ಕುಕ್ಕುಜಡ್ಕ : ಎರಡನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತ್ಯು

ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್‌ ಕೆ.ಸಿ. (7) ಮೃತ ಬಾಲಕ. ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನು. ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು. ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ...

ಗುತ್ತಿಗಾರು : ಗಾನ ಯಾನ – ಗೀತ ಗಾಯನ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ , ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ನಡೆಯುತ್ತಿರುವ ಸಾಹಿತ್ಯ ಸಂಭ್ರಮ 2022 ರ ಅಂಗವಾಗಿ ಭಾವನ ಸುಗಮ ಸಂಗೀತ ಬಳಗ ಸುಳ್ಯ ಇವರ ಸಹಯೋಗದೊಂದಿಗೆ ಗುತ್ತಿಗಾರು ಸರಕಾರಿ ಪದವಿ ಪೂರ್ವ ವಿದ್ಯಾಲಯದಲ್ಲಿ ಗಾನ ಯಾನ -...
Ad Widget

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆ ಹಚ್ಚಿದವರಿಗೆ 14 ಲಕ್ಷ ಬಹುಮಾನ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪ್ರಕರಣವು ದೇಶದದ್ಯಾಂತ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಎನ್.ಐ.ಎ ಅಧಿಕಾರಿಗಳು ಒಟ್ಟು 14 ಲಕ್ಷ ಹಣವನ್ನು ಘೋಷಣೆ ಮಾಡಿದ್ದಾರೆ.ಪ್ರವೀಣ್ ನೆಟ್ಟಾರು ಪ್ರಕರಣದ ಆರೋಪಿಗಳ ಪತ್ತೆಗೆ ಸಹಕಾರಿಯಾಗಲು ಎನ್.ಐ.ಎ ಅಧಿಕಾರಿಗಳು ಪುತ್ತೂರು, ಸುಳ್ಯ, ಬೆಳ್ಳಾರೆಯಲ್ಲಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳು...

ಉಬರಡ್ಕ : ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಕೊಟ್ಟಿಗೆ

ಉಬರಡ್ಕ ಗ್ರಾಮದ ಮಾಣಿಬೆಟ್ಟು ನಿವಾಸಿ ದಿ.ಕೃಷ್ಣ ಮಣಿಯಾಣಿ ಯವರ ಪತ್ನಿ ರತ್ನಾವತಿ ಯವರ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋದ ಘಟನೆ ಇಂದು ನಡೆದಿದೆ. ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಿ ಮನೆಗೆ ಬೆಂಕಿ ತಗಲುವುದನ್ನು ತಪ್ಪಿಸಲಾಯಿತು. ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ, ಸೌದೆ, ಇನ್ನೀತರ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ.

ಗುತ್ತಿಗಾರು : ಅಡಿಕೆ ಎಲೆ ಚುಕ್ಕಿ ರೋಗ ಹಾಗೂ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ

ತೋಟಗಾರಿಕಾ ಇಲಾಖೆ, ಐಸಿಸಿಒಎ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಸಹಯೋಗದೊಂದಿಗೆ ಅಡಿಕೆ ಎಲೆಚುಕ್ಕಿ ರೋಗ ಹಾಗೂ ರೋಗ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮವು ನ.5 ರಂದು ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಗುತ್ತಿಗಾರು ಸಹಕಾರಿ ಸಂಘದ ದೀನ್‌ ದಯಾಳ್‌ ರೈತ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಿಪಿಸಿಆರ್‌ಐ ವಿಜ್ಞಾನಿ...

ಸುಳ್ಯ : ಮಹಿಳಾ ಮಂಡಲದ ಒಕ್ಕೂಟದ ವತಿಯಿಂದ ಕನ್ನಡ ರಾಜ್ಯೋತ್ಸವ

ಸುಳ್ಯ ತಾಲೂಕು ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ತಾಲೂಕು ಮಹಿಳಾ ಒಕ್ಕೂಟದ ಸಭಾಂಗಣದಲ್ಲಿ ಅಚರಿಸಲಾಯಿತು. ಅಧ್ಯಕ್ಷರಾಗಿ ಒಕ್ಕೂಟದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತಿನ ಮಾಜಿ ಕಾರ್ಯದರ್ಶಿ ಮಹಾಲಕ್ಷ್ಮಿ ಕೊರಬಡ್ಕ, ಜಿಲ್ಲಾ ಮಹಿಳಾ ಖಜಾಂಜಿ ಚಂದ್ರಾಕ್ಷಿ ಜೆ ರೈ, ಹಾಗೂ ಜಿಲ್ಲಾ ಮಹಿಳಾ ಒಕ್ಕೂಟದ ಗೌರವಧ್ಯಕ್ಷೆ...

ಕೆವಿಜಿ ಐಪಿಎಸ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಳ್ಯದ ಕೆವಿಜಿ ಐಪಿಎಸ್ ನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನ.2 ರಂದು ಆಚರಿಸಲಾಯಿತು. ಪ್ರಾಂಶುಪಾಲರಾದ ಅರುಣ್ ಕುಮಾರ್, ಉಪ ಪ್ರಾಂಶುಪಾಲರಾದ ಶಿಲ್ಪಾ, ಶಿಕ್ಷಕಿ ರೇಣುಕಾ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಂದ ನೃತ್ಯ, ನಾಟಕ ಹಾಡು, ಭಾಷಣ ಹಾಗೂ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಡೆಯಿತು. ಎಲ್ಲಾ ಸಹಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು. ನಾಡಗೀತೆಯೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.

ಫೊಟೋಗ್ರಾಫರ್ಸ್ ಅಸೋಸಿಯೇಷನ್‌ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮಂಗಳೂರಿನಲ್ಲಿ ನಡೆದ ೬೭ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿಛಾಯಾಗ್ರಾಹಕರ ಹಿತರಕ್ಷಣೆಗಾಗಿ ಕೆಲಸ ಮಾಡುವುದರ ಜೊತೆಗೆ ಸಾಮಾಜಿಕವಾಗಿಯೂ ಹಲವಾರು ಕೆಲಸಗಳನ್ನು ನಡೆಸಿಕೊಂಡು ಬರುತ್ತಿರುವ ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಷನ್ ಸಂಘಟನೆಗೆ ನ.1ರಂದು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್...

ನೆಹರು ಮೆಮೊರಿಯಲ್ ಕಾಲೇಜಿನ ವತಿಯಿಂದ ಒಂದು ದಿನದ ಅಧ್ಯಯನ ಭೇಟಿ ಕಾರ್ಯಕ್ರಮ

ನೆಹರು ಮೆಮೊರಿಯಲ್ ಕಾಲೇಜು, ಸುಳ್ಯ ಸಮಾಜಕಾರ್ಯ ವಿಭಾಗ ಇದರ ವತಿಯಿಂದ ಒಂದು ದಿನದ ಅಧ್ಯಯನ ಭೇಟಿಯನ್ನು ಗ್ರಾಮೀಣ ಅಭಿವೃದ್ಧಿ ಕೇಂದ್ರ ಕೊಡಗು, ಮತ್ತು ಸ್ವಸ್ಥ ಪುನರ್ವಸತಿ ಕೇಂದ್ರ ಶುಂಠಿಕೊಪ್ಪ ಇಲ್ಲಿ ಕೈಗೊಳ್ಳಲಾಯಿತು . ಗ್ರಾಮೀಣ ಅಭಿವೃದ್ಧಿ ಕೇಂದ್ರ ಕೊಡಗು ಇಲ್ಲಿಯ ಸಂಯೋಜಕರಾಗಿರುವ ರಾಯ್ ಡೆವಿಡ್ ಇವರು ಆದಿವಾಸಿ ಜನಾಂಗದ ಜೀವನಶೈಲಿ ಕಾರ್ಯ ಚಟುವಟಿಕೆ ಬಗ್ಗೆ ಹಾಗೂ...

ಗುತ್ತಿಗಾರು : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಮಾಧವ ಎರ್ದಡ್ಕ ಪುನರಾಯ್ಕೆ

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ಇದರ ಅಧ್ಯಕ್ಷರಾಗಿ ಮಾಧವ ಎರ್ದಡ್ಕ ಇವರನ್ನು ಪುನರಾಯ್ಕೆ ಮಾಡಲಾಯಿತು. ಪ್ರದಾನ ಕಾರ್ಯದರ್ಶಿ ಯಾಗಿ ಲೋಹಿತ್ ಚೈಪೆ, ಕೋಶಾಧಿಕಾರಿ ಯಾಗಿ ವಿನ್ಯಾಸ್ ಕೊಚ್ಚಿ ಇವರನ್ನು ಆಯ್ಕೆ ಮಾಡಲಾಯಿತು.
Loading posts...

All posts loaded

No more posts

error: Content is protected !!