ಗೃಹರಕ್ಷಕರನ್ನು ಜೀವರಕ್ಷಕರಾಗಿಸೋಣ:
ಡಾ: ಕಿಶನ್ ರಾವ್ ಬಾಳಿಲ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಇದರ ಸಂಯುಕ್ತ ಆಶ್ರಯದಲ್ಲಿ ಜೀವರಕ್ಷಾ ಟ್ರಸ್ಟ್ ಮತ್ತು ಫಾದರ್ ಮುಲ್ಲರ್ ಆಸ್ಪತ್ರೆ, ಮಂಗಳೂರು ಇವರ ಸಹಯೋಗದೊಂದಿಗೆ ಆ.19 ಶುಕ್ರವಾರದಂದು ಮಂಗಳೂರು ನಗರದ ಮೇರಿಹಿಲ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಗೃಹರಕ್ಷಕರಿಗೆ ಹೃದಯ ಸ್ತಂಭನ ಮರುಪೂರಣ ಕೌಶಲ್ಯ ತರಬೇತಿ ಶಿಬಿರ ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ...

ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಪೆರುವಾಜೆ ಶಾಲಾ ಆವರಣದಲ್ಲಿ ಸಸಿ ನೆಟ್ಟ ಭಾವೈಕ್ಯ ಯುವಕ ಮಂಡಲದ ಸದಸ್ಯರು

ಭಾವೈಕ್ಯ ಯುವಕ ಮಂಡಲದ ಸದಸ್ಯರಿಂದ ಪೆರುವಾಜೆ ಶಾಲಾ ಆವರಣದಲ್ಲಿ ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಇಂದು ಸಸಿ ನೆಡಲಾಯಿತು. ಈ ಸಂದರ್ಭದಲ್ಲಿ ಪೆರುವಾಜೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ತೇಜಪ್ಪ, ಭಾವೈಕ್ಯ ಯುವಕ ಮಂಡಲದ ಸದಸ್ಯರಾದ ರಜನೀಶ್ ಪೆರುವಾಜೆ, ಜಗನ್ನಾಥ ಪೆರುವಾಜೆ, ಹರ್ಷಿತ್ ಪೆರುವಾಜೆ ಉಪಸ್ಥಿತರಿದ್ದರು.
Ad Widget

ಆ.21 ; ಅಮ್ಮ ಚಿಣ್ಣರ ಮನೆ ಹಾಗೂ ಯ.ಸಂ.ಮಂಡಳಿ ವತಿಯಿಂದ ಮುದ್ದು ರಾಧಾ-ಕೃಷ್ಣ ಸ್ಪರ್ಧೆ

ಸುಳ್ಯದ ಅಮ್ಮ ಚಿಣ್ಣರ ಮನೆ ಮತ್ತು ಯುವಜನ ಸಂಯುಕ್ತ ಮಂಡಳಿಯ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ಮುದ್ದು ರಾಧಾ ಸ್ಪರ್ಧೆ ಆ.21 ರಂದು ಯುವಹನ ಸಂಯುಕ್ತ ಮಂಡಳಿಯಯುವ ಸದನ ಸಭಾಂಗಣದಲ್ಲಿ ನಡೆಯಲಿದೆ. ಅಮ್ಮ ಚಿಣ್ಣರ ಮನೆಯ ಹಿರಿಯ ವಿದ್ಯಾರ್ಥಿಗಳಾದ ಮನ್ವಿತ್ ಅಡ್ಪಂಗಾಯ, ಭೂಮಿಕಾ ವಿ. ಕೆ. ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕಾರ್ಯಕ್ರಮದ...

ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ಹಂಶಿತ್ ಕುಮಾರ್ ದ್ವಿತೀಯ ಸ್ಥಾನ

ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಹಂಶಿತ್ ಕುಮಾರ್ ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಕೃಷಿಕ, ಅಡ್ಕಾರ್ ಶರತ್ ಕುಮಾರ್ ಹಾಗೂ ಶೋಭಾ ದಂಪತಿಗಳ ಪುತ್ರ, ಯೋಗ ಶಿಕ್ಷಕರಾದ ಸಂತೋಷ್...

ಪೆರುವಾಜೆ: ಮಂಜುನಾಥ ಭಂಡಾರಿ ಶಾಸಕ ನಿಧಿಯಿಂದ ರೂ 2.50 ಲಕ್ಷ ರೂ ಅನುದಾನ.

ಪೆರುವಾಜೆ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ತನ್ನ ಶಾಸಕ ನಿಧಿಯಿಂದ ರೂ 2.50 ಲಕ್ಷ ಅನುದಾನವನ್ನು ಗ್ರಾಮ ಪಂಚಾಯತ್ ಕಟ್ಟಡ ಅಭಿವೃದ್ಧಿ ಕಾಮಗಾರಿಗೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಪಿ ಸಿ ಜಯರಾಮರವರ ಶಿಫಾರಸಿನ ಮೇರೆಗೆ ನೀಡಿದ್ದಾರೆ ಎಂದು ಪಂಚಾಯತ್ ಅಧ್ಯಕ್ಷ ರಾದ ಜಗನ್ನಾಥ ಪೂಜಾರಿ ಹಾಗೂ ಸದಸ್ಯರಾದ ಸಚಿನ್ ರಾಜ್...

ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾಗಿರುವ ರಸ್ತೆಗಳ ಅಭಿವೃದ್ಧಿಯ ಅನುದಾನಕ್ಕಾಗಿ ಲೋಕೋಪಯೋಗಿ ಇಲಾಖೆ ಸಚಿವ ಸಿ ಸಿ ಪಾಟೀಲ್ ರವರಿಗೆ ಮನವಿ

ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾಗಿರುವ ರಸ್ತೆಗಳ ಅಭಿವೃದ್ಧಿಯ ಅನುದಾನಕ್ಕಾಗಿ ಸಚಿವ ಅಂಗಾರರ ನೇತೃತ್ವದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ ಸಿ ಪಾಟೀಲ್ ರವರಿಗೆ ಮನವಿ ಮಾಡಲಾಗಿದೆ. ಸಚಿವರಾದ ಅಂಗಾರ ರವರ ನೇತೃತ್ವದಲ್ಲಿ ವಿಕಾಸ ಸೌಧದ ಕಛೇರಿಯಲ್ಲಿ ಸಿ ಸಿ ಪಾಟೀಲ್ ರವರನ್ನು ಭೇಟಿಯಾಗಿ ಸುಳ್ಯ ಕ್ಷೇತ್ರದಲ್ಲಿ ವಿವಿಧ ರಸ್ತೆಗಳ ಅಭಿವೃದ್ಧಿಗೆ ಹಾಗೂ ನೆರೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಮೂಲಭೂತ...

ಆ.19 ರಂದು ಕರಿಕ್ಕಳ ದಿಂದ ಪಂಬೆತ್ತಾಡಿಯ ವರೆಗೆ ರಸ್ತೆ ಬದಿಯ ಕಳೆಗಳನ್ನು ತೆಗೆದು ಸ್ವಚ್ಛತಾ ಕಾರ್ಯಕ್ರಮ

ಕಲ್ಮಡ್ಕ ಗ್ರಾಮ ಪಂಚಾಯತ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಪಂಚಶ್ರೀ ಯುವಕ ಮಂಡಲ(ರಿ) ಪಂಬೆತ್ತಾಡಿ ಇದರ ಸಹಯೋಗದೊಂದಿಗೆ ಆ.19 ರಂದು ಕರಿಕ್ಕಳ ದಿಂದ ಪಂಬೆತ್ತಾಡಿಯ ವರೆಗೆ ರಸ್ತೆ ಬದಿಯ ಕಳೆಗಳನ್ನು ತೆಗೆದು ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಲ್ಮಡ್ಕ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಮಹೇಶ್...

ಬೊಳುಬೈಲು : ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ನವಚೇತನ ಯುವಕಮಂಡಲ(ರಿ) ಬೊಳುಬೈಲು ಜಾಲ್ಸೂರು ಸುಳ್ಯ ಇದರ ವತಿಯಿಂದ 28ನೇ ವರುಷದ ಶ್ರೀಕೃಷ್ಣ ಜನ್ಮಾಷ್ಣಮಿಯು ಆ.18ರಂದು ಬೊಳುಬೈಲು ನವಚೇತನ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿವರಾಮ ಗೌಡ ನಡುಬೆಟ್ಟು ನೆರವೇರಿಸಿದರು, ಅಧ್ಯಕ್ಷತೆಯನ್ನು ಯುವಕಮಂಡಲದ ಅಧ್ಯಕ್ಷ ಶಶಿಪ್ರಸಾದ್ ಕಾಟೂರು ವಹಿಸಿದ್ದರು. ಪುರುಷರಿಗೆ‌, ಮಹಿಳೆಯರಿಗೆ, ಮತ್ತು ಮಕ್ಕಳ ವಿವಿದ ಆಟೋಟ ಸ್ವರ್ಧೆಗಳು ನಡೆಯಿತು. 5ವರುಷದ ಕೆಳಗಿನ ಮಕ್ಕಳಿಗೆ ಶ್ರೀಕೃಷ್ಣ...

ಆ.21 ರಂದು ಸುಳ್ಯದಲ್ಲಿ ಅಮೃತ ಸಾಹಿತ್ಯೋತ್ಸವ

ಜಲಶ್ರೀ ಪ್ರತಿಷ್ಠಾನ ಕಡ್ಲಾರು, ಕಿರಣರಂಗ ಅಧ್ಯಯನ ಸಂಸ್ಥೆ ಗುತ್ತಿಗಾರು, ಕಲಾಮಾಯೆ ಏನೆಕಲ್ ಇವುಗಳ ವತಿಯಿಂದ ಆ.21 ರಂದು ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಅಮೃತ ಸಾಹಿತ್ಯೋತ್ಸವ ನಡೆಯಲಿದ್ದು, ಸಾಹಿತ್ಯೋತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸಿ.ಡಿ.ಪಿ.ಓ ನೀರಬಿದಿರೆ ನಾರಾಯಣ ಅವರು ವಹಿಸಿಕೊಳ್ಳಲಿದ್ದು, ನಿವೃತ್ತ ಪ್ರಾಂಶುಪಾಲರಾದ ಬಾಬು ಗೌಡ ಅಚ್ರಪ್ಪಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಆನ್ಲೈನ್ ನಲ್ಲಿ ಈ ಹಿಂದೆ ನಡೆದ...

ಮೇನಾಲ : ದರ್ಗಾ ಬಳಿಯ ವಿವಾದಿತ ಜಾಗದಲ್ಲಿ ಮತ್ತೆ ಗೊಂದಲ – ಪೋಲೀಸ್ ಕಾವಲು

https://youtu.be/Vx6M8CMS-ro ಅಜ್ಜಾವರ ಗ್ರಾಮದ ಮೇನಾಲದಲ್ಲಿ ದರ್ಗಾ ಸಮೀಪವಿರುವ ವಿವಾದಿತ ಜಾಗದಲ್ಲಿ ಮೇನಾಲದ ಕೃಷ್ಣಾಷ್ಟಮಿ ಸಮಿತಿಯವರು ವಾಹನ ಪಾರ್ಕಿಂಗ್ ಗಾಗಿ ಜೆಸಿಬಿಯಲ್ಲಿ ನೆಲ ಸಮತಟ್ಟು ಮಾಡಿದ ವಿಚಾರವಾಗಿ ದರ್ಗಾದವರ ಆಕ್ಷೇಪಕ್ಕೆ ಕಾರಣವಾಗಿ ವಿವಾದ ಕೇಂದ್ರವಾಗಿದ್ದು, ಪೋಲೀಸರು ಹಾಗೂ ಕಂದಾಯ ಇಲಾಖೆಯರು ಸ್ಥಳಕ್ಕೆ ಆಗಮಿಸಿ ಈ ಜಾಗದ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಅಲ್ಲಿಯವರೆಗೆ ಯಥಾಸ್ಥಿತಿ ಕಾಪಾಡಲು ಸೂಚನೆ ನೀಡಿರುವ...
Loading posts...

All posts loaded

No more posts

error: Content is protected !!