ಬೆಳ್ಳಾರೆ ಜೇಸಿ ಸಪ್ತಾಹದ ಅಂಗವಾಗಿ 6 ದಿನ ಕೋವಿಡ್ ಬೂಸ್ಟರ್ ಲಸಿಕೆ ಕಾರ್ಯಕ್ರಮ

ಬೆಳ್ಳಾರೆ ಜೇಸಿ ಸಪ್ತಾಹದ ಅಂಗವಾಗಿ 6 ದಿನ ಕಳಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ಬೂಸ್ಟರ್ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಶ್ರೀ ಪ್ರಶಾಂತ ಕುಮಾರ್ ಕಿಲ೦ಗೊಡಿ ಭಾಗವಹಿಸಿದರು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ಬೇಬಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕಳಂಜದ ಶ್ರೀಮತಿ ಕೆ ಸಿ...

ದುಗ್ಗಲಡ್ಕ: ಶ್ರೀ ದುಗ್ಗಲಾಯ ಮಕ್ಕಳ ಯಕ್ಷಗಾನ ಕಲಾ ಸಂಘದ ವಾರ್ಷಿಕ ಮಹಾಸಭೆ

3ನೇ ವರ್ಷದ ಯಕ್ಷಗಾನ ನಾಟ್ಯ ತರಗತಿ ಆರಂಭ ದುಗ್ಗಲಡ್ಕದ ಶ್ರೀ ದುಗ್ಗಲಾಯ ಮಕ್ಕಳ ಯಕ್ಷಗಾನ ಕಲಾ ಸಂಘದ ವಾರ್ಷಿಕ ಮಹಾಸಭೆ ಮತ್ತು 3 ನೇ ವರ್ಷದ ಯಕ್ಷಗಾನ ನಾಟ್ಯ ತರಗತಿ ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸೆ.11ರಂದು ಆರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾ ಸಂಘದ ಸಂಚಾಲಕ, ಯಕ್ಷಗಾನ ನಾಟ್ಯಗುರು ಬಾಲಕೃಷ್ಣ ನಾಯರ್ ನೀರಬಿದಿರೆ ವಹಿಸಿದ್ದರು. ದುಗ್ಗಲಡ್ಕದ ಮಿತ್ರ...
Ad Widget

ಮಹಶಿರ್ ಮತ್ಸ್ಯ ರೈತ ಉತ್ಪಾದಕ ಮಂಡಳಿ ವತಿಯಿಂದ ಮೀನು ಮರಿಗಳ ವಿತರಣೆ

ಮಹಶಿರ್ ಮತ್ಸ್ಯ ರೈತ ಉತ್ಪಾದಕರ ಮಂಡಳಿ ಸುಳ್ಯ( FPO)ಇದರ ವತಿಯಿಂದ ಮೀನು ಸಾಕಾಣಿಕೆ ರೈತರಿಗೆ 60,000 ಮೀನುಮರಿ ಗಳನ್ನು ವಿತರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಮಹೇಶ್ ಕುಮಾರ್ ಮೇನಾಲ ಜಾಗೂ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿಯವರು ಮೀನು ಸಾಕಣೆಯ ಅರ್ಹ ರೈತರಿಗೆ ಮೀನು ಮರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಹಶಿರ್ ಮತ್ಸ್ಯ...

ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಸೆ. 10 ರಂದು ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.ಮುಖ್ಯ ಅತಿಥಿಗಳಾಗಿ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲರವರು ಭಾಗವಹಿಸಿ ಶುಭ ಹಾರೈಸಿದರು. ನಿಕಟಪೂರ್ವ ಅಧ್ಯಕ್ಷ ಆನಂದ ಪೂಜಾರಿ ವೇದಿಕೆಯಲ್ಲಿದ್ದರು.ಈ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಯೋಗೀಶ್ ಚಿದ್ಗಲ್ಲು, ಮಾಯಿಲಪ್ಪ, ರೇವತಿ ಕೊಡಿಪ್ಪಾಡಿ ಅವರನ್ನು ಲಯನ್ಸ್ ಕ್ಲಬ್ ವತಿಯಿಂದ...

ಕೊಲ್ಲಮೊಗ್ರ :- ಗ್ರಾಮ ನೈರ್ಮಲ್ಯ ಯೋಜನೆಯ ಸಮೀಕ್ಷೆ

ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವರುಗಳ ಸಹಯೋಗದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ನೈರ್ಮಲ್ಯ ಯೋಜನೆಯನ್ನು ಗ್ರಾಮೀಣ ಸಹಭಾಗಿತ್ವ ಸಮೀಕ್ಷೆಯ ಮೂಲಕ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ಚಾಂತಾಳ,ಪಂಚಾಯತ್ ಅಭಿವೃದ್ಧಿ ಅಧಿಕಾರಿ...

ಶಿಕ್ಷಣ ಸಂಪನ್ಮೂಲ ಕೇಂದ್ರ ಸುಳ್ಯ ತಾಲೂಕು ಸಮಿತಿ ಮಹಾಸಭೆ, ನೂತನ ಸಮಿತಿ ರಚನೆ-ಅಧ್ಯಕ್ಷರಾಗಿ ಶಂಕರ್ ಪೆರಾಜೆ ಆಯ್ಕೆ

ಸುಳ್ಯ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ ಸಮಿತಿಯ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 9ರಂದು ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಉಪಾಧ್ಯಕ್ಷೆ ಪೂರ್ಣಿಮಾ ವಹಿಸಿದ್ದರು. ಈ ಸಂದರ್ಭದಲ್ಲಿ ಮುಂದಿನ ಸಾಲಿನ ಸಮಿತಿ ರಚಿಸಿ ಅಧ್ಯಕ್ಷರಾಗಿ ಶಂಕರ್ ಪೆರಾಜೆ ರವರನ್ನು, ಕಾರ್ಯದರ್ಶಿಯಾಗಿ ತೀರ್ಥರಾಮ ಉರುಂಡೆ, ಕೋಶಾಧಿಕಾರಿಯಾಗಿ ರಾಜೇಶ್ವರಿ ಕಾಡು ತೋಟ, ಉಪಾಧ್ಯಕ್ಷರಾಗಿ ಪೂರ್ಣಿಮಾ, ಸಂಘಟನಾ ಕಾರ್ಯದರ್ಶಿಯಾಗಿ ಹಸೈನಾರ್...

ನಡುಗಲ್ಲು :- ಸ.ಹಿ.ಪ್ರಾ ಶಾಲೆಯ ಕಬಡ್ಡಿ ಪಂದ್ಯಾವಳಿಯ ಟೀ ಶರ್ಟ್ ಕೊಡುಗೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿನ ಕಬಡ್ಡಿ ಪಂದ್ಯಾವಳಿಯ ವಿದ್ಯಾರ್ಥಿಗಳಿಗೆ ಅಂಬೆಕಲ್ಲು ಕುಶಾಲಪ್ಪ ಗೌಡ ಮತ್ತು ಪ್ರದೀಪ್, ಪ್ರಶಾಂತ್ ಹಾಗೂ ಮನೆಯವರು ಸೆ.12 ರಂದು ಟೀ ಶರ್ಟ್ ಅನ್ನು ಕೊಡುಗೆಯಾಗಿ ನೀಡಿದರು.

ಅರಂತೋಡು : ಯೂತ್ ಜೋಡೊ ಬೂತ್ ಜೋಡೊ ಕಾರ್ಯಕ್ರಮ

ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಅರಂತೋಡು ಗ್ರಾಮದಲ್ಲಿ ಯೂತ್ ಜೋಡೊ ಬೂತ್ ಜೋಡೊ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ "ಭಾರತ್ ಜೋಡೊ" ಯಾತ್ರೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ್, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್...

ಮಿತ್ತಡ್ಕ ಶಾಲೆಯ ಅಭಿವೃದ್ಧಿಗೆ ಅನುದಾನ ನೀಡಲು ಸಚಿವರಿಗೆ ಮನವಿ

ಶತಮಾನದ ಹೊಸ್ತಿಲಿನಲ್ಲಿರುವ ಮರ್ಕಂಜ ಗ್ರಾಮದ ಮಿತ್ತಡ್ಕ ಮರ್ಕಂಜ ಶಾಲಾ‌ ಅಭಿವೃದ್ಧಿಗೆ ರೂ.50 ಲಕ್ಷ ಅನುದಾನ ಒದಗಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ರಿಗೆ ಶಾಲಾ ಪೋಷಕ ಪ್ರತಿನಿಧಿ ಜಗನ್ನಾಥ ಜಯನಗರ ಮನವಿ ಸಲ್ಲಿಸಿದ್ದಾರೆ.ಬೆಂಗಳೂರು ವಿಧಾನಸೌಧದಲ್ಲಿ ಜಗನ್ನಾಥ ಅವರು ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಶಾಲಾ ಅಭಿವೃದ್ಧಿಗೆ ಅನುದಾನ ಮಂಜೂರುಗೊಳಿಸಲು ಮನವಿ ಸಲ್ಲಿಸಿದರು....

ಕೊಲ್ಲಮೊಗ್ರದ ದಾನಿಗಳಿಂದ ಸಂಗ್ರಹಿಸಿದ ರೂ.56 ಸಾವಿರವನ್ನು ಸಮೀಕ್ಷಾಳ ಮನೆಯವರಿಗೆ ಹಸ್ತಾಂತರ

ಎಲುಬು ಕ್ಯಾನ್ಸರ್ ನಿಂದ ಬಳಲುತ್ತಿರುವ ವಳಲಂಬೆಯ ಸಮೀಕ್ಷಾ ಎಂಬ ಬಾಲಕಿಗೆ ಸುಮಾರು 56800 ರೂ ಹಣವನ್ನು ಕೊಲ್ಲಮೊಗ್ರ ಗ್ರಾಮದಿಂದ "ಸಹಾಯ ಹಸ್ತ" ಎಂಬ ವಾಟ್ಸಪ್ ಗ್ರುಪ್ ಮೂಲಕ ಸಂಗ್ರಹವಾಗಿತ್ತು. ಉದಯ ಶಿವಾಲ ಈ ವಾಟ್ಸಪ್ ಗ್ರುಪ್ ನ್ನು ರಚಿಸಿ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ನೆರೆ ಹಾನಿ ಮತ್ತು ಪ್ರವಾಹಕ್ಕೆ ಸಿಲುಕಿ ಚೇತರಿಸಿಕೊಳ್ಳುತ್ತಿರುವ ಈ ಗ್ರಾಮದಲ್ಲಿ...
Loading posts...

All posts loaded

No more posts

error: Content is protected !!