ ಬಳಿಕ ಕೇಸು ದಾಖಲು – ಅಯೋಧ್ಯಾ ಮೆನ್ಸ್ ವೇರ್ ವಿರುದ್ಧ ಎಫ್.ಐ.ಆರ್ – ಅರೋಪ ನಿರಾಕರಿಸಿದ ಅಂಗಡಿ ಮಾಲಕ ಅಕ್ಷಯ್ ರಜಪೂತ್

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಪ್ರಕರಣಕ್ಕೆ ಇದೀಗ ಮತ್ತೆ ಮರುಜೀವ ಬಂದಿದ್ದು, ಆರೋಪದ ಮೇರೆಗೆ ಸುಳ್ಯದ ಅಯೋಧ್ಯಾ ಮೆನ್ಸ್ ವೇರ್ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾರೆ - ಸುಳ್ಯ ರಸ್ತೆಯ ಬೇಂಗಮಲೆ ಎಂಬಲ್ಲಿ 2025ರ ಅಕ್ಟೋಬರ್ 15 ರಂದು ರಸ್ತೆಯ ಬದಿ...
Loading posts...

All posts loaded

No more posts

error: Content is protected !!