- Sunday
- August 23rd, 2026
ಜೆಡಿಎಸ್ ರಾಜ್ಯ ವಕ್ತಾರರಾಗಿ ಸುಳ್ಯದ ಎಂ.ಬಿ. ಸದಾಶಿವ ನೇಮಕಗೊಂಡಿದ್ದಾರೆ. ಎಂ.ಬಿ. ಸದಾಶಿವರವರು ಹಿರಿಯ ಜೆಡಿಎಸ್ ಮುಖಂಡರಾಗಿದ್ದು ಸುಳ್ಯದಲ್ಲಿ ಉದ್ಯಮಿಯಾಗಿದ್ದಾರೆ. ಈ ಹಿಂದೆ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿಯೂ ಎಂ.ಬಿ. ಸದಾಶಿವರು ಕಾರ್ಯನಿರ್ವಹಿಸಿದ್ದರು. ಹಾಲಿ ಶಾಸಕರು,ಸಂಸದರು, ಮಾಜಿ ಶಾಸಕರುಗಳನ್ನೊಳಗೊಂಡ 62 ಜನರನ್ನು ರಾಜ್ಯ ವಕ್ತಾರರನ್ನಾಗಿ ಜೆಡಿಎಸ್ ರಾಜ್ಯಧ್ಯಕ್ಷ ಸಿ.ಎಂ ಇಬ್ರಾಹಿಂ ಆದೇಶ ಮಾಡಿದ್ದಾರೆ. ಪರಿಚಯ...
ರೋಟರಿ ಕ್ಲಬ್ ಮತ್ತು ರೋಟರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.06 ರಂದು ರೋಟರಿ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಮತ್ತು ರೋಟರಿ ಪದವಿ ಪೂರ್ವ ಕಾಲೇಜು ಮಿತ್ತಡ್ಕ ಇದರ ಸಭಾಭವನದಲ್ಲಿ ಶಿಕ್ಷಕರಿಗೆ ಶಾಲು ಹೊದಿಸಿ ಕಿರುಕಾಣಿಕೆ ನೀಡಿ ಗೌರವಾರ್ಪಣೆ ನಡೆಯಿತು. ಕಾರ್ಯಕ್ರಮದ ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಸ೦ಚಾಲಕರಾದ ರೊ.ಗಿರಿಜಾಶಂಕರ...
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಎಸ್ ಅಂಗಾರ ಅವರು ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದರು ಸುಳ್ಯ ವಿಧಾನ ಸಭಾ ಕ್ಷೇತ್ರದ ಎಲ್ಲಾ ಮನೆಗಳಿಗೂ ವಿದ್ಯುತ್ ಸಂಪರ್ಕದ ವ್ಯವಸ್ಥೆ ಆಗಬೇಕು. ವಿದ್ಯುತ್ ಸಂಪರ್ಕ ಆಗಿಲ್ಲ ಎಂಬ ದೂರು ಬರಬಾರದು. ಅರ್ಜಿ ಬಂದಿಲ್ಲ ಎಂಬ ಸಬೂಬು ನೀಡದೇ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ, ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಕೇರ್ಪಳ, ಶ್ರೀರಾಂಪೇಟೆ, ಡಿಪ್ಪೊ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ, ಕೇನ್ಯ ಮಂಡೆಕೋಲು,ಜಬಳೆ, ಅರಂತೋಡು, ಫೀಡರುಗಳಲ್ಲಿ ಸೆ.10 ರಂದು ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್...
ರಾಜ್ಯ ಪೂರ್ವ ವಿಶ್ವವಿದ್ಯಾಲಯ ಫುಟ್ಬಾಲ್ ತಂಡಕ್ಕೆ ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಅದ್ನಾನ್ ಪಟೇಲ್ ಆಯ್ಕೆಯಾಗಿರುತ್ತಾರೆ ಸುಳ್ಯದಲ್ಲಿ ಇತ್ತೀಚಿಗೆ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಕೂಟದಲ್ಲಿ ಭಾಗವಹಿಸಿದ ಅದ್ನಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ನಂತರ ಮಂಗಳೂರಿನ ಯೇನೆಪೋಯದಲ್ಲಿ ನಡೆದ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಇದೀಗ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರು...
ಸುಳ್ಯ: ಶಾರದಾ ಹೆಣ್ಣುಮಕ್ಕಳ ಪ್ರೌಢಶಾಲೆಯಲ್ಲಿ ಸೆ. 6 ರಂದು ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾವ್ ಭಾಷಾ ಕೌಶಲ್ಯ ತರಬೇತಿ ಕೇಂದ್ರದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯದ ಸಹಯೋಗದಲ್ಲಿ 'ಕನ್ನಡಸಂಭ್ರಮಾಚರಣೆ'ಯಲ್ಲಿ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ ನಡೆಯಿತು.ಸ್ಪರ್ಧೆಯ ಉದ್ಘಾಟನೆಯನ್ನು...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸ್ಥಾಪನೆಯಾಗಿ 25 ವರ್ಷ ಪೂರ್ತಿಯಾಗಿರುವ ಹಿನ್ನಲೆಯಲ್ಲಿ ಬೆಳ್ಳಿ ಹಬ್ಬ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳ್ಳಿ ಹಬ್ಬ ವರ್ಷದಲ್ಲಿ ವರ್ಷ ಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗು ಮುಂದಿನ ಏಪ್ರಿಲ್ ತಿಂಗಳಲ್ಲಿ 3 ದಿನಗಳ ಬೆಳ್ಳಿ...
ಕನಕಮಜಲು: ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸೆ.6ರಂದು ಗ್ರಾಮ ಪಂಚಾಯತ್ ನ 2022-23ನೇ ಸಾಲಿನ ಪ್ರಥಮ ಹಂತದ ಎಂ. ಜಿ. ಎನ್.ಆರ್.ಜಿ.ಎ. ಸಾಮಾಜಿಕ ಪರಿಶೋಧನೆ ವರದಿ ಮಂಡನೆ ಹಾಗೂ 15ನೇ ಹಣಕಾಸು ಯೋಜನೆಯಡಿ 2021-22ನೇ ಸಾಲಿನ ಸಾಮಾಜಿಕ ಪರಿಶೋಧನೆ ವರದಿ ಮಂಡನೆ ಬಗ್ಗೆ ವಿಶೇಷ ಗ್ರಾಮ ಸಭೆ ನಡೆಯಿತು.ಸಭೆಯಲ್ಲಿ ಅಧ್ಯಕ್ಷತೆಯನ್ನು ಗ್ರಾ. ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ...
ಉಬರಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೈಟು ಲೀವ್ ಕೋಟೆ ಫೌಂಡೇಶನ್ ವತಿಯಿಂದ ಕೃಷ್ಣಕುಮಾರ್ ಕಲ್ಚಾರ್ ಮತ್ತು ಸಾಯಿ ರಂಜನ್ ಕಲ್ಚಾರ್ ರವರ ಸಹಕಾರದಿಂದ ಸ್ಕೂಲ್ ಬ್ಯಾಗನ್ನು ಕೊಡುಗೆಯಾಗಿ ನೀಡಲಾಯಿತು.ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಪುರುಷೋತ್ತಮ ಪಾಪುನಡ್ಕ, ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಿದರು. ಕೋಟೆ ಫೌಂಡೇಶನ್ ನ ಪ್ರತಿನಿಧಿ ಪ್ರದೀಪ್ ಹುಳಿಯಡ್ಕ, ಉಬರಡ್ಕ ಗ್ರಾಮ ಪಂಚಾಯತ್...
ಆಕಸ್ಮಿಕವಾಗಿ ಮನೆಗೆ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ವ್ಯಕ್ತಿ ಜೀವಂತ ದಹನವಾಗಿದ ಘಟನೆಯೊಂದು ಇಂದು ಬೆಳಿಗ್ಗೆ ಐವರ್ನಾಡಿನ ಪರ್ಲಿಕಜೆ ಎಂಬಲ್ಲಿ ಸಂಭವಿಸಿದೆ. ಸುಧಾಕರ ಎಂಬವರು ಅನಾರೋಗ್ಯದಿಂದಿದ್ದು ಮನೆಯಲ್ಲಿ ಮಲಗಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಮನೆಯ ಒಂದು ಭಾಗ ಸುಟ್ಟು ಹೋಗಿದೆ. ಮನೆಯೊಳಗಿದ್ದ ಸುಧಾಕರ ಅವರಿಗೆ ಹೊರಹೋಗಲಾಗದೇ ಬೆಂಕಿಗೆ ಆಹುತಿಯಾಗಿದ್ದಾರೆನ್ನಲಾಗಿದೆ. ಈ...
Loading posts...
All posts loaded
No more posts
