- Tuesday
- August 25th, 2026
ಐವರ್ನಾಡಿನ ಕೃಪಾ ಮಡ್ತಿಲ ಕಾಂಪ್ಲೆಕ್ಸ್ ನಲ್ಲಿ ಶ್ರೀಮತಿ ವಿದ್ಯಾ ಸರವಣ, ಬಾಂಜಿಕೋಡಿಯವರು ಪ್ರಾರಂಭಿಸಿರುವ ಕರ್ನಾಟಕ ಸರ್ಕಾರದ ಇ-ಆಡಳಿತದ ಇಲಾಖೆಯಡಿಯಲ್ಲಿ ಕಾರ್ಯಾಚರಿಸುವ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಉದ್ಘಾಟಿಸಿದರು.
ಅಮರ ಸುಳ್ಯ ಕ್ರಾಂತಿಯ ಕುರಿತು ದೇಶದೆಲ್ಲೆಡೆ ಅರಿವು ಮೂಡಿಸಲು ಹಮ್ಮಿಕೊಂಡಿರುವ 'ಟೀಂ ಸ್ಕ್ರೂ ರೈಡರ್ಸ್' ಅವರ ಬೈಕ್ ರ್ಯಾಲಿಗೆ ಸೆಪ್ಟೆಂಬರ್ 17ರಂದು ಮಂಗಳೂರಿನ ತುಳು ಭವನದಲ್ಲಿ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್ ಅವರಿಂದ ಚಾಲನೆ ಮಾಡಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ ಲೇಖಕ ಶ್ರೀ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರ...
ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯದವರು ಕೊಡಮಾಡಿದ "ಕನ್ನಡ ಪಯಸ್ವಿನಿ ಪ್ರಶಸ್ತಿ - 22" ಪುರಸ್ಕೃತರಾದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರಿಗೆ ಅಭಿನಂದನಾ ಸಮಾರಂಭವನ್ನು ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಫಾದರ್ ವಿಕ್ಟರ್ ಡಿ'ಸೋಜರವರು ಕಾರ್ಯಕ್ರಮದ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತು ಇಲ್ಲಿಯ ವಿದ್ಯಾರ್ಥಿಗಳಿಗೆ ಬೆಳ್ಳಾರೆ ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ ಇದರ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಿಸುವ "ಬ್ಯಾಗ್ ಆಫ್ ಜಾಯ್” ಕಾರ್ಯಕ್ರಮ ಸೆ.14 ರಂದು ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಹರೀಶ್ ರವರು ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆಯವರು ಕಾರ್ಯಕ್ರಮ ಉದ್ಘಾಟಿಸಿ...
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವುಗಳ ಸಹಯೋಗದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ ಸುಳ್ಯ ತಾಲೂಕಿನ ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಸೆ.14 ರಂದು ಮಳೆ ನೀರು ಕೊಯ್ಲು ಘಟಕ ಮತ್ತು ಬೂದು ನೀರು ನಿರ್ವಹಣೆ ಸೌಲಭ್ಯ ಕುರಿತು ಪ್ರೇರೇಪಣಾ...
ಐವರ್ನಾಡು ಗ್ರಾಮ ಪಂಚಾಯತ್ ನ 2021-22 ನೇ ಸಾಲಿನ ಜಮಾಬಂಧಿ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ ಅವರ ಸಭಾಧ್ಯಕ್ಷತೆಯಲ್ಲಿ ಸೆ.14 ರಂದು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಿತು.ಪುತ್ತೂರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಕೃಷ್ಣ ಬಿ. ನೋಡೆಲ್ ಅಧಿಕಾರಿಯಾಗಿ ಜಮಾಬಂಧಿ ನಡೆಸಿದರು. ಪಂಚಾಯತ್ ಸಿಬ್ಬಂದಿ ಪುರುಷೋತ್ತಮರವರು ವರದಿ ಮಂಡಿದರು....
ಉತ್ತಮ ಶಿಕ್ಷಣದಿಂದ ಅಪರಾಧ ನಿಯಂತ್ರಣ ಸಾಧ್ಯ : ಸುಹಾಸ್ ಎಸ್ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು ಸಮಾಜದಲ್ಲಿ ಅಪರಾಧ ಪ್ರಕರಣಗಳು ನಿಯಂತ್ರಣಕ್ಕೆ ಬರುವುದಿಲ್ಲ ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಸುಹಾಸ್ ಎಸ್ ತಿಳಿಸಿದ್ದಾರೆ. ವಿದ್ಯಾರ್ಥಿಗಳ ದುಶ್ಚಟಗಳಿಂದ ದೂರವಿದ್ದು, ಸಾಮಾಜಿಕ ಜಾಲತಾಣಗಳನ್ನು ಎಚ್ಚರಿಕೆಯಿಂದ ಬಳಸಬೇಕು ಎಂದು ಸುಹಾಸ್ ಹೇಳಿದ್ದಾರೆ. ಜ್ಞಾನದೀಪ ಇಂಟರಾಕ್ಟ್ ಕ್ಲಬ್ ಅಧ್ಯಕ್ಷ ಚಂದನ್ ಅಧಕ್ಷತೆ...
ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಯ 2021-22 ನೇ ಸಾಲಿನ ವಾರ್ಷಿಕ ಮಹಾಸಭೆಯು ಕೊಡಿಯಾಲಬೈಲಿನ ಗೌಡ ಸಮುದಾಯ ಭವನದಲ್ಲಿ ಸೆ.17 ರಂದು ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ.ಸಿ ಜಯರಾಮ ವಹಿಸಿ ಸಂಘದ ಖರ್ಚು ವೆಚ್ಚದ ಮಾಹಿತಿಯನ್ನು ತಿಳಿಸಿದರು.ಈ ಬಾರಿ ಸಂಘವು 14,875 ಸದಸ್ಯರಿಂದ 3.63ಕೋಟಿ ಪಾಲು ಬಂಡವಾಳ ಹಾಗೂ 127.34 ಕೋಟಿ...
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಪುತ್ತೂರಿನ ಪ್ರಜ್ಞಾ ಆಶ್ರಮದಲ್ಲಿ ವಿಕಲಚೇತನರಿಗೆ ಮೋದಿ ಅಭಿಮಾನಿಗಳಿಂದ ಹಣ್ಣು ಹಂಪಲು ಹಾಗೂ ಸಿಹಿತಿಂಡಿ ವಿತರಣೆ ನಡೆಯಿತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇಲ್ಲಿ ಸೆ.16 ರಂದು ಪೋಷಣ್ ಅಭಿಯಾನ್ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ತರಕಾರಿ, ಹಣ್ಣುಗಳು, ಧಾನ್ಯಗಳು, ಸೊಪ್ಪು ತರಕಾರಿಗಳು, ಸಿರಿಧಾನ್ಯಗಳು ಮುಂತಾದುವುಗಳನ್ನು ತಂದಿದ್ದರು. ನಂತರ ಶಿಕ್ಷಕರ ನೆರವಿನಿಂದ ಅವುಗಳನ್ನು ಪ್ರೊಟೀನ್, ಕಾರ್ಬೋಹೈಡ್ರೇಟ್, ಲಿಪಿಡ್ಗಳು, ಹಾಗೂ ಖನಿಜ ಮತ್ತು ಲವಣಾಂಶಗಳೆಂದು ತರಕಾರಿಗಳನ್ನು ವಿಂಗಡಿಸಿದರು. ನಂತರ ಸಹ ಶಿಕ್ಷಕಿಯಾದ ಶ್ರೀಮತಿ ನಯನ ಕೆ...
Loading posts...
All posts loaded
No more posts
